ಚಾಮರಾಜನಗರ: ಬಿಳಿಗಿರಿ ರಂಗನಾಥಸ್ವಾಮಿ ದೇವಾಲಯ (ಬಿಆರ್ಟಿ) ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವಲಯದ ಅರಣ್ಯ ವ್ಯಾಪ್ತಿಯ ಯತ್ತೇಗೌಡನದೊಡ್ಡಿಯಲ್ಲಿ ಹೆಣ್ಣಾನೆಯೊಂದರ ಮೃತದೇಹ ಗುರುವಾರ ಪತ್ತೆಯಾಗಿದೆ.
ಆನೆಗೆ 50 ವರ್ಷ ಆಗಿರಬಹುದು ಎಂದು ಅಂದಾಜಿಸಲಾಗಿದೆ. ಇದು ಸಹಜ ಸಾವು ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.
‘ವಯಸ್ಸಿನ ಕಾರಣದಿಂದ ಆನೆ ಸಹಜವಾಗಿಯೇ ಮೃತಪಟ್ಟಿದೆ ಎಂದು ಮರಣೋತ್ತರ ಪರೀಕ್ಷೆಯಲ್ಲಿ ತಿಳಿದು ಬಂದಿದೆ’ ಎಂದು ವಲಯ ಅರಣ್ಯಾಧಿಕಾರಿ ಕಾಂತರಾಜು ಅವರು ‘ಪ್ರಜಾವಾಣಿ’ಗೆ ತಿಳಿಸಿದರು.
ಮರಣೋತ್ತರ ಪರೀಕ್ಷೆಯ ನಂತರ ಅದೇ ಸ್ಥಳದಲ್ಲಿ ಸುಡಲಾಯಿತು.
ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ್ಕುಮಾರ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರಮೇಶ್, ವಲಯ ಅರಣ್ಯ ಅಧಿಕಾರಿ ಕಾಂತರಾಜು ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.