<p><strong>ಚಾಮರಾಜನಗರ: </strong>ಕೃಷಿ ಕಾಯ್ದೆಗಳನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿ ರೈತ ಸಂಘಟನೆಗಳ ಒಕ್ಕೂಟವಾದ ಸಂಯುಕ್ತ ಕಿಸಾನ್ ಮೋರ್ಚಾ ಗುರುವಾರ ಕರೆ ನೀಡಿದ್ದ ರೈಲು ತಡೆ ಚಳವಳಿ ಅಂಗವಾಗಿ ನಗರದಲ್ಲೂ ರೈತ ಸಂಘದ ಪದಾಧಿಕಾರಿಗಳು ರೈಲು ತಡೆಗೆ ಯತ್ನಿಸಿದರು.</p>.<p>ನಗರದ ರೈಲು ನಿಲ್ದಾಣದಲ್ಲಿ ಸೇರಿದ ರೈತ ಮುಖಂಡರು, ಕೇಂದ್ರ ಸರ್ಕಾರ, ನರೇಂದ್ರ ಮೋದಿ ವಿರುದ್ಧ ಘೋಷಣೆಗಳನ್ನು ಕೂಗಿದರು. ‘ರೈತರಿಗೆ ಮರಣಶಾಸನವಾಗಿರುವ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು’ ಎಂದು ಒತ್ತಾಯಿಸಿದರು.</p>.<p>ನಂತರ ರೈಲು ನಿಲ್ದಾಣದಒಳಕ್ಕೆ ನುಗ್ಗಲು ಯತ್ನಿಸಿದರು. ರೈಲ್ವೆ ಹಾಗೂ ಸ್ಥಳೀಯ ಪೊಲೀಸರು ಪ್ರವೇಶ ದ್ವಾರವನ್ನು ಮುಚ್ಚಿ ಒಳಗೆ ಹೋಗುವುದನ್ನು ತಡೆದರು.</p>.<p>ಪ್ರತಿಭಟನಕಾರರು ಬಲವಂತವಾಗಿ ಬಾಗಿಲನ್ನು ತೆರೆಯಲು ಯತ್ನಿಸಿದಾಗ, ಪೊಲೀಸರು ಅವರನ್ನು ವಶಕ್ಕೆ ಪಡೆದು, ಎತ್ತಿಕೊಂಡು ಹೊರಗೆ ಕರೆದೊಯ್ದರು.</p>.<p>ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಹೊನ್ನೂರು ಪ್ರಕಾಶ್, ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ್, ಹೊನ್ನೂರು ಬಸವಣ್ಣ,ಹೆಗ್ಗೋಠಾರ ವಿಜಿ, ಗೂಳಿಪುರ ದೀಪು, ಹೆಗ್ಗವಾಡಿಪುರ ಮಹದೇವಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ: </strong>ಕೃಷಿ ಕಾಯ್ದೆಗಳನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿ ರೈತ ಸಂಘಟನೆಗಳ ಒಕ್ಕೂಟವಾದ ಸಂಯುಕ್ತ ಕಿಸಾನ್ ಮೋರ್ಚಾ ಗುರುವಾರ ಕರೆ ನೀಡಿದ್ದ ರೈಲು ತಡೆ ಚಳವಳಿ ಅಂಗವಾಗಿ ನಗರದಲ್ಲೂ ರೈತ ಸಂಘದ ಪದಾಧಿಕಾರಿಗಳು ರೈಲು ತಡೆಗೆ ಯತ್ನಿಸಿದರು.</p>.<p>ನಗರದ ರೈಲು ನಿಲ್ದಾಣದಲ್ಲಿ ಸೇರಿದ ರೈತ ಮುಖಂಡರು, ಕೇಂದ್ರ ಸರ್ಕಾರ, ನರೇಂದ್ರ ಮೋದಿ ವಿರುದ್ಧ ಘೋಷಣೆಗಳನ್ನು ಕೂಗಿದರು. ‘ರೈತರಿಗೆ ಮರಣಶಾಸನವಾಗಿರುವ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು’ ಎಂದು ಒತ್ತಾಯಿಸಿದರು.</p>.<p>ನಂತರ ರೈಲು ನಿಲ್ದಾಣದಒಳಕ್ಕೆ ನುಗ್ಗಲು ಯತ್ನಿಸಿದರು. ರೈಲ್ವೆ ಹಾಗೂ ಸ್ಥಳೀಯ ಪೊಲೀಸರು ಪ್ರವೇಶ ದ್ವಾರವನ್ನು ಮುಚ್ಚಿ ಒಳಗೆ ಹೋಗುವುದನ್ನು ತಡೆದರು.</p>.<p>ಪ್ರತಿಭಟನಕಾರರು ಬಲವಂತವಾಗಿ ಬಾಗಿಲನ್ನು ತೆರೆಯಲು ಯತ್ನಿಸಿದಾಗ, ಪೊಲೀಸರು ಅವರನ್ನು ವಶಕ್ಕೆ ಪಡೆದು, ಎತ್ತಿಕೊಂಡು ಹೊರಗೆ ಕರೆದೊಯ್ದರು.</p>.<p>ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಹೊನ್ನೂರು ಪ್ರಕಾಶ್, ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ್, ಹೊನ್ನೂರು ಬಸವಣ್ಣ,ಹೆಗ್ಗೋಠಾರ ವಿಜಿ, ಗೂಳಿಪುರ ದೀಪು, ಹೆಗ್ಗವಾಡಿಪುರ ಮಹದೇವಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>