ಧರ್ಮ ದರ್ಶನವಲ್ಲದೆ ₹50, ₹100, ₹300 ಶುಲ್ಕದ ವಿಶೇಷ ಸರದಿ ಸಾಲಿನ ವ್ಯವಸ್ಥೆಯನ್ನು ಮಾಡಲಾಗಿತ್ತು. ಜಿಲ್ಲೆ ಮಾತ್ರವಲ್ಲದೆ ಹೊರ ಜಿಲ್ಲೆ, ನೆರೆಯ ತಮಿಳುನಾಡಿನಿಂದಲೂ ಸಾವಿರಾರು ಭಕ್ತರು ಬೆಟ್ಟಕ್ಕೆ ಭೇಟಿ ನೀಡಿ ಎಣ್ಣೆ ಮಜ್ಜನ ಸೇವೆಯಲ್ಲಿ ಪಾಲ್ಗೊಂಡು ದರ್ಶನ ಪಡೆದರು. ಇದಲ್ಲದೆ, ಬೆಳ್ಳಿ ತೇರು, ಬಸವ ವಾಹನ, ಹುಲಿವಾಹನ, ರುದ್ರಾಕ್ಷಿ ಮಂಟಪ ಉತ್ಸವ ನಡೆಸಿ ಹರಕೆ ತೀರಿಸಿದರು.