ಈ ಬಗ್ಗೆ ಪ್ರತಿಕ್ರಿಯಿಸಿದ ಮಲೆಮಹದೇಶ್ವರ ವನ್ಯಧಾಮದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಭಾಗ್ಯಲಕ್ಷ್ಮಿ, ‘ಆನೆ ಸುಮಾರು ನಾಲ್ಕೈದು ದಿನಗಳ ಹಿಂದೆ ಮೃತಪಟ್ಟಿರಬಹುದು. ಎರಡು ದಿನದ ಹಿಂದೆ ಗೊತ್ತಾಗಿದೆ. ಮೇಲ್ನೋಟಕ್ಕೆ ಸಹಜ ಸಾವು ಎಂದು ತಿಳಿದು ಬಂದಿದೆ. ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕವಷ್ಟೇ ಸಾವಿಗೆ ನಿಖರ ಕಾರಣ ತಿಳಿಯಲಿದೆ’ ಎಂದು ‘ಪ್ರಜಾವಾಣಿ’ಗೆ ತಿಳಿಸಿದರು.