ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರದ ಆಲೂರು ಗ್ರಾಮದಲ್ಲಿ ರೈತ ಆತ್ಮಹತ್ಯೆ

Last Updated 10 ಸೆಪ್ಟೆಂಬರ್ 2020, 15:29 IST
ಅಕ್ಷರ ಗಾತ್ರ

ಚಾಮರಾಜನಗರ: ತಾಲ್ಲೂಕಿನ ಆಲೂರು ಗ್ರಾಮದಲ್ಲಿ ರೈತರೊಬ್ಬರು ಬುಧವಾರ ರಾತ್ರಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಾಲ ಬಾಧೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬದವರು ದೂರು ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗ್ರಾಮದ ನಿವಾಸಿ ನಾಗೇಂದ್ರ (44) ಆತ್ಮಹತ್ಯೆ ಮಾಡಿಕೊಂಡವರು. ವಿಜಯ ಬ್ಯಾಂಕ್‌ನಲ್ಲಿ ಸಾಲ ಮಾಡಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ. ಆದರೆ, ಎಷ್ಟು ಸಾಲ ಮಾಡಿದ್ದಾರೆ ಎಂಬ ಮಾಹಿತಿ ನೀಡಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ನಾಗೇಂದ್ರ ಅವರು ಕಬ್ಬು, ಅಡಿಕೆ, ತೆಂಗು ಬೆಳೆಯುತ್ತಿದ್ದರು. ಬುಧವಾರ ರಾತ್ರಿ ಮನೆಯಲ್ಲಿ ಬೆಳೆಗಳಿಗಾಗಿ ತಂದಿದ್ದ ಕ್ರಿಮಿನಾಶಕ ಸೇ‌ವಿಸಿದ್ದಾರೆ ಎಂದು ಗ್ರಾಮಸ್ಥರೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.

ರಾಮಸಮುದ್ರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಬ್‌ ಇನ್‌ಸ್ಪೆಕ್ಟರ್‌ ತಾಜುದ್ದೀನ್‌ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT