ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹನೂರು: ಕಂದಕಕ್ಕೆ ಬಿದ್ದಿದ್ದ ಆನೆ ರಕ್ಷಣೆ

Last Updated 26 ಆಗಸ್ಟ್ 2020, 6:41 IST
ಅಕ್ಷರ ಗಾತ್ರ

ಹನೂರು: ಮಲೆಮಹದೇಶ್ವರ ವನ್ಯಧಾಮದಲ್ಲಿ ಕಂದಕಕ್ಕೆ ಬಿದ್ದಿದ್ದ ಆನೆಯನ್ನು ಜೆಸಿಬಿ ಹಾಗೂ ಅಗ್ನಿಶಾಮಕ ಠಾಣೆ ಸಿಬ್ಬಂದಿ ಸಹಾಯದಿಂದ ಸುರಕ್ಷಿತವಾಗಿ ಮೇಲೆತ್ತಿ ಅರಣ್ಯಕ್ಕೆ ಬಿಡಲಾಯಿತು.

ಹನೂರು ಬಫರ್ ವಲಯದ ಕಣಿವೆ ಬೋರೆ ಅರಣ್ಯ ಪ್ರದೇಶದ ಬುಧವಾರ ಮುಂಜಾನೆ ಗಂಡಾನೆಯೊಂದು ಕಂದಕಕ್ಕೆ ಬಿದ್ದು ಹೊರಳಾಡುತ್ತಿರುವ ಬಗ್ಗೆ ಸ್ಥಳೀಯರು ನೀಡಿದ ಮಾಹಿತಿ ಆಧರಿಸಿ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಬೇಟಿ ನೀಡಿ ನೋಡಿದಾಗ ಕಂದಕದೊಳಗೆ ಬಿದ್ದು ಒದ್ದಾಡುತ್ತಿರುವುದು ಕಂಡು ಬಂದಿದೆ.

ಕೂಡಲೇ ಸಿಬ್ಬಂದಿ ಸ್ಥಳಕ್ಕೆ ಜೆಸಿಬಿ ಹಾಗೂ ಅಗ್ನಿಶಾಮಕ ಠಾಣಾ ಸಿಬ್ಬಂದಿ ಕರೆಸಿ ಅವರ ಸಹಾಯದಿಂದ ಆನೆಯನ್ನು ಸುರಕ್ಷಿತವಾಗಿ ಮೇಲೆತ್ತಿ ಮತ್ತೆ ಅರಣ್ಯಕ್ಕೆ ಬಿಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT