ಹನೂರು (ಚಾಮರಾಜನಗರ): ಮಲೆ ಮಹದೇಶ್ವರ ವನ್ಯಧಾಮದ ಪಿ.ಜಿ.ಪಾಳ್ಯ ವಲಯದಲ್ಲಿ ವಿದ್ಯುತ್ ಪ್ರವಹಿಸುತ್ತಿದ್ದ ತಂತಿ ಬೇಲಿಯನ್ನು ಸ್ಪರ್ಶಿಸಿ ಗಂಡಾನೆಯೊಂದು ಮೃತಪಟ್ಟಿದೆ.
ಪಿ.ಜಿ.ಪಾಳ್ಯದ ಸಿರಿಗೋಡು ಹತ್ತಿರದ ಕೃಷಿ ಜಮೀನೊಂದರಲ್ಲಿ ಬುಧವಾರ ರಾತ್ರಿ ಈ ಘಟನೆ ನಡೆದಿದೆ. ಮೃತ ಪಟ್ಟಿರುವ ಆನೆಯ ವಯಸ್ಸು 28-30 ವರ್ಷ ಇರಬಹುದು ಎಂದು ಅರಣ್ಯಾಧಿಕಾರಿಗಳು ಅಂದಾಜಿಸಿದ್ದಾರೆ.
ಬೆಳೆ ರಕ್ಷಣೆಗಾಗಿ ರೈತರೊಬ್ಬರು ತಮ್ಮ ಜಮೀನಿಗೆ ತಂತಿಬೇಲಿ ಅಳವಡಿಸಿದ್ದರು. ಅದಕ್ಕೆ ಅಕ್ರಮವಾಗಿ ವಿದ್ಯುತ್ ಸಂಪರ್ಕವನ್ನೂ ನೀಡಲಾಗಿತ್ತು ಎಂದು ಗೊತ್ತಾಗಿದೆ.
ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.