<p><strong>ಚಾಮರಾಜನಗರ</strong>: ಪ್ರತಿನಿತ್ಯ 7 ತಾಸು ವಿದ್ಯುತ್ ಸರಬರಾಜು ಮಾಡಬೇಕು ಎಂದು ಒತ್ತಾಯಿಸಿ ತಾಲ್ಲೂಕಿನ ಪುಣಜನೂರು ಕೋಳಿಪಾಳ್ಯ, ಮೂಕನಪಾಳ್ಯ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ರೈತರು ಹಾಗೂ ಗ್ರಾಮಸ್ಥರು ಹರದನಹಳ್ಳಿ ವಿದ್ಯುತ್ ಸರಬರಾಜು ಉಪ ವಿಭಾಗ ಕಚೇರಿಯಲ್ಲಿ ಎಇಇಗೆ ಮನವಿ ಸಲ್ಲಿಸಿದರು.</p>.<p>ನಂತರ ಮಾತನಾಡಿದ ಗ್ರಾಮ ಪಂಚಾಯಿತಿ ಸದಸ್ಯ ಚಂದ್ರಶೇಖರ್ ‘ಅಸಮರ್ಪಕ ವಿದ್ಯುತ್ ಸರಬರಾಜಿನಿಂದ ರೈತರು ತೂಂದರೆ ಅನುಭವಿಸುತ್ತಿದ್ದಾರೆ. ಪುಣಜನೂರು ಗ್ರಾಮದಲ್ಲಿ 100ಕ್ಕೂ ಹೆಚ್ಚು ಬೋರ್ವೆಲ್ಗಳಿದ್ದು ವಿದ್ಯುತ್ ವ್ಯತ್ಯಯದಿಂದ ಬೆಳೆಗಳಿಗೆ ಸಮಯಕ್ಕೆ ಸರಿಯಾಗಿ ನೀರು ಹಾಯಿಸಲು ಸಾಧ್ಯವಾಗುತ್ತಿಲ್ಲ. ಕತ್ತಲೆಯಲ್ಲಿ ಜಮೀನುಗಳಿಗೆ ತಿರುಗಾಡಲು ಕಷ್ಟವಾಗುತ್ತಿದೆ.</p>.<p>ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಘವಿಸಿದ್ದು ನಾಗರಿಕರು ತೊಂದರೆ ಅನುಭವಿಸುತ್ತಿದ್ದಾರೆ. ಕೂಡಲೇ ಅಧಿಕಾರಿಗಳು ಸಮಸ್ಯೆ ನಿವಾರಿಸಬೇಕು ಎಂದು ರೈತರು ಒತ್ತಾಯಿಸಿದರು.</p>.<p>ಎಇಇ ದ್ರುಪದ್ ಮಾತನಾಡಿ ಶೀಘ್ರ ರೈತರ ಸಮಸ್ಯೆ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು.</p>.<p>ಈ ಸಂದರ್ಭ ರಂಗನಾಥ್, ಸ್ವಾಮಿನಾಥನ್, ನಂಜುಂಡನಾಯ್ಕ, ಬಸವರಾಜು, ಬಂಗಾರು, ನಟರಾಜು, ರಾಮಲಿಂಗನಾಯ್ಕ, ರಮೇಶ ನಾಯ್ಕ, ಎಸ್.ಮಹದೇವನಾಯ್ಜ, ಬಾಲಾಜಿ, ಗಂಗನಾಯ್ಕ, ಶ್ರೀಧರ ಸೇರಿದಂತೆ ರೈತರು ಮತ್ತು ಗ್ರಾಮಸ್ಥರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ</strong>: ಪ್ರತಿನಿತ್ಯ 7 ತಾಸು ವಿದ್ಯುತ್ ಸರಬರಾಜು ಮಾಡಬೇಕು ಎಂದು ಒತ್ತಾಯಿಸಿ ತಾಲ್ಲೂಕಿನ ಪುಣಜನೂರು ಕೋಳಿಪಾಳ್ಯ, ಮೂಕನಪಾಳ್ಯ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ರೈತರು ಹಾಗೂ ಗ್ರಾಮಸ್ಥರು ಹರದನಹಳ್ಳಿ ವಿದ್ಯುತ್ ಸರಬರಾಜು ಉಪ ವಿಭಾಗ ಕಚೇರಿಯಲ್ಲಿ ಎಇಇಗೆ ಮನವಿ ಸಲ್ಲಿಸಿದರು.</p>.<p>ನಂತರ ಮಾತನಾಡಿದ ಗ್ರಾಮ ಪಂಚಾಯಿತಿ ಸದಸ್ಯ ಚಂದ್ರಶೇಖರ್ ‘ಅಸಮರ್ಪಕ ವಿದ್ಯುತ್ ಸರಬರಾಜಿನಿಂದ ರೈತರು ತೂಂದರೆ ಅನುಭವಿಸುತ್ತಿದ್ದಾರೆ. ಪುಣಜನೂರು ಗ್ರಾಮದಲ್ಲಿ 100ಕ್ಕೂ ಹೆಚ್ಚು ಬೋರ್ವೆಲ್ಗಳಿದ್ದು ವಿದ್ಯುತ್ ವ್ಯತ್ಯಯದಿಂದ ಬೆಳೆಗಳಿಗೆ ಸಮಯಕ್ಕೆ ಸರಿಯಾಗಿ ನೀರು ಹಾಯಿಸಲು ಸಾಧ್ಯವಾಗುತ್ತಿಲ್ಲ. ಕತ್ತಲೆಯಲ್ಲಿ ಜಮೀನುಗಳಿಗೆ ತಿರುಗಾಡಲು ಕಷ್ಟವಾಗುತ್ತಿದೆ.</p>.<p>ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಘವಿಸಿದ್ದು ನಾಗರಿಕರು ತೊಂದರೆ ಅನುಭವಿಸುತ್ತಿದ್ದಾರೆ. ಕೂಡಲೇ ಅಧಿಕಾರಿಗಳು ಸಮಸ್ಯೆ ನಿವಾರಿಸಬೇಕು ಎಂದು ರೈತರು ಒತ್ತಾಯಿಸಿದರು.</p>.<p>ಎಇಇ ದ್ರುಪದ್ ಮಾತನಾಡಿ ಶೀಘ್ರ ರೈತರ ಸಮಸ್ಯೆ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು.</p>.<p>ಈ ಸಂದರ್ಭ ರಂಗನಾಥ್, ಸ್ವಾಮಿನಾಥನ್, ನಂಜುಂಡನಾಯ್ಕ, ಬಸವರಾಜು, ಬಂಗಾರು, ನಟರಾಜು, ರಾಮಲಿಂಗನಾಯ್ಕ, ರಮೇಶ ನಾಯ್ಕ, ಎಸ್.ಮಹದೇವನಾಯ್ಜ, ಬಾಲಾಜಿ, ಗಂಗನಾಯ್ಕ, ಶ್ರೀಧರ ಸೇರಿದಂತೆ ರೈತರು ಮತ್ತು ಗ್ರಾಮಸ್ಥರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>