ನಾಗರಾಜು ‘ಪ್ರಜಾವಾಣಿ’ಗೆ ಪ್ರತಿಕ್ರಿ ಯಿಸಿ, ‘ಬಿತ್ತನೆ ಮಾಡಿದ ನಂತರ ಗಿಡಗಳು ಚೆನ್ನಾಗಿ ಬಂದಿದ್ದರಿಂದ ಮತ್ತೆ ಕೀಟನಾಶಕ, ರಸಗೊಬ್ಬರ ಎಲ್ಲ ಹಾಕಿದ್ದೆ. ಎಕರೆಗೆ ₹ 90 ಸಾವಿರ ಖರ್ಚು ಮಾಡಿದ್ದೇನೆ. ಮೂರು ತಿಂಗಳು ಕಳೆದರೂ ಈರುಳ್ಳಿ ಕಟ್ಟಿಲ್ಲ. ಸ್ವಲ್ಪವೂ ಫಸಲು ಬಂದಿಲ್ಲ. ಪೂರ್ಣ ನಷ್ಟ ಅನುಭವಿಸಿದ್ದೇನೆ. ಸರ್ಕಾರ ನಷ್ಟ ಪರಿಹಾರ ಕೊಡಬೇಕು’ ಎಂದರು.