ಬೆಂಗಳೂರು–ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೆಪಾಲಂ ಬಳಿ ಮಂಗಳವಾರ ಸಂಜೆ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಈ ಹೆದ್ದಾರಿಯಲ್ಲಿ ಲಾರಿಗಳು ತಮಿಳನಾಡಿಗೆ ಕಬ್ಬು ತೆಗೆದುಕೊಂಡು ಹೋಗುತ್ತವೆ. ರಸ್ತೆ ಬದಿಯಲ್ಲಿ ನಿಂತಿರುವ ಆನೆಗಳು ಕಬ್ಬಿನ ಲಾರಿ ಸಾಗುವಾಗ ಸೊಂಡಿಲು ಹಾಕಿ ಕಬ್ಬಿನ ಜಲ್ಲೆಗಳನ್ನು ಎಳೆಯುವುದು ಸಾಮಾನ್ಯ ಸಂಗತಿ. ಆದರೆ, ಎರಡಕ್ಕಿಂತ ಹೆಚ್ಚು ಆನೆಗಳು ಒಟ್ಟಾಗಿ ಕಬ್ಬಿನ ಲಾರಿಗಳನ್ನು ಅಡ್ಡ ಹಾಕುವುದು ಅಪರೂಪ.