<p><strong>ಗುಂಡ್ಲುಪೇಟೆ:</strong> ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಾಕಾನೆ ರೋಹಿತ್ ಪುಂಡಾಟ ನಡೆಸಿದ್ದು ವಾಹನ ಸವಾರರು ಇದರ ಆರ್ಭಟದಿಂದ ಮಂಗಳವಾರ ತೊಂದರೆ ಅನುಭವಿಸಿದರು.</p>.<p>ರಾಂಪುರ ಆನೆ ಶಿಬಿರದಿಂದ ಬಂಡೀಪುರಕ್ಕೆ ವಿಶೇಷ ತರಬೇತಿಗಾಗಿ ಐದು ಆನೆಗಳನ್ನು ಕರೆತರಲಾಗಿತ್ತು. ಬದಲಾದ ಪರಿಸರಕ್ಕೆ ಹೊಂದಿಕೊಳ್ಳದ ರೋಹಿತ್ ಇದ್ದಕ್ಕಿದ್ದಂತೆ ರೊಚ್ಚಿಗೆದ್ದು ಮಾವುತ ವೆಂಕಟೇಶ್ ಮೇಲೆಯೂ ದಾಳಿ ನಡೆಸಿ ಗಾಯಗೊಳಿಸಿದೆ.</p>.<p>ಗಾಯಾಳು ವೆಂಕಟೇಶ್ನನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿದೆ. ಇದು ರಸ್ತೆಯಲ್ಲಿ ಚಲಿಸುವ ವಾಹನಗಳ ಮೇಲೆ ಏಕಾಏಕಿ ದಾಳಿ ನಡೆಸಲು ಮುಂದಾಗುತ್ತಿತ್ತು. ಕೆಲ ದ್ವಿಚಕ್ರ ವಾಹನ ಸವಾರರು ಆನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಪಾರಾದ ಪ್ರಸಂಗಗಳು ಆ ಮಾರ್ಗದಲ್ಲಿ ನಡೆದಿವೆ. ಇದರಿಂದಾಗಿ ಗಂಟೆಗಟ್ಟಲೆ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು. ದಿಕ್ಕಾಪಾಲಾಗಿ ನುಗ್ಗಿ ಸವಾರರನ್ನ ಭಯಭೀತಗೊಳಿಸಿದ ಆನೆ ನಿಯಂತ್ರಿಸಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಡುತ್ತಿದ್ದ ದೃಶ್ಯ ಕಂಡುಬಂದವು.</p>.<p>‘ಆನೆ ಪುಂಡಾಟದ ಬಗ್ಗೆ ಮಾಹಿತಿ ನೀಡಿದ ಅಧಿಕಾರಿಯೊಬ್ಬರು ಪರಿಸರ ಬದಲಾದಂತೆ ಆನೆಗಳ ವರ್ತನೆ ಬದಲಾಗುತ್ತದೆ. ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಸ್ಥಳಾಂತರ ಮಾಡಿದಾಗ ಈ ರೀತಿಯಾಗಿ ವರ್ತಿಸುತ್ತವೆ. ಆನೆಯನ್ನು ನಿಯಂತ್ರಿಸುವಲ್ಲಿ ಇಲಾಖೆ ಸಿಬ್ಬಂದಿ ಕೆಲಸ ಮಾಡಿದ್ದಾರೆ’ ಎಂದು ಮಾಹಿತಿ ನೀಡಿದರು.</p>.<p>‘ಆನೆಗಳಿಗೆ ತರಬೇತಿ ಸಮಯದಲ್ಲಿ ರೋಹಿತ ಎಂಬ ಆನೆ ಮಾವುತನನ್ನು ತಳ್ಳಿದೆ. ಅವರಿಗೆ ಚಿಕಿತ್ಸೆ ನೀಡಲಾಗಿದೆ. ಯಾವುದೇ ತೊಂದರೆ ಇಲ್ಲ’ ಎಂದು ಬಂಡೀಪುರ ಹುಲಿ ಯೋಜನೆ ನಿರ್ದೇಶಕ ಪ್ರಭಾಕರನ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಂಡ್ಲುಪೇಟೆ:</strong> ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಾಕಾನೆ ರೋಹಿತ್ ಪುಂಡಾಟ ನಡೆಸಿದ್ದು ವಾಹನ ಸವಾರರು ಇದರ ಆರ್ಭಟದಿಂದ ಮಂಗಳವಾರ ತೊಂದರೆ ಅನುಭವಿಸಿದರು.</p>.<p>ರಾಂಪುರ ಆನೆ ಶಿಬಿರದಿಂದ ಬಂಡೀಪುರಕ್ಕೆ ವಿಶೇಷ ತರಬೇತಿಗಾಗಿ ಐದು ಆನೆಗಳನ್ನು ಕರೆತರಲಾಗಿತ್ತು. ಬದಲಾದ ಪರಿಸರಕ್ಕೆ ಹೊಂದಿಕೊಳ್ಳದ ರೋಹಿತ್ ಇದ್ದಕ್ಕಿದ್ದಂತೆ ರೊಚ್ಚಿಗೆದ್ದು ಮಾವುತ ವೆಂಕಟೇಶ್ ಮೇಲೆಯೂ ದಾಳಿ ನಡೆಸಿ ಗಾಯಗೊಳಿಸಿದೆ.</p>.<p>ಗಾಯಾಳು ವೆಂಕಟೇಶ್ನನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿದೆ. ಇದು ರಸ್ತೆಯಲ್ಲಿ ಚಲಿಸುವ ವಾಹನಗಳ ಮೇಲೆ ಏಕಾಏಕಿ ದಾಳಿ ನಡೆಸಲು ಮುಂದಾಗುತ್ತಿತ್ತು. ಕೆಲ ದ್ವಿಚಕ್ರ ವಾಹನ ಸವಾರರು ಆನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಪಾರಾದ ಪ್ರಸಂಗಗಳು ಆ ಮಾರ್ಗದಲ್ಲಿ ನಡೆದಿವೆ. ಇದರಿಂದಾಗಿ ಗಂಟೆಗಟ್ಟಲೆ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು. ದಿಕ್ಕಾಪಾಲಾಗಿ ನುಗ್ಗಿ ಸವಾರರನ್ನ ಭಯಭೀತಗೊಳಿಸಿದ ಆನೆ ನಿಯಂತ್ರಿಸಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಡುತ್ತಿದ್ದ ದೃಶ್ಯ ಕಂಡುಬಂದವು.</p>.<p>‘ಆನೆ ಪುಂಡಾಟದ ಬಗ್ಗೆ ಮಾಹಿತಿ ನೀಡಿದ ಅಧಿಕಾರಿಯೊಬ್ಬರು ಪರಿಸರ ಬದಲಾದಂತೆ ಆನೆಗಳ ವರ್ತನೆ ಬದಲಾಗುತ್ತದೆ. ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಸ್ಥಳಾಂತರ ಮಾಡಿದಾಗ ಈ ರೀತಿಯಾಗಿ ವರ್ತಿಸುತ್ತವೆ. ಆನೆಯನ್ನು ನಿಯಂತ್ರಿಸುವಲ್ಲಿ ಇಲಾಖೆ ಸಿಬ್ಬಂದಿ ಕೆಲಸ ಮಾಡಿದ್ದಾರೆ’ ಎಂದು ಮಾಹಿತಿ ನೀಡಿದರು.</p>.<p>‘ಆನೆಗಳಿಗೆ ತರಬೇತಿ ಸಮಯದಲ್ಲಿ ರೋಹಿತ ಎಂಬ ಆನೆ ಮಾವುತನನ್ನು ತಳ್ಳಿದೆ. ಅವರಿಗೆ ಚಿಕಿತ್ಸೆ ನೀಡಲಾಗಿದೆ. ಯಾವುದೇ ತೊಂದರೆ ಇಲ್ಲ’ ಎಂದು ಬಂಡೀಪುರ ಹುಲಿ ಯೋಜನೆ ನಿರ್ದೇಶಕ ಪ್ರಭಾಕರನ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>