‘ಶಿವಣ್ಣ ಹಾಗೂ ಅವರ ನೆರೆ ವ್ಯಕ್ತಿಗೆ ಜಮೀನು ವಿಚಾರದಲ್ಲಿ ವಿವಾದಇದೆ. ಪ್ರಕರಣ ನ್ಯಾಯಾಲಯದಲ್ಲಿ ನಡೆಯುತ್ತಿದೆ. ತಮಗೆ ನ್ಯಾಯ ಕೊಡಿಸಬೇಕು ಎಂದು ಶಿವಣ್ಣ ಅವರು ಗ್ರಾಮಾಂತರ ಠಾಣೆಗೆ ಹೋಗಿ ಮನವಿ ಮಾಡಿದ್ದಾರೆ. ಪ್ರಕರಣ ನ್ಯಾಯಾಲಯದಲ್ಲಿ ಇರುವುದರಿಂದ ತಾವೇನು ಮಾಡಲು ಸಾಧ್ಯವಿಲ್ಲ, ನ್ಯಾಯಾಲಯದಲ್ಲೇ ಇತ್ಯರ್ಥವಾಗಬೇಕು ಎಂದು ಸಿಬ್ಬಂದಿ ಹೇಳಿ ಕಳಿಸಿದ್ದಾರೆ. ಇದರಿಂದ ಬೇಸರಗೊಂಡ ಅವರು ತಮಗೆಲ್ಲೂ ನ್ಯಾಯ ಸಿಗುತ್ತಿಲ್ಲ ಎಂದು ಭುವನೇಶ್ವರಿ ವೃತ್ತದಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಲು ಯತ್ನಿಸಿದ್ದರು. ಸ್ಥಳದಲ್ಲಿದ್ದ ನಮ್ಮ ಸಿಬ್ಬಂದಿ ಅವರನ್ನು ರಕ್ಷಿಸಿದ್ದಾರೆ’ ಎಂದು ಪಟ್ಟಣ ಠಾಣೆ ಇನ್ಸ್ಪೆಕ್ಟರ್ ಮಹೇಶ್ ಅವರು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.