<p><strong>ಗುಂಡ್ಲುಪೇಟೆ</strong>: ತಾಲ್ಲೂಕಿನ ಧಾರ್ಮಿಕ ಕ್ಷೇತ್ರ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಸಂಜೆ 4.30ರ ನಂತರ ನಿಷೇಧವಿದ್ದರೂ ಪ್ರವಾಸಿಗರನ್ನು ಬೆಟ್ಟಕ್ಕೆ ಜೀಪ್ನಲ್ಲಿ ಕರೆದೊಯ್ಯುವ ಮೂಲಕ ಅರಣ್ಯ ಇಲಾಖೆ ಸಿಬ್ಬಂದಿ ನಿಯಮ ಉಲ್ಲಂಘಿಸಿದ್ದಾರೆ. ಸ್ಥಳೀಯ ಹಾಗೂ ಪರಿಸರ ವಾದಿಗಳ ಆಕ್ರೋಶಕ್ಕೆ ಕಾರಣವಾಗಿದೆ.</p>.<p> ಬೆಟ್ಟಕ್ಕೆ ತೆರಳಲು ಸಂಜೆ 4.30ರ ಬಳಿಕ ನಿಷೇಧವಿದೆ. ಇಲ್ಲಿನ ಇಡಿಸಿ(ಇಕೋ ಡೆವಲಪ್ಮೆಂಟ್ ಕಮಿಟಿ) ವಾಹನದಲ್ಲಿ ಬೆಟ್ಟಕ್ಕೆ ಪ್ರಯಾಣಿಕರನ್ನು ಕರೆದೊಯಿದ್ದಾರೆ. ಈ ದೃಶ್ಯವನ್ನು ಪ್ರಯಾಣಿಕರೊಬ್ಬರು ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.</p>.<p>ಕೆಎಸ್ಆರ್ಟಿಸಿ ಬಸ್ ಸಂಜೆ 4 ಗಂಟೆ ನಂತರ ನಿಷೇಧಿಸುವ ಅರಣ್ಯ ಅಧಿಕಾರಿಗಳು ಇಡಿಸಿ ವಾಹನದಲ್ಲಿ ಜನರನ್ನು ಕರೆದು ಹೋಗಲು ಅನುಮತಿ ನೀಡಿದ್ದು ಏಕೆ ಎಂಬ ಪ್ರಶ್ನೆ ಎದ್ದಿದ್ದು, ಹಣದಾಸೆಗೆ ಇಂತಹ ಕೃತ್ಯಕ್ಕೆ ಇಳಿದಿರುವ ಸಿಬ್ಬಂದಿ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕೆಂದು ಪರಿಸರ ಪ್ರೇಮಿ ಮಣಿಕಂಠ ಒತ್ತಾಯಿಸಿದ್ದಾರೆ.</p>.<p>ಈ ಸಂಬಂಧ ಜಿ.ಎಸ್.ಬೆಟ್ಟ ವಲಯದ ಅರಣ್ಯಾಧಿಕಾರಿ ಮಲ್ಲೇಶ್ ಪ್ರತಿಕ್ರಿಯಿಸಿ, ‘ಪ್ರವಾಸಿಗರು 4.30ರ ಮೊದಲೇ ಟಿಕೆಟ್ ಪಡೆದಿದ್ದರು. ವಾಹನ ಪಂಕ್ಚರ್ ಆದ ಕಾರಣ ಬರಲು ತಡವಾಗಿದೆ. 4.15ಕ್ಕೆ ಕರೆದುಕೊಂಡು ಹೋಗಲಾಗಿದೆ. ಈ ದೃಶ್ಯ ಸಿಸಿಟಿವಿಯಲ್ಲೂ ಸೆರೆಯಾಗಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಂಡ್ಲುಪೇಟೆ</strong>: ತಾಲ್ಲೂಕಿನ ಧಾರ್ಮಿಕ ಕ್ಷೇತ್ರ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಸಂಜೆ 4.30ರ ನಂತರ ನಿಷೇಧವಿದ್ದರೂ ಪ್ರವಾಸಿಗರನ್ನು ಬೆಟ್ಟಕ್ಕೆ ಜೀಪ್ನಲ್ಲಿ ಕರೆದೊಯ್ಯುವ ಮೂಲಕ ಅರಣ್ಯ ಇಲಾಖೆ ಸಿಬ್ಬಂದಿ ನಿಯಮ ಉಲ್ಲಂಘಿಸಿದ್ದಾರೆ. ಸ್ಥಳೀಯ ಹಾಗೂ ಪರಿಸರ ವಾದಿಗಳ ಆಕ್ರೋಶಕ್ಕೆ ಕಾರಣವಾಗಿದೆ.</p>.<p> ಬೆಟ್ಟಕ್ಕೆ ತೆರಳಲು ಸಂಜೆ 4.30ರ ಬಳಿಕ ನಿಷೇಧವಿದೆ. ಇಲ್ಲಿನ ಇಡಿಸಿ(ಇಕೋ ಡೆವಲಪ್ಮೆಂಟ್ ಕಮಿಟಿ) ವಾಹನದಲ್ಲಿ ಬೆಟ್ಟಕ್ಕೆ ಪ್ರಯಾಣಿಕರನ್ನು ಕರೆದೊಯಿದ್ದಾರೆ. ಈ ದೃಶ್ಯವನ್ನು ಪ್ರಯಾಣಿಕರೊಬ್ಬರು ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.</p>.<p>ಕೆಎಸ್ಆರ್ಟಿಸಿ ಬಸ್ ಸಂಜೆ 4 ಗಂಟೆ ನಂತರ ನಿಷೇಧಿಸುವ ಅರಣ್ಯ ಅಧಿಕಾರಿಗಳು ಇಡಿಸಿ ವಾಹನದಲ್ಲಿ ಜನರನ್ನು ಕರೆದು ಹೋಗಲು ಅನುಮತಿ ನೀಡಿದ್ದು ಏಕೆ ಎಂಬ ಪ್ರಶ್ನೆ ಎದ್ದಿದ್ದು, ಹಣದಾಸೆಗೆ ಇಂತಹ ಕೃತ್ಯಕ್ಕೆ ಇಳಿದಿರುವ ಸಿಬ್ಬಂದಿ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕೆಂದು ಪರಿಸರ ಪ್ರೇಮಿ ಮಣಿಕಂಠ ಒತ್ತಾಯಿಸಿದ್ದಾರೆ.</p>.<p>ಈ ಸಂಬಂಧ ಜಿ.ಎಸ್.ಬೆಟ್ಟ ವಲಯದ ಅರಣ್ಯಾಧಿಕಾರಿ ಮಲ್ಲೇಶ್ ಪ್ರತಿಕ್ರಿಯಿಸಿ, ‘ಪ್ರವಾಸಿಗರು 4.30ರ ಮೊದಲೇ ಟಿಕೆಟ್ ಪಡೆದಿದ್ದರು. ವಾಹನ ಪಂಕ್ಚರ್ ಆದ ಕಾರಣ ಬರಲು ತಡವಾಗಿದೆ. 4.15ಕ್ಕೆ ಕರೆದುಕೊಂಡು ಹೋಗಲಾಗಿದೆ. ಈ ದೃಶ್ಯ ಸಿಸಿಟಿವಿಯಲ್ಲೂ ಸೆರೆಯಾಗಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>