<p>ಯಳಂದೂರು/ಮೈಸೂರು: ಮೈಸೂರಿನ ವೃದ್ಧಾಶ್ರಮವೊಂದರಲ್ಲಿ ಕೆಲಸ ಮಾಡುತ್ತಿದ್ದ ಯಳಂದೂರು ತಾಲ್ಲೂಕಿನ ಅಂಬಳೆ ಗ್ರಾಮದ ಯುವತಿ ಮಮತಾ ಎಂಬುವವರ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ಪೋಷಕರು ಪೊಲೀಸ್ ದೂರು ನೀಡಿರುವುದರಿಂದ, ಜಮೀನಿನಲ್ಲಿ ಹೂತಿರುವ ಅವರ ಶವವನ್ನು ಗುರುವಾರ ಹೊರತೆಗೆದು ಪಂಚನಾಮೆ ನಡೆಯಲಿದೆ. </p>.<p>‘ಮಮತಾ ಫೆ.15ರಂದು ರಾತ್ರಿ ಶೌಚಾಲಯದಲ್ಲಿ ಪ್ರಜ್ಞೆ ತಪ್ಪಿದ್ದರು. ಅವರನ್ನು ಜಯದೇವ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಗಿತ್ತು. ಈ ವೇಳೆ ಅವರು ಮೃತಪಟ್ಟಿದ್ದರು. ಕೆ.ಆರ್.ಆಸ್ಪತ್ರೆಯಲ್ಲಿ ಶವಪರೀಕ್ಷೆ ನಡೆಸಬೇಕಿತ್ತು. ಆದರೆ, ಘಟನೆಯನ್ನು ಪೋಷಕರು ಪೊಲೀಸರ ಗಮನಕ್ಕೆ ತಂದಿರಲಿಲ್ಲ’ ಎಂದು ಮೈಸೂರಿನ ಹೆಬ್ಬಾಳ ಪೊಲೀಸರು ಹೇಳಿದ್ದಾರೆ. </p>.<p>‘ಫೆ.19ರಂದು ತಾಯಿ ಸುಮತಿ, ಮಗಳ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ, ಠಾಣೆಗೆ ಬಂದಿದ್ದರು. ಅದರಂತೆ ಪ್ರಕರಣ ದಾಖಲಿಸಿ ಪಂಚನಾಮೆ ನಡೆಸಲು ಯಳಂದೂರು ತಹಶೀಲ್ದಾರ್ ಅವರಿಗೆ ಪತ್ರ ಬರೆಯಲಾಗಿದೆ. ಅನುಮತಿ ಮೇರೆಗೆ ಶವವನ್ನು ಹೊರತೆಗೆದು ಪಂಚನಾಮೆ ನಡೆಸಲಾಗುತ್ತದೆ’ ಎಂದು ‘ಪ್ರಜಾವಾಣಿ’ಗೆ ಮಾಹಿತಿ ನೀಡಿದ್ದಾರೆ. </p>.<p><strong>ಇಂದು ಪಂಚನಾಮೆ:</strong> ಮೈಸೂರು ಪೊಲೀಸರ ಪತ್ರದ ಆಧಾರದಲ್ಲಿ, ಶವವನ್ನು ಹೊರತೆಗೆದು ಪಂಚನಾಮೆ ನಡೆಸಲು ಕ್ರಮ ಕೈಗೊಳ್ಳುವಂತೆ ಉಪವಿಭಾಗಾಧಿಕಾರಿ ಮಹೇಶ್ ಅವರು ಮಂಗಳವಾರ ಯಳಂದೂರು ತಹಶೀಲ್ದಾರ್ ಅವರಿಗೆ ಪತ್ರ ಬರೆದಿದ್ದು, ಅದರಂತೆ ತಹಶೀಲ್ದಾರ್ ಸಿದ್ಧತೆ ನಡೆಸಿದ್ದಾರೆ. </p>.<p>ಅಂಬಳೆ ಗ್ರಾಮ ಪಂಚಾಯಿತಿಗೆ ಸೇರಿದ ಕಮಲ ಎಂಬುವವರಿಗೆ ಸೇರಿದ ಕಬ್ಬಿನ ಗದ್ದೆಯಲ್ಲಿ ಶವ ಹೂಳಲಾಗಿದೆ. ವೈದ್ಯರ ತಂಡ ಹಾಗೂ ಹೆಬ್ಬಾಳ ಪೊಲೀಸರು ಗುರುವಾರ ಶವ ಹೊರತೆಗೆಸಿ ಪಂಚೆನಾಮೆ ನಡೆಸಲಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಯಳಂದೂರು/ಮೈಸೂರು: ಮೈಸೂರಿನ ವೃದ್ಧಾಶ್ರಮವೊಂದರಲ್ಲಿ ಕೆಲಸ ಮಾಡುತ್ತಿದ್ದ ಯಳಂದೂರು ತಾಲ್ಲೂಕಿನ ಅಂಬಳೆ ಗ್ರಾಮದ ಯುವತಿ ಮಮತಾ ಎಂಬುವವರ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ಪೋಷಕರು ಪೊಲೀಸ್ ದೂರು ನೀಡಿರುವುದರಿಂದ, ಜಮೀನಿನಲ್ಲಿ ಹೂತಿರುವ ಅವರ ಶವವನ್ನು ಗುರುವಾರ ಹೊರತೆಗೆದು ಪಂಚನಾಮೆ ನಡೆಯಲಿದೆ. </p>.<p>‘ಮಮತಾ ಫೆ.15ರಂದು ರಾತ್ರಿ ಶೌಚಾಲಯದಲ್ಲಿ ಪ್ರಜ್ಞೆ ತಪ್ಪಿದ್ದರು. ಅವರನ್ನು ಜಯದೇವ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಗಿತ್ತು. ಈ ವೇಳೆ ಅವರು ಮೃತಪಟ್ಟಿದ್ದರು. ಕೆ.ಆರ್.ಆಸ್ಪತ್ರೆಯಲ್ಲಿ ಶವಪರೀಕ್ಷೆ ನಡೆಸಬೇಕಿತ್ತು. ಆದರೆ, ಘಟನೆಯನ್ನು ಪೋಷಕರು ಪೊಲೀಸರ ಗಮನಕ್ಕೆ ತಂದಿರಲಿಲ್ಲ’ ಎಂದು ಮೈಸೂರಿನ ಹೆಬ್ಬಾಳ ಪೊಲೀಸರು ಹೇಳಿದ್ದಾರೆ. </p>.<p>‘ಫೆ.19ರಂದು ತಾಯಿ ಸುಮತಿ, ಮಗಳ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ, ಠಾಣೆಗೆ ಬಂದಿದ್ದರು. ಅದರಂತೆ ಪ್ರಕರಣ ದಾಖಲಿಸಿ ಪಂಚನಾಮೆ ನಡೆಸಲು ಯಳಂದೂರು ತಹಶೀಲ್ದಾರ್ ಅವರಿಗೆ ಪತ್ರ ಬರೆಯಲಾಗಿದೆ. ಅನುಮತಿ ಮೇರೆಗೆ ಶವವನ್ನು ಹೊರತೆಗೆದು ಪಂಚನಾಮೆ ನಡೆಸಲಾಗುತ್ತದೆ’ ಎಂದು ‘ಪ್ರಜಾವಾಣಿ’ಗೆ ಮಾಹಿತಿ ನೀಡಿದ್ದಾರೆ. </p>.<p><strong>ಇಂದು ಪಂಚನಾಮೆ:</strong> ಮೈಸೂರು ಪೊಲೀಸರ ಪತ್ರದ ಆಧಾರದಲ್ಲಿ, ಶವವನ್ನು ಹೊರತೆಗೆದು ಪಂಚನಾಮೆ ನಡೆಸಲು ಕ್ರಮ ಕೈಗೊಳ್ಳುವಂತೆ ಉಪವಿಭಾಗಾಧಿಕಾರಿ ಮಹೇಶ್ ಅವರು ಮಂಗಳವಾರ ಯಳಂದೂರು ತಹಶೀಲ್ದಾರ್ ಅವರಿಗೆ ಪತ್ರ ಬರೆದಿದ್ದು, ಅದರಂತೆ ತಹಶೀಲ್ದಾರ್ ಸಿದ್ಧತೆ ನಡೆಸಿದ್ದಾರೆ. </p>.<p>ಅಂಬಳೆ ಗ್ರಾಮ ಪಂಚಾಯಿತಿಗೆ ಸೇರಿದ ಕಮಲ ಎಂಬುವವರಿಗೆ ಸೇರಿದ ಕಬ್ಬಿನ ಗದ್ದೆಯಲ್ಲಿ ಶವ ಹೂಳಲಾಗಿದೆ. ವೈದ್ಯರ ತಂಡ ಹಾಗೂ ಹೆಬ್ಬಾಳ ಪೊಲೀಸರು ಗುರುವಾರ ಶವ ಹೊರತೆಗೆಸಿ ಪಂಚೆನಾಮೆ ನಡೆಸಲಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>