<p><strong>ಗುಂಡ್ಲುಪೇಟೆ</strong>: ಕಾಡಾನೆಯೊಂದು ಪ್ಲಾಸ್ಟಿಕ್ ತಿನ್ನುವ ವಿಡಿಯೊ ತುಣುಕು ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿದೆ.</p>.<p>ಹೆದ್ದಾರಿ ಬದಿಯಲ್ಲಿ ಪ್ರವಾಸಿಗರು ಎಸೆದಿರುವ ಪ್ಲಾಸ್ಟಿಕ್ ಕವರ್ ಅನ್ನು ಆನೆ ಸೊಂಡಿಲಿನಲ್ಲಿ ಹಿಡಿದು ಬಾಯಿಗೆ ಹಾಕಿಕೊಳ್ಳುತ್ತಿರುವ ದೃಶ್ಯ ವಿಡಿಯೊದಲ್ಲಿದೆ.</p>.<p>ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಆದರೆ, ಬಂಡೀಪುರದ ವಿಡಿಯೊ ಇದಲ್ಲ ಎಂದು ಅಧಿಕಾರಿಗಳು 'ಪ್ರಜಾವಾಣಿ'ಗೆ ಸ್ಪಷ್ಟಪಡಿಸಿದ್ದಾರೆ.</p>.<p>ದೃಶ್ಯವನ್ನು ಸೆರೆ ಹಿಡಿದವರು ತಮಿಳು ಭಾಷೆಯಲ್ಲಿ ಮಾತನಾಡುವುದು ವಿಡಿಯೊದಲ್ಲಿ ಸ್ಪಷ್ಟವಾಗಿ ಕೇಳಿಸುತ್ತಿದೆ.</p>.<p>ಈ ಬಗ್ಗೆ 'ಪ್ರಜಾವಾಣಿ'ಗೆ ಪ್ರತಿಕ್ರಿಯಿಸಿದ ಬಂಡೀಪುರ ಹುಲಿಸಂರಕ್ಷಿತ ಪ್ರದೇಶದ ನಿರ್ದೇಶಕ ಡಾ.ರಮೇಶ್ ಕುಮಾರ್, 'ಎರಡು ದಿನಗಳ ಹಿಂದೆಯೇ ಈ ವಿಡಿಯೊ ನೋಡಿದ್ದೇನೆ. ಇದು ನಮ್ಮ ಬಂಡೀಪುರದ್ದಲ್ಲ. ನೆರೆಯ ಮಧುಮಲೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಡೆದಿದೆ' ಎಂದು ಹೇಳಿದರು.</p>.<p><a href="https://www.prajavani.net/karnataka-news/organ-donates-by-rakshitha-bhai-who-died-in-chikkamagaluru-accident-throug-sotto-974156.html" itemprop="url">ಚಿಕ್ಕಮಗಳೂರು: ಅಪಘಾತದಲ್ಲಿಯುವತಿ ರಕ್ಷಿತಾ ನಿಧನ– 9 ಜನರಿಗೆ ಜೀವದಾನ! </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಂಡ್ಲುಪೇಟೆ</strong>: ಕಾಡಾನೆಯೊಂದು ಪ್ಲಾಸ್ಟಿಕ್ ತಿನ್ನುವ ವಿಡಿಯೊ ತುಣುಕು ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿದೆ.</p>.<p>ಹೆದ್ದಾರಿ ಬದಿಯಲ್ಲಿ ಪ್ರವಾಸಿಗರು ಎಸೆದಿರುವ ಪ್ಲಾಸ್ಟಿಕ್ ಕವರ್ ಅನ್ನು ಆನೆ ಸೊಂಡಿಲಿನಲ್ಲಿ ಹಿಡಿದು ಬಾಯಿಗೆ ಹಾಕಿಕೊಳ್ಳುತ್ತಿರುವ ದೃಶ್ಯ ವಿಡಿಯೊದಲ್ಲಿದೆ.</p>.<p>ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಆದರೆ, ಬಂಡೀಪುರದ ವಿಡಿಯೊ ಇದಲ್ಲ ಎಂದು ಅಧಿಕಾರಿಗಳು 'ಪ್ರಜಾವಾಣಿ'ಗೆ ಸ್ಪಷ್ಟಪಡಿಸಿದ್ದಾರೆ.</p>.<p>ದೃಶ್ಯವನ್ನು ಸೆರೆ ಹಿಡಿದವರು ತಮಿಳು ಭಾಷೆಯಲ್ಲಿ ಮಾತನಾಡುವುದು ವಿಡಿಯೊದಲ್ಲಿ ಸ್ಪಷ್ಟವಾಗಿ ಕೇಳಿಸುತ್ತಿದೆ.</p>.<p>ಈ ಬಗ್ಗೆ 'ಪ್ರಜಾವಾಣಿ'ಗೆ ಪ್ರತಿಕ್ರಿಯಿಸಿದ ಬಂಡೀಪುರ ಹುಲಿಸಂರಕ್ಷಿತ ಪ್ರದೇಶದ ನಿರ್ದೇಶಕ ಡಾ.ರಮೇಶ್ ಕುಮಾರ್, 'ಎರಡು ದಿನಗಳ ಹಿಂದೆಯೇ ಈ ವಿಡಿಯೊ ನೋಡಿದ್ದೇನೆ. ಇದು ನಮ್ಮ ಬಂಡೀಪುರದ್ದಲ್ಲ. ನೆರೆಯ ಮಧುಮಲೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಡೆದಿದೆ' ಎಂದು ಹೇಳಿದರು.</p>.<p><a href="https://www.prajavani.net/karnataka-news/organ-donates-by-rakshitha-bhai-who-died-in-chikkamagaluru-accident-throug-sotto-974156.html" itemprop="url">ಚಿಕ್ಕಮಗಳೂರು: ಅಪಘಾತದಲ್ಲಿಯುವತಿ ರಕ್ಷಿತಾ ನಿಧನ– 9 ಜನರಿಗೆ ಜೀವದಾನ! </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>