ಚಾಮರಾಜನಗರ: ಬಿಳಿಗಿರಿ ರಂಗನಾಥ ಸ್ವಾಮಿ ದೇವಾಲಯ (ಬಿಆರ್ಟಿ) ಹುಲಿ ಸಂರಕ್ಷಿತ ಪ್ರದೇಶದಲ್ಲಿರುವ ಬಿಳಿಗಿರಿ ರಂಗನಬೆಟ್ಟ ವ್ಯಾಪ್ತಿಯಲ್ಲಿ ಅಕ್ರಮವಾಗಿ ಕಾರ್ಯಾಚರಿಸುತ್ತಿರುವ ರೆಸಾರ್ಟ್ಗಳು, ಹೋಂ ಸ್ಟೇಗಳು ಮತ್ತು ಲಾಡ್ಜ್ಗಳನ್ನು ತೆರವುಗೊಳಿಸಲು ಕ್ರಮ ಕೈಗೊಂಡು, ಆ ಸಂಬಂಧ ವರದಿಯನ್ನು ನೀಡುವಂತೆ ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಜಾಗೃತ, ಎಪಿಸಿಸಿಎಫ್) ವಿಜಯ್ ರಂಜನ್, ಮೈಸೂರಿನ ಪ್ರಾದೇಶಿಕ ಆಯುಕ್ತರಿಗೆ ಪತ್ರ ಬರೆದಿದ್ದಾರೆ.