<p><strong>ಚಾಮರಾಜನಗರ</strong>: ದಸರಾ ಮಹೋತ್ಸವದ ಅಂಗವಾಗಿ ವಸ್ತುಪ್ರದರ್ಶನದಲ್ಲಿ ತೆರೆಯಲಾಗಿರುವ ಮಾರಾಟ ಹಾಗೂ ಮಾಹಿತಿ ಮಳಿಗೆಗಳಿಗೆ ಜನರಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.</p>.<p>ಸ್ಥಳೀಯ ನಿವಾಸಿಗಳು ಸೇರಿದಂತೆ ಸುತ್ತಮುತ್ತಲ ಗ್ರಾಮಗಳಿಂದ ಫಲಪುಷ್ಪ ಪ್ರದರ್ಶನ ನೋಡಲು ಬಂದಿದ್ದ ಸಾರ್ವಜನಿಕರು ಮಾರಾಟ ಮಳಿಗೆಗಳತ್ತ ತೆರಳಿ ತಮ್ಮ ಇಷ್ಟವಾದ ವಸ್ತುಗಳ ಖರೀದಿಗೆ ಮುಂದಾದರು. ವಿವಿಧ ಇಲಾಖೆಗಳಲ್ಲಿ ಲಭ್ಯವಿರುವ ಯೋಜನೆಗಳ ಬಗ್ಗೆ ಮಾಹಿತಿ ಪಡೆದರು.</p>.<p>ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ, ಅರಣ್ಯ ಇಲಾಖೆ, ಖಾದಿ ಮತ್ತು ಗ್ರಾಮೋದ್ಯೋಗ ಇಲಾಖೆ ಸೇರಿದಂತೆ ಹಲವು ಇಲಾಖೆಗಳು ಮಾರಾಟ ಮಳಿಗೆಗಳನ್ನು ತೆರೆದಿವೆ.</p>.<p>ಕೃಷಿ ಇಲಾಖೆಯ ಮಳಿಗೆಯಲ್ಲಿ ಸಾವಯವ ಕೃಷಿ, ಸಿರಿಧಾನ್ಯಗಳ ಬಗ್ಗೆ ಮಾಹಿತಿಗಳನ್ನು ನೀಡುವುದರ ಜೊತೆಗೆ, ಸಿರಿಧಾನ್ಯಗಳ ಬಿತ್ತನೆ ಬೀಜಗಳ ಮಾರಾಟವೂ ಏರ್ಪಡಿಸಲಾಗಿತ್ತು. ವಿವಿಧ ಭೂಪ್ರದೇಶಗಳಲ್ಲಿ ಕಂಡು ಬರುವ ಮಣ್ಣಿನ ಫಲವತ್ತತೆ ಆಧಾರದ ಮೇಲೆ ಬೆಳೆಗಳ ಬಗ್ಗೆ ತಜ್ಞರು ಸಾರ್ವಜನಿಕರಿಗೆ ತಿಳಿ ಹೇಳುತ್ತಿದ್ದರು.</p>.<p>ಸಿರಿಧಾನ್ಯ ಬೆಳೆಯಲು ಮಣ್ಣಿನಲ್ಲಿ ಪೋಷಕಾಂಶಗಳನ್ನು ಹೆಚ್ಚಿಸುವ ಬಗೆ, ರಸಗೊಬ್ಬರ ಬಳಸದೇ ಸಾವಯವ ಗೊಬ್ಬರ ಬಳಸಿ ಧಾನ್ಯಗಳನ್ನು ಬೆಳೆಯುವ ರೀತಿಯ ಬಗ್ಗೆ ಕೃಷಿ ವಿದ್ಯಾರ್ಥಿಗಳು ವಿವರಿಸುತ್ತಿದ್ದರು. ವಿದ್ಯಾರ್ಥಿಗಳು ತಿಳಿಸಿಕೊಟ್ಟರು.</p>.<p class="Subhead"><strong>ಯಂತ್ರೋಪಕರಣಗಳು: </strong>ವಿವಿಧಕೃಷಿ ಯಂತ್ರೋಪಕರಣಗಳ ಪ್ರದರ್ಶನ ಹಾಗೂ ಮಾರಾಟವೂ ಜನರನ್ನು ಸೆಳೆಯಿತು. ರೈತರು ಹಾಗೂ ಆಸಕ್ತರು ಉಪಕರಣಗಳ ಕಾರ್ಯಗಳ ಬಗ್ಗೆ ಕಂಪನಿ ಪ್ರತಿನಿಧಿಗಳೊಂದಿಗೆ ವಿಚಾರಿಸುತ್ತಿದ್ದರು.</p>.<p>ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ತೆರೆಯಲಾಗಿದ್ದ ಮಳಿಗೆಯಲ್ಲಿ ಸೀರೆ, ಚೀಲ ಹಾಗೂ ಜಮಖಾನಗಳನ್ನು ಇಡಲಾಗಿತ್ತು.</p>.<p>ಜೇನು ತುಪ್ಪ, ಅಲಂಕಾರಿಕ ಹೂ ಹಾಗೂ ಅದರ ಬಿತ್ತನೆ ಬೀಜಗಳನ್ನು ಪ್ರದರ್ಶನಕ್ಕಿಡಲಾಗಿದ್ದು, ಸಾರ್ವಜನಿಕರು ಅಲಂಕಾರಿಕ ಹೂಗಳ ಬಿತ್ತನೆ ಬೀಜಗಳಿಗಾಗಿ ಮುಗಿಬಿದ್ದರು.</p>.<p class="Briefhead"><strong>ಒಂದು ದಿನ ವಿಸ್ತರಣೆ</strong></p>.<p>ಫಲಪುಷ್ಪ ಪ್ರದರ್ಶನಕ್ಕೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿರುವುದರಿಂದ ಜಿಲ್ಲಾಡಳಿತವು ಪ್ರದರ್ಶನವನ್ನು ಒಂದು ದಿನ ಮುಂದೂಡಿದೆ.</p>.<p>ಗುರುವಾರ ರಾತ್ರಿ ಫಲ ಪುಷ್ಪ ಪ್ರದರ್ಶನದಲ್ಲಿ ಭಾರಿ ಸಂಖ್ಯೆಯಲ್ಲಿ ಜನರು ಸೇರಿದ್ದರು. ಉತ್ತಮ ಸ್ಪಂದನೆ ಇರುವುದರಿಂದ ಇನ್ನೂ ಒಂದೆರಡು ದಿನಗಳ ಕಾಲ ವಿಸ್ತರಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದರು. ‘ಪ್ರಜಾವಾಣಿ’ ಕೂಡ ತನ್ನ ವರದಿಯಲ್ಲಿ ಈ ಬಗ್ಗೆ ಪ್ರಸ್ತಾಪಿಸಿತ್ತು.</p>.<p>ಶುಕ್ರವಾರ ಜಿಲ್ಲಾಡಳಿತವು ಶನಿವಾರದವರೆಗೆ ಪ್ರದರ್ಶನ ವಿಸ್ತರಿಸಲಾಗುವುದು ಎಂದು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ</strong>: ದಸರಾ ಮಹೋತ್ಸವದ ಅಂಗವಾಗಿ ವಸ್ತುಪ್ರದರ್ಶನದಲ್ಲಿ ತೆರೆಯಲಾಗಿರುವ ಮಾರಾಟ ಹಾಗೂ ಮಾಹಿತಿ ಮಳಿಗೆಗಳಿಗೆ ಜನರಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.</p>.<p>ಸ್ಥಳೀಯ ನಿವಾಸಿಗಳು ಸೇರಿದಂತೆ ಸುತ್ತಮುತ್ತಲ ಗ್ರಾಮಗಳಿಂದ ಫಲಪುಷ್ಪ ಪ್ರದರ್ಶನ ನೋಡಲು ಬಂದಿದ್ದ ಸಾರ್ವಜನಿಕರು ಮಾರಾಟ ಮಳಿಗೆಗಳತ್ತ ತೆರಳಿ ತಮ್ಮ ಇಷ್ಟವಾದ ವಸ್ತುಗಳ ಖರೀದಿಗೆ ಮುಂದಾದರು. ವಿವಿಧ ಇಲಾಖೆಗಳಲ್ಲಿ ಲಭ್ಯವಿರುವ ಯೋಜನೆಗಳ ಬಗ್ಗೆ ಮಾಹಿತಿ ಪಡೆದರು.</p>.<p>ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ, ಅರಣ್ಯ ಇಲಾಖೆ, ಖಾದಿ ಮತ್ತು ಗ್ರಾಮೋದ್ಯೋಗ ಇಲಾಖೆ ಸೇರಿದಂತೆ ಹಲವು ಇಲಾಖೆಗಳು ಮಾರಾಟ ಮಳಿಗೆಗಳನ್ನು ತೆರೆದಿವೆ.</p>.<p>ಕೃಷಿ ಇಲಾಖೆಯ ಮಳಿಗೆಯಲ್ಲಿ ಸಾವಯವ ಕೃಷಿ, ಸಿರಿಧಾನ್ಯಗಳ ಬಗ್ಗೆ ಮಾಹಿತಿಗಳನ್ನು ನೀಡುವುದರ ಜೊತೆಗೆ, ಸಿರಿಧಾನ್ಯಗಳ ಬಿತ್ತನೆ ಬೀಜಗಳ ಮಾರಾಟವೂ ಏರ್ಪಡಿಸಲಾಗಿತ್ತು. ವಿವಿಧ ಭೂಪ್ರದೇಶಗಳಲ್ಲಿ ಕಂಡು ಬರುವ ಮಣ್ಣಿನ ಫಲವತ್ತತೆ ಆಧಾರದ ಮೇಲೆ ಬೆಳೆಗಳ ಬಗ್ಗೆ ತಜ್ಞರು ಸಾರ್ವಜನಿಕರಿಗೆ ತಿಳಿ ಹೇಳುತ್ತಿದ್ದರು.</p>.<p>ಸಿರಿಧಾನ್ಯ ಬೆಳೆಯಲು ಮಣ್ಣಿನಲ್ಲಿ ಪೋಷಕಾಂಶಗಳನ್ನು ಹೆಚ್ಚಿಸುವ ಬಗೆ, ರಸಗೊಬ್ಬರ ಬಳಸದೇ ಸಾವಯವ ಗೊಬ್ಬರ ಬಳಸಿ ಧಾನ್ಯಗಳನ್ನು ಬೆಳೆಯುವ ರೀತಿಯ ಬಗ್ಗೆ ಕೃಷಿ ವಿದ್ಯಾರ್ಥಿಗಳು ವಿವರಿಸುತ್ತಿದ್ದರು. ವಿದ್ಯಾರ್ಥಿಗಳು ತಿಳಿಸಿಕೊಟ್ಟರು.</p>.<p class="Subhead"><strong>ಯಂತ್ರೋಪಕರಣಗಳು: </strong>ವಿವಿಧಕೃಷಿ ಯಂತ್ರೋಪಕರಣಗಳ ಪ್ರದರ್ಶನ ಹಾಗೂ ಮಾರಾಟವೂ ಜನರನ್ನು ಸೆಳೆಯಿತು. ರೈತರು ಹಾಗೂ ಆಸಕ್ತರು ಉಪಕರಣಗಳ ಕಾರ್ಯಗಳ ಬಗ್ಗೆ ಕಂಪನಿ ಪ್ರತಿನಿಧಿಗಳೊಂದಿಗೆ ವಿಚಾರಿಸುತ್ತಿದ್ದರು.</p>.<p>ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ತೆರೆಯಲಾಗಿದ್ದ ಮಳಿಗೆಯಲ್ಲಿ ಸೀರೆ, ಚೀಲ ಹಾಗೂ ಜಮಖಾನಗಳನ್ನು ಇಡಲಾಗಿತ್ತು.</p>.<p>ಜೇನು ತುಪ್ಪ, ಅಲಂಕಾರಿಕ ಹೂ ಹಾಗೂ ಅದರ ಬಿತ್ತನೆ ಬೀಜಗಳನ್ನು ಪ್ರದರ್ಶನಕ್ಕಿಡಲಾಗಿದ್ದು, ಸಾರ್ವಜನಿಕರು ಅಲಂಕಾರಿಕ ಹೂಗಳ ಬಿತ್ತನೆ ಬೀಜಗಳಿಗಾಗಿ ಮುಗಿಬಿದ್ದರು.</p>.<p class="Briefhead"><strong>ಒಂದು ದಿನ ವಿಸ್ತರಣೆ</strong></p>.<p>ಫಲಪುಷ್ಪ ಪ್ರದರ್ಶನಕ್ಕೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿರುವುದರಿಂದ ಜಿಲ್ಲಾಡಳಿತವು ಪ್ರದರ್ಶನವನ್ನು ಒಂದು ದಿನ ಮುಂದೂಡಿದೆ.</p>.<p>ಗುರುವಾರ ರಾತ್ರಿ ಫಲ ಪುಷ್ಪ ಪ್ರದರ್ಶನದಲ್ಲಿ ಭಾರಿ ಸಂಖ್ಯೆಯಲ್ಲಿ ಜನರು ಸೇರಿದ್ದರು. ಉತ್ತಮ ಸ್ಪಂದನೆ ಇರುವುದರಿಂದ ಇನ್ನೂ ಒಂದೆರಡು ದಿನಗಳ ಕಾಲ ವಿಸ್ತರಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದರು. ‘ಪ್ರಜಾವಾಣಿ’ ಕೂಡ ತನ್ನ ವರದಿಯಲ್ಲಿ ಈ ಬಗ್ಗೆ ಪ್ರಸ್ತಾಪಿಸಿತ್ತು.</p>.<p>ಶುಕ್ರವಾರ ಜಿಲ್ಲಾಡಳಿತವು ಶನಿವಾರದವರೆಗೆ ಪ್ರದರ್ಶನ ವಿಸ್ತರಿಸಲಾಗುವುದು ಎಂದು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>