<p><strong>ಗುಂಡ್ಲುಪೇಟೆ:</strong> ತಾಲ್ಲೂಕಿನ ಬೇರಂಬಾಡಿ ಗ್ರಾಮದಲ್ಲಿ ಸಾಮೂಹಿಕ ನಾಯಕತ್ವದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಗ್ರಾಮ ಘಟಕವನ್ನು ರೈತದ ಜಿಲ್ಲಾ ಘಟಕದ ಅಧ್ಯಕ್ಷ ಹೊನ್ನೂರು ಪ್ರಕಾಶ್ ಶನಿವಾರ ರಾತ್ರಿ ಉದ್ಘಾಟಿಸಿದರು.</p>.<p>ಗ್ರಾಮ ಘಟಕದ ನಾಮಫಲಕವನ್ನು ಅನಾವರಣಗೊಳಿಸಿ ಮಾತನಾಡಿದ ಅವರು, ‘ರೈತ ಸಂಘವು ಶ್ರೀಸಾಮಾನ್ಯರಿಗೆ, ರೈತರಿಗೆ ಕಾನೂನಿನ ಪಾಠಶಾಲೆ ಇದ್ದಂತೆ. ಚಳವಳಿ ಜೊತೆಗೆ ಕಾನೂನಿನ ಬಗ್ಗೆಯೂ ತಿಳಿಸಲಿದೆ’ ಎಂದರು.</p>.<p>‘ಪ್ರಶ್ನೆ ಮಾಡುವ ಮನೋಭಾವನೆ ಬೆಳೆಸಿಕೊಂಡಾಗ ಮಾತ್ರ ಬದಲಾವಣೆ ಸಾಧ್ಯ, ನಮ್ಮಿಂದ ಆಯ್ಕೆಯಾದವರನ್ನು ಮೊದಲು ಪ್ರಶ್ನೆ ಮಾಡಬೇಕು. ಕೆಲ ಅವೈಜ್ಞಾನಿಕ ನಿರ್ಧಾರಗಳ ವಿರುದ್ಧ ಬೀದಿಗಳಿದು ಹೋರಾಟ ಮಾಡಿದರೆ ಮಾತ್ರ ನ್ಯಾಯ ಸಿಗುತ್ತದೆ’ ಎಂದು ತಿಳಿಸಿದರು.</p>.<p>ರೈತ ಮುಖಂಡರಾದ ಲೋಕೇಶ್, ಷಣ್ಮುಖಸ್ವಾಮಿ, ಕೂತನೂರು ಗಣೇಶ, ಭೀಮನಬೀಡು ರಾಜು, ಸ್ವಾಮಿ, ಮಾರಶೆಟ್ಟಿ, ಸಿದ್ದಪ್ಪ, ಶಿವಪುರ ಮಂಜಪ್ಪ, ಮರಿಸಿದ್ದಶೆಟ್ಟಿ ಹಾಗೂ ಬೇರಂಬಾಡಿ ಗ್ರಾಮಸ್ಥರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಂಡ್ಲುಪೇಟೆ:</strong> ತಾಲ್ಲೂಕಿನ ಬೇರಂಬಾಡಿ ಗ್ರಾಮದಲ್ಲಿ ಸಾಮೂಹಿಕ ನಾಯಕತ್ವದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಗ್ರಾಮ ಘಟಕವನ್ನು ರೈತದ ಜಿಲ್ಲಾ ಘಟಕದ ಅಧ್ಯಕ್ಷ ಹೊನ್ನೂರು ಪ್ರಕಾಶ್ ಶನಿವಾರ ರಾತ್ರಿ ಉದ್ಘಾಟಿಸಿದರು.</p>.<p>ಗ್ರಾಮ ಘಟಕದ ನಾಮಫಲಕವನ್ನು ಅನಾವರಣಗೊಳಿಸಿ ಮಾತನಾಡಿದ ಅವರು, ‘ರೈತ ಸಂಘವು ಶ್ರೀಸಾಮಾನ್ಯರಿಗೆ, ರೈತರಿಗೆ ಕಾನೂನಿನ ಪಾಠಶಾಲೆ ಇದ್ದಂತೆ. ಚಳವಳಿ ಜೊತೆಗೆ ಕಾನೂನಿನ ಬಗ್ಗೆಯೂ ತಿಳಿಸಲಿದೆ’ ಎಂದರು.</p>.<p>‘ಪ್ರಶ್ನೆ ಮಾಡುವ ಮನೋಭಾವನೆ ಬೆಳೆಸಿಕೊಂಡಾಗ ಮಾತ್ರ ಬದಲಾವಣೆ ಸಾಧ್ಯ, ನಮ್ಮಿಂದ ಆಯ್ಕೆಯಾದವರನ್ನು ಮೊದಲು ಪ್ರಶ್ನೆ ಮಾಡಬೇಕು. ಕೆಲ ಅವೈಜ್ಞಾನಿಕ ನಿರ್ಧಾರಗಳ ವಿರುದ್ಧ ಬೀದಿಗಳಿದು ಹೋರಾಟ ಮಾಡಿದರೆ ಮಾತ್ರ ನ್ಯಾಯ ಸಿಗುತ್ತದೆ’ ಎಂದು ತಿಳಿಸಿದರು.</p>.<p>ರೈತ ಮುಖಂಡರಾದ ಲೋಕೇಶ್, ಷಣ್ಮುಖಸ್ವಾಮಿ, ಕೂತನೂರು ಗಣೇಶ, ಭೀಮನಬೀಡು ರಾಜು, ಸ್ವಾಮಿ, ಮಾರಶೆಟ್ಟಿ, ಸಿದ್ದಪ್ಪ, ಶಿವಪುರ ಮಂಜಪ್ಪ, ಮರಿಸಿದ್ದಶೆಟ್ಟಿ ಹಾಗೂ ಬೇರಂಬಾಡಿ ಗ್ರಾಮಸ್ಥರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>