ಯಡಿಯೂರಪ್ಪ ಹಾಗೂ ಅವರ ಸಂಪುಟದ ಸಚಿವರೊಂದಿಗೆ ಆತ್ಮೀಯ ಒಡನಾಟ ಹೊಂದಿರುವ ಶಾಸಕರು, ಸಾರ್ವಜನಿಕವಾಗಿ ಒಟ್ಟೊಟ್ಟಿಗೆ ಕಾಣಿಸಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಕೊಳ್ಳೇಗಾಲಕ್ಕೆ ಐವರು ಸಚಿವರು ಹಾಗೂ ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷ ವಿಜಯೇಂದ್ರ ಅವರು ಬಂದಿದ್ದಾಗ, ಎನ್.ಮಹೇಶ್ ಅವರು ಎಲ್ಲರನ್ನೂ ಸ್ವಾಗತಿಸಿದ್ದು ಕೂಡ ಹಲವು ಊಹಾಪೋಹಗಳಿಗೆ ಎಡೆ ಮಾಡಿತ್ತು.