ಮಹದೇಶ್ವರಬೆಟ್ಟ ವನ್ಯಜೀವಿವಲಯದ ನೇರಳೆ ಮರದ ಗುಂಡಿ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದ ಸಿಬ್ಬಂದಿ ಆನೆಯ ಕಳೇಬರ ನೋಡಿದ್ದಾರೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.‘ಆನೆಗೆ 40 ರಿಂದ 50 ವಯಸ್ಸಾಗಿರಬಹುದು. ಮೇಲ್ನೋಟಕ್ಕೆ ಸಹಜ ಸಾವಿನಂತೆ ಕಂಡು ಬರುತ್ತಿದೆ. ಶುಕ್ರವಾರ ಬೆಳಿಗ್ಗೆ ಮರಣೋತ್ತರ ಪರೀಕ್ಷೆ ನಡೆಸಲಾಗುವುದು. ವರದಿ ಬಂದ ಬಳಿಕ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ’ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ವಿ. ಏಡುಕುಂಡಲು ಅವರು ಹೇಳಿದ್ದಾರೆ.