ಬಿಳಿಗಿರಿ ರಂಗನಾಥ ಸ್ವಾಮಿ ಹುಲಿ ರಕ್ಷಿತಾರಣದ ಅಂಚಿನಲ್ಲಿ ವಿದ್ಯುತ್ ಕಂಬಗಳು ಬಾಗಿದ್ದು, ತಂತಿಗಳು ಜೋತು ಬಿದ್ದಿವೆ. ರಾತ್ರಿ ವೇಳೆ ಅರಣ್ಯದಂಚಿನ ಜಮೀನಿನಲ್ಲಿರುವ ರೈತರು ತಮ್ಮ ಜಮೀನಿನ ಸುತ್ತಲೂ ವಿದ್ಯುತ್ ತಂತಿ ಬಿಡುತ್ತಿದ್ದು, ಇದರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅರಣ್ಯಾಧಿಕಾರಿಗಳು, ಸೆಸ್ಕ್ ಅಧಿಕಾರಿಗಳಿಗೆ ಮನವಿ ಮಾಡಿದ್ದರು. ಆದರೆ ಸೆಸ್ಕ್ ಅಧಿಕಾರಿಗಳು ಯಾವುದೇ ಕ್ರಮ ತೆಗೆದುಕೊಂಡಿರಲಿಲ್ಲ ಎಂಬುದು ತಿಳಿದು ಬಂದಿದೆ.