<p><strong>ಚಾಮರಾಜನಗರ</strong>: ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಅರಣ್ಯದೊಳಗೆ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಆನೆಯ ಫೋಟೊ ತೆಗೆಯಲು ಹೋಗಿ ದಾಳಿಗೆ ಸಿಲುಕಿ ಪ್ರಾಣಾಪಾಯದಿಂದ ಪಾರಾಗಿದ್ದ ವ್ಯಕ್ತಿ, ಅರಣ್ಯ ನಿಯಮಗಳ ಕುರಿತು ಜಾಗೃತಿ ಮೂಡಿಸಲು ಮುಂದಾಗಿದ್ದಾರೆ.</p>.<p>ಬಂಡೀಪುರ ಹೆದ್ದಾರಿಯಲ್ಲಿ ಸಾಗುವ ವಾಹನಗಳ ಸವಾರರು ರಸ್ತೆಯಲ್ಲಿ ಸಾಗುವಾಗ ಅನುಸರಿಸಬೇಕಾದ ನಿಯಮಗಳು ಹಾಗೂ ಸುರಕ್ಷತಾ ಕ್ರಮಗಳ ಕುರಿತು ಅರಿವು ಮೂಡಿಸಲಿದ್ದಾರೆ. ಅರಣ್ಯ ಪ್ರವೇಶ ದ್ವಾರದ ಬಳಿ ನಿಂತು ಜಾಗೃತಿ ಫಲಕಗಳನ್ನು ಪ್ರದರ್ಶಿಸಲಿದ್ದಾರೆ.</p>.<p>‘ಅರಣ್ಯ ಕಾನೂನುಗಳ ಉಲ್ಲಂಘನೆಗಾಗಿ ಬಸವರಾಜು ಅವರಿಗೆ ಜಾಗೃತಿ ಮೂಡಿಸುವ ಶಿಕ್ಷೆ ನೀಡಿಲ್ಲ. ನಾಗರಿಕರ ಸುರಕ್ಷತೆಗಾಗಿ ಸ್ವಯಂಪ್ರೇರಿತರಾಗಿ ಜಾಗೃತಿ ಮೂಡಿಸುತ್ತಿದ್ದು, ಇಲಾಖೆ ಸಹಕಾರ ನೀಡುತ್ತಿದೆ’ ಎಂದು ಬಂಡೀಪುರ ಡಿಸಿಎಫ್ ಪ್ರಭಾಕರನ್ ಸ್ಪಷ್ಟಪಡಿಸಿದರು.</p>.ಬಂಡೀಪುರ ಅರಣ್ಯದ ವನ್ಯಜೀವಿಗಳ ಜೊತೆ ಹುಚ್ಚು ಸಾಹಸ: ಪ್ರಾಣಕ್ಕೆ ಸಂಚಕಾರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ</strong>: ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಅರಣ್ಯದೊಳಗೆ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಆನೆಯ ಫೋಟೊ ತೆಗೆಯಲು ಹೋಗಿ ದಾಳಿಗೆ ಸಿಲುಕಿ ಪ್ರಾಣಾಪಾಯದಿಂದ ಪಾರಾಗಿದ್ದ ವ್ಯಕ್ತಿ, ಅರಣ್ಯ ನಿಯಮಗಳ ಕುರಿತು ಜಾಗೃತಿ ಮೂಡಿಸಲು ಮುಂದಾಗಿದ್ದಾರೆ.</p>.<p>ಬಂಡೀಪುರ ಹೆದ್ದಾರಿಯಲ್ಲಿ ಸಾಗುವ ವಾಹನಗಳ ಸವಾರರು ರಸ್ತೆಯಲ್ಲಿ ಸಾಗುವಾಗ ಅನುಸರಿಸಬೇಕಾದ ನಿಯಮಗಳು ಹಾಗೂ ಸುರಕ್ಷತಾ ಕ್ರಮಗಳ ಕುರಿತು ಅರಿವು ಮೂಡಿಸಲಿದ್ದಾರೆ. ಅರಣ್ಯ ಪ್ರವೇಶ ದ್ವಾರದ ಬಳಿ ನಿಂತು ಜಾಗೃತಿ ಫಲಕಗಳನ್ನು ಪ್ರದರ್ಶಿಸಲಿದ್ದಾರೆ.</p>.<p>‘ಅರಣ್ಯ ಕಾನೂನುಗಳ ಉಲ್ಲಂಘನೆಗಾಗಿ ಬಸವರಾಜು ಅವರಿಗೆ ಜಾಗೃತಿ ಮೂಡಿಸುವ ಶಿಕ್ಷೆ ನೀಡಿಲ್ಲ. ನಾಗರಿಕರ ಸುರಕ್ಷತೆಗಾಗಿ ಸ್ವಯಂಪ್ರೇರಿತರಾಗಿ ಜಾಗೃತಿ ಮೂಡಿಸುತ್ತಿದ್ದು, ಇಲಾಖೆ ಸಹಕಾರ ನೀಡುತ್ತಿದೆ’ ಎಂದು ಬಂಡೀಪುರ ಡಿಸಿಎಫ್ ಪ್ರಭಾಕರನ್ ಸ್ಪಷ್ಟಪಡಿಸಿದರು.</p>.ಬಂಡೀಪುರ ಅರಣ್ಯದ ವನ್ಯಜೀವಿಗಳ ಜೊತೆ ಹುಚ್ಚು ಸಾಹಸ: ಪ್ರಾಣಕ್ಕೆ ಸಂಚಕಾರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>