<p><strong>ಗುಂಡ್ಲುಪೇಟೆ: </strong>ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದುಕೆರೆ ವಲಯದ ಬಾಚಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಸುಕಿನಲ್ಲಿ ಕಾಡಾನೆ ದಾಳಿಗೆ ರೈತರೊಬ್ಬರು ಬಲಿಯಾಗಿದ್ದಾರೆ.</p>.<p>ಗ್ರಾಮದ ನಿವಾಸಿಚಿಕ್ಕ ಕೂಸೇಗೌಡ (52) ಮೃತಪಟ್ಟಿರುವ ದುರ್ದೈವಿ. ಸೂರ್ಯಕಾಂತಿ ಬೆಳೆಯ ರಕ್ಷಣೆಗಾಗಿ ಕಾವಲು ಕಾಯಲು ಅವರು ಗುರುವಾರ ರಾತ್ರಿ ತಮ್ಮ ಜಮೀನಿಗೆ ತೆರಳಿದ್ದರು.</p>.<p>ಘಟನೆಯಿಂದ ಆಕ್ರೋಶಗೊಂಡ ರೈತರು ಹಾಗೂ ಸ್ಥಳೀಯರು ಅರಣ್ಯ ಇಲಾಖೆ ಹಾಗೂ ಅಧಿಕಾರಿಗಳ ವಿರುದ್ಧ ದಿಢೀರ್ ಪ್ರತಿಭಟನೆ ನಡೆಸಿದರು.</p>.<p>‘ಮೃತರ ಕುಟುಂಬಕ್ಕೆ ₹ 50 ಲಕ್ಷ ಪರಿಹಾರ ಕೊಡಬೇಕು, ಅವರ ಮಗನಿಗೆ ಇಲಾಖೆಯಲ್ಲಿ ಉದ್ಯೋಗ ಕೊಡಿಸಬೇಕು. ಅದುವರೆಗೂ ಶವ ತೆಗೆಯುವುದಿಲ್ಲ’ ಎಂದು ಪಟ್ಟು ಹಿಡಿದರು.</p>.<p>‘ಸೋಲಾರ್ ತಂತಿಬೇಲಿ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಆನೆ ಕಂದಕಗಳು ಮುಚ್ಚಿ ಹೋಗಿವೆ. ಎಲ್ಲ ವನ್ಯಪ್ರಾಣಿಗಳು ಸರಾಗವಾಗಿ ಜಮೀನಿಗೆ ನುಗ್ಗುತ್ತಿವೆ. ಅರಣ್ಯ ಇಲಾಖೆಯ ಸಿಬ್ಬಂದಿಯ ಗಮನಕ್ಕೆ ತಂದರೂ ಕ್ರಮ ಕೈಗೊಳ್ಳುತ್ತಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಸ್ಥಳಕ್ಕೆ ಬಂದ ಬಂಡೀಪುರ ಹುಲಿ ಯೋಜನೆ ನಿರ್ದೇಶಕ ಟಿ.ಬಾಲಚಂದ್ರ ಅವರು, ‘ಇಲಾಖೆಯಿಂದ ಮೃತರ ಕುಟುಂಬಕ್ಕೆ ₹ 5 ಲಕ್ಷ ಹಣವನ್ನು ಪರಿಹಾರವಾಗಿ ನೀಡಲು ಅವಕಾಶ ಇದೆ. ಹೆಚ್ಚಿನ ಪರಿಹಾರ ಮೊತ್ತಕ್ಕೆ ಬೇಡಿಕೆ ಇಟ್ಟು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗುವುದು. ಕುಟುಂಬದ ಸದಸ್ಯರೊಬ್ಬರಿಗೆ ವಿದ್ಯಾರ್ಹತೆ ಆಧಾರದಲ್ಲಿ ತಾತ್ಕಾಲಿಕ ಉದ್ಯೋಗ ನೀಡಲು ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.</p>.<p>ಇದನ್ನು ಒಪ್ಪದ ಪ್ರತಿಭಟನಾಕಾರರು ತಕ್ಷಣವೇ ಪರಿಹಾರ ಮೊತ್ತವನ್ನು ಮೃತ ಕೂಸೇಗೌಡ ಅವರ ಪತ್ನಿ ನಾಗೇಂದ್ರಮ್ಮ ಅವರ ಖಾತೆಗೆ ಹಾಕಬೇಕು ಎಂದು ಪಟ್ಟು ಹಿಡಿದರು.</p>.<p>ಅಂತಿಮವಾಗಿ ಬಾಲಚಂದ್ರ ಅವರು, ‘ನಾಗೇಂದ್ರಮ್ಮ ಅವರಿಗೆ ₹ 5 ಲಕ್ಷ ಹಣವನ್ನು ಸರ್ಕಾರ ಮಂಜೂರು ಮಾಡಿದೆ. ಕುಟುಂಬದ ಒಬ್ಬ ವ್ಯಕ್ತಿಗೆ ದಿನಗೂಲಿ ಆಧಾರದಲ್ಲಿ ಉದ್ಯೋಗಕ್ಕೆ ನೇಮಿಸಲಾಗುವುದು. ಹೆಚ್ಚುವರಿಯಾಗಿ ಇನ್ನೂ ₹ 5 ಲಕ್ಷ ಪರಿಹಾರ ನೀಡುವ ಬಗ್ಗೆ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗುವುದು’ ಎಂದು ಮುಚ್ಚಳಿಕೆ ಬರೆದು ಕೊಟ್ಟರು.</p>.<p>ಸ್ಥಳಕ್ಕೆ ಭೇಟಿ ನೀಡಿದ ಗುಂಡ್ಲುಪೇಟೆ ತಹಶೀಲ್ದಾರ್ ನಂಜುಂಡಯ್ಯ ಮತ್ತು ಕಂದಾಯ ಅಧಿಕಾರಿಗಳು ಹೆಚ್ಚಿನ ಪರಿಹಾರ ನೀಡುವ ಬಗ್ಗೆ ಸರ್ಕಾರದ ಗಮನಸೆಳೆಯಲಾಗುವುದು ಎಂದು ಭರವಸೆ ನೀಡಿದರು.</p>.<p>ಕೂಸೇಗೌಡ ಅವರ ಅಂತಿಮ ಸಂಸ್ಕಾರಕ್ಕಾಗಿ ವಲಯಾರಣ್ಯಾಧಿಕಾರಿ ಮಂಜುನಾಥ್ ಅವರು ₹ 10 ಸಾವಿರ ನೆರವನ್ನೂ ನೀಡಿದರು. ಆ ಬಳಿಕ ರೈತರು ಪ್ರತಿಭಟನೆ ವಾಪಸ್ ಪಡೆದರು.</p>.<p>ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನಟರಾಜ್, ರೈತ ಮುಖಂಡರಾದ ಕುಂದುಕೆರೆ ಸಂಪತ್ತು, ಕಡಬೂರು ಮಂಜುನಾಥ್, ಸೇರಿದಂತೆ ಹಲವರು ಇದ್ದರು.</p>.<p class="Briefhead"><strong>ಚಾಮರಾಜನಗರದಲ್ಲೂ ಪ್ರತಿಭಟನೆ</strong></p>.<p>ಮೃತರ ಕುಟುಂಬಕ್ಕೆ ತಕ್ಷಣವೇ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ರೈತ ಸಂಘದ ಜಿಲ್ಲಾ ಘಟಕದ ಕಾರ್ಯದರ್ಶಿ ಗುರುಪ್ರಸಾದ್ ನೇತೃತ್ವದಲ್ಲಿ ರೈತರು ಚಾಮರಾಜನಗರ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.</p>.<p>‘ಆನೆದಾಳಿಯಲ್ಲಿ ಅಧಿಕಾರಿಗಳು ಮೃತಪಟ್ಟರೆ ₹ 25 ಲಕ್ಷ ಪರಿಹಾರ ನೀಡಲಾಗುತ್ತದೆ. ರೈತರಿಗೆ ₹ 5 ಲಕ್ಷ. ಇದು ಯಾವ ನ್ಯಾಯ? ಅರಣ್ಯ ವೀಕ್ಷಕರು ಹಾಗೂ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡದೆ ಇರುವುದರಿಂದ ಈ ರೀತಿ ಆಗಿದೆ. ಸಂಬಂಧಿಸಿದವರನ್ನು ಮೊದಲು ಅಮಾನತು ಮಾಡಬೇಕು. ತಕ್ಷಣವೇ ಪರಿಹಾರ ಒದಗಿಸಬೇಕು’ ಎಂದು ಆಗ್ರಹಿಸಿದರು.</p>.<p>ಪ್ರತಿಭಟನಾಕಾರರನ್ನು ಮನವೊಲಿಸಲು ಯತ್ನಿಸಿದ ಪ್ರಭಾರ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪಿ.ಶಂಕರ್ ಅವರು, ‘ಮೊದಲು ನಾವೇ ಚೆಕ್ ಮೂಲಕ ಪರಿಹಾರ ನೀಡುತ್ತಿದ್ದೆವು. ಈಗ ಅದು ಸರ್ಕಾರದಿಂದಲೇ ಬರಬೇಕು. ತಾಂತ್ರಿಕ ಸಮಸ್ಯೆಗಳಿದ್ದರೆ ಸ್ವಲ್ಪ ವಿಳಂಬವಾಗುತ್ತದೆ. ಆದರೆ ₹ 5 ಲಕ್ಷ ಪರಿಹಾರ ಸಿಗಲಿದೆ’ ಎಂದರು.</p>.<p>ಹೆಚ್ಚಿನ ಪರಿಹಾರಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಕಳುಹಿಸುವ ಭರವಸೆಯನ್ನೂ ಅವರು ನೀಡಿದರು.</p>.<p>ಆದರೆ, ಇದನ್ನು ಒಪ್ಪದ ಪ್ರತಿಭಟನಾಕಾರರು, ಪರಿಹಾರ ನೀಡುವವರೆಗೆ ಸ್ಥಳದಿಂದ ಕದಲುವುದಿಲ್ಲ ಎಂದು ಪಟ್ಟು ಹಿಡಿದರು.</p>.<p>ಪರಿಹಾರ ಮಂಜೂರು ಆಗಿರುವುದು ದೃಢಪಟ್ಟ ನಂತರ ಪ್ರತಿಭಟನೆಯನ್ನು ವಾಪಸ್ ಪಡೆದರು.</p>.<p>‘ಮೃತ ರೈತರ ಪತ್ನಿಯ ಖಾತೆಗೆ ₹ 5 ಲಕ್ಷ ಜಮೆ ಆಗಿದೆ. ಅವರ ಮಗನಿಗೆ ಇಲಾಖೆಯಲ್ಲಿ ಕೆಲಸ ಕೊಡುವುದಾಗಿಯೂ ಅಧಿಕಾರಿಗಳು ಹೇಳಿದ್ದಾರೆ. ಹೆಚ್ಚಿನ ಪರಿಹಾರಕ್ಕಾಗಿ ಪ್ರಸ್ತಾವನೆ ಕಳುಹಿಸುವ ಭರವಸೆಯನ್ನೂ ನೀಡಿದ್ದಾರೆ. ಹಾಗಾಗಿ ಪ್ರತಿಭಟನೆಯನ್ನು ವಾಪಸ್ ಪಡೆದಿದ್ದೇವೆ’ ಎಂದು ಗುರುಪ್ರಸಾದ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ರೈತ ಮುಖಂಡರಾದ ಪೃಥ್ವಿ, ಮಹೇಶ್, ಶಿವು, ಶಿವಪ್ರಸಾದ್, ಅಶೋಕ್ ಮಹದೇವಸ್ವಾಮಿ, ದೊರೆಸ್ವಾಮಿ, ಶಂಭುಲಿಂಗಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಂಡ್ಲುಪೇಟೆ: </strong>ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದುಕೆರೆ ವಲಯದ ಬಾಚಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಸುಕಿನಲ್ಲಿ ಕಾಡಾನೆ ದಾಳಿಗೆ ರೈತರೊಬ್ಬರು ಬಲಿಯಾಗಿದ್ದಾರೆ.</p>.<p>ಗ್ರಾಮದ ನಿವಾಸಿಚಿಕ್ಕ ಕೂಸೇಗೌಡ (52) ಮೃತಪಟ್ಟಿರುವ ದುರ್ದೈವಿ. ಸೂರ್ಯಕಾಂತಿ ಬೆಳೆಯ ರಕ್ಷಣೆಗಾಗಿ ಕಾವಲು ಕಾಯಲು ಅವರು ಗುರುವಾರ ರಾತ್ರಿ ತಮ್ಮ ಜಮೀನಿಗೆ ತೆರಳಿದ್ದರು.</p>.<p>ಘಟನೆಯಿಂದ ಆಕ್ರೋಶಗೊಂಡ ರೈತರು ಹಾಗೂ ಸ್ಥಳೀಯರು ಅರಣ್ಯ ಇಲಾಖೆ ಹಾಗೂ ಅಧಿಕಾರಿಗಳ ವಿರುದ್ಧ ದಿಢೀರ್ ಪ್ರತಿಭಟನೆ ನಡೆಸಿದರು.</p>.<p>‘ಮೃತರ ಕುಟುಂಬಕ್ಕೆ ₹ 50 ಲಕ್ಷ ಪರಿಹಾರ ಕೊಡಬೇಕು, ಅವರ ಮಗನಿಗೆ ಇಲಾಖೆಯಲ್ಲಿ ಉದ್ಯೋಗ ಕೊಡಿಸಬೇಕು. ಅದುವರೆಗೂ ಶವ ತೆಗೆಯುವುದಿಲ್ಲ’ ಎಂದು ಪಟ್ಟು ಹಿಡಿದರು.</p>.<p>‘ಸೋಲಾರ್ ತಂತಿಬೇಲಿ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಆನೆ ಕಂದಕಗಳು ಮುಚ್ಚಿ ಹೋಗಿವೆ. ಎಲ್ಲ ವನ್ಯಪ್ರಾಣಿಗಳು ಸರಾಗವಾಗಿ ಜಮೀನಿಗೆ ನುಗ್ಗುತ್ತಿವೆ. ಅರಣ್ಯ ಇಲಾಖೆಯ ಸಿಬ್ಬಂದಿಯ ಗಮನಕ್ಕೆ ತಂದರೂ ಕ್ರಮ ಕೈಗೊಳ್ಳುತ್ತಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಸ್ಥಳಕ್ಕೆ ಬಂದ ಬಂಡೀಪುರ ಹುಲಿ ಯೋಜನೆ ನಿರ್ದೇಶಕ ಟಿ.ಬಾಲಚಂದ್ರ ಅವರು, ‘ಇಲಾಖೆಯಿಂದ ಮೃತರ ಕುಟುಂಬಕ್ಕೆ ₹ 5 ಲಕ್ಷ ಹಣವನ್ನು ಪರಿಹಾರವಾಗಿ ನೀಡಲು ಅವಕಾಶ ಇದೆ. ಹೆಚ್ಚಿನ ಪರಿಹಾರ ಮೊತ್ತಕ್ಕೆ ಬೇಡಿಕೆ ಇಟ್ಟು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗುವುದು. ಕುಟುಂಬದ ಸದಸ್ಯರೊಬ್ಬರಿಗೆ ವಿದ್ಯಾರ್ಹತೆ ಆಧಾರದಲ್ಲಿ ತಾತ್ಕಾಲಿಕ ಉದ್ಯೋಗ ನೀಡಲು ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.</p>.<p>ಇದನ್ನು ಒಪ್ಪದ ಪ್ರತಿಭಟನಾಕಾರರು ತಕ್ಷಣವೇ ಪರಿಹಾರ ಮೊತ್ತವನ್ನು ಮೃತ ಕೂಸೇಗೌಡ ಅವರ ಪತ್ನಿ ನಾಗೇಂದ್ರಮ್ಮ ಅವರ ಖಾತೆಗೆ ಹಾಕಬೇಕು ಎಂದು ಪಟ್ಟು ಹಿಡಿದರು.</p>.<p>ಅಂತಿಮವಾಗಿ ಬಾಲಚಂದ್ರ ಅವರು, ‘ನಾಗೇಂದ್ರಮ್ಮ ಅವರಿಗೆ ₹ 5 ಲಕ್ಷ ಹಣವನ್ನು ಸರ್ಕಾರ ಮಂಜೂರು ಮಾಡಿದೆ. ಕುಟುಂಬದ ಒಬ್ಬ ವ್ಯಕ್ತಿಗೆ ದಿನಗೂಲಿ ಆಧಾರದಲ್ಲಿ ಉದ್ಯೋಗಕ್ಕೆ ನೇಮಿಸಲಾಗುವುದು. ಹೆಚ್ಚುವರಿಯಾಗಿ ಇನ್ನೂ ₹ 5 ಲಕ್ಷ ಪರಿಹಾರ ನೀಡುವ ಬಗ್ಗೆ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗುವುದು’ ಎಂದು ಮುಚ್ಚಳಿಕೆ ಬರೆದು ಕೊಟ್ಟರು.</p>.<p>ಸ್ಥಳಕ್ಕೆ ಭೇಟಿ ನೀಡಿದ ಗುಂಡ್ಲುಪೇಟೆ ತಹಶೀಲ್ದಾರ್ ನಂಜುಂಡಯ್ಯ ಮತ್ತು ಕಂದಾಯ ಅಧಿಕಾರಿಗಳು ಹೆಚ್ಚಿನ ಪರಿಹಾರ ನೀಡುವ ಬಗ್ಗೆ ಸರ್ಕಾರದ ಗಮನಸೆಳೆಯಲಾಗುವುದು ಎಂದು ಭರವಸೆ ನೀಡಿದರು.</p>.<p>ಕೂಸೇಗೌಡ ಅವರ ಅಂತಿಮ ಸಂಸ್ಕಾರಕ್ಕಾಗಿ ವಲಯಾರಣ್ಯಾಧಿಕಾರಿ ಮಂಜುನಾಥ್ ಅವರು ₹ 10 ಸಾವಿರ ನೆರವನ್ನೂ ನೀಡಿದರು. ಆ ಬಳಿಕ ರೈತರು ಪ್ರತಿಭಟನೆ ವಾಪಸ್ ಪಡೆದರು.</p>.<p>ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನಟರಾಜ್, ರೈತ ಮುಖಂಡರಾದ ಕುಂದುಕೆರೆ ಸಂಪತ್ತು, ಕಡಬೂರು ಮಂಜುನಾಥ್, ಸೇರಿದಂತೆ ಹಲವರು ಇದ್ದರು.</p>.<p class="Briefhead"><strong>ಚಾಮರಾಜನಗರದಲ್ಲೂ ಪ್ರತಿಭಟನೆ</strong></p>.<p>ಮೃತರ ಕುಟುಂಬಕ್ಕೆ ತಕ್ಷಣವೇ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ರೈತ ಸಂಘದ ಜಿಲ್ಲಾ ಘಟಕದ ಕಾರ್ಯದರ್ಶಿ ಗುರುಪ್ರಸಾದ್ ನೇತೃತ್ವದಲ್ಲಿ ರೈತರು ಚಾಮರಾಜನಗರ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.</p>.<p>‘ಆನೆದಾಳಿಯಲ್ಲಿ ಅಧಿಕಾರಿಗಳು ಮೃತಪಟ್ಟರೆ ₹ 25 ಲಕ್ಷ ಪರಿಹಾರ ನೀಡಲಾಗುತ್ತದೆ. ರೈತರಿಗೆ ₹ 5 ಲಕ್ಷ. ಇದು ಯಾವ ನ್ಯಾಯ? ಅರಣ್ಯ ವೀಕ್ಷಕರು ಹಾಗೂ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡದೆ ಇರುವುದರಿಂದ ಈ ರೀತಿ ಆಗಿದೆ. ಸಂಬಂಧಿಸಿದವರನ್ನು ಮೊದಲು ಅಮಾನತು ಮಾಡಬೇಕು. ತಕ್ಷಣವೇ ಪರಿಹಾರ ಒದಗಿಸಬೇಕು’ ಎಂದು ಆಗ್ರಹಿಸಿದರು.</p>.<p>ಪ್ರತಿಭಟನಾಕಾರರನ್ನು ಮನವೊಲಿಸಲು ಯತ್ನಿಸಿದ ಪ್ರಭಾರ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪಿ.ಶಂಕರ್ ಅವರು, ‘ಮೊದಲು ನಾವೇ ಚೆಕ್ ಮೂಲಕ ಪರಿಹಾರ ನೀಡುತ್ತಿದ್ದೆವು. ಈಗ ಅದು ಸರ್ಕಾರದಿಂದಲೇ ಬರಬೇಕು. ತಾಂತ್ರಿಕ ಸಮಸ್ಯೆಗಳಿದ್ದರೆ ಸ್ವಲ್ಪ ವಿಳಂಬವಾಗುತ್ತದೆ. ಆದರೆ ₹ 5 ಲಕ್ಷ ಪರಿಹಾರ ಸಿಗಲಿದೆ’ ಎಂದರು.</p>.<p>ಹೆಚ್ಚಿನ ಪರಿಹಾರಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಕಳುಹಿಸುವ ಭರವಸೆಯನ್ನೂ ಅವರು ನೀಡಿದರು.</p>.<p>ಆದರೆ, ಇದನ್ನು ಒಪ್ಪದ ಪ್ರತಿಭಟನಾಕಾರರು, ಪರಿಹಾರ ನೀಡುವವರೆಗೆ ಸ್ಥಳದಿಂದ ಕದಲುವುದಿಲ್ಲ ಎಂದು ಪಟ್ಟು ಹಿಡಿದರು.</p>.<p>ಪರಿಹಾರ ಮಂಜೂರು ಆಗಿರುವುದು ದೃಢಪಟ್ಟ ನಂತರ ಪ್ರತಿಭಟನೆಯನ್ನು ವಾಪಸ್ ಪಡೆದರು.</p>.<p>‘ಮೃತ ರೈತರ ಪತ್ನಿಯ ಖಾತೆಗೆ ₹ 5 ಲಕ್ಷ ಜಮೆ ಆಗಿದೆ. ಅವರ ಮಗನಿಗೆ ಇಲಾಖೆಯಲ್ಲಿ ಕೆಲಸ ಕೊಡುವುದಾಗಿಯೂ ಅಧಿಕಾರಿಗಳು ಹೇಳಿದ್ದಾರೆ. ಹೆಚ್ಚಿನ ಪರಿಹಾರಕ್ಕಾಗಿ ಪ್ರಸ್ತಾವನೆ ಕಳುಹಿಸುವ ಭರವಸೆಯನ್ನೂ ನೀಡಿದ್ದಾರೆ. ಹಾಗಾಗಿ ಪ್ರತಿಭಟನೆಯನ್ನು ವಾಪಸ್ ಪಡೆದಿದ್ದೇವೆ’ ಎಂದು ಗುರುಪ್ರಸಾದ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ರೈತ ಮುಖಂಡರಾದ ಪೃಥ್ವಿ, ಮಹೇಶ್, ಶಿವು, ಶಿವಪ್ರಸಾದ್, ಅಶೋಕ್ ಮಹದೇವಸ್ವಾಮಿ, ದೊರೆಸ್ವಾಮಿ, ಶಂಭುಲಿಂಗಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>