<p><strong>ಯಳಂದೂರು</strong>: ‘ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ರೈತರು ಪರಿಣಾಮಕಾರಿಯಾಗಿ ಸದ್ಭಳಕೆ ಮಾಡಿಕೊಳ್ಳಬೇಕು’ ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಎನ್.ಜಿ.ಅಮೃತೇಶ್ವರ ಹೇಳಿದರು.</p>.<p>ಪಟ್ಟಣದಲ್ಲಿ ಶನಿವಾರ ಆಯೋಜಿಸಿದ್ದ ಪಿ.ಎಂ.ಕಿಸಾನ್ ಉತ್ಸವ್ ದಿವಸ್ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ತಾಲ್ಲೂಕಿನಲ್ಲಿ 606 ಮಂದಿ ಹಿಡುವಳಿದಾರರನ್ನು ಒಂದೇ ಕುಟುಂಬದ ಸದಸ್ಯರೆಂದು ಗುರುತಿಸಲಾಗಿದೆ. 602 ಕೃಷಿಕರು ಇ-ಕೆವೈಸಿ ದಾಖಲೆ ಸಲ್ಲಿಸಿಲ್ಲ. ಇದರಿಂದ ಸಾಗುವಳಿದಾರರು ಆರ್ಥಿಕ ನೆರವಿನಿಂದ ವಂಚಿತರಾಗಿದ್ದಾರೆ.ಸರಿಯಾಗಿ ನೋಂದಾಯಿಸಿದ ರೈತರಿಗೆ 20ನೇ ಕಂತಿನ ಆರ್ಥಿಕ ನೆರವು ವರ್ಗಾವಣೆ ಮಾಡಲಾಗತ್ತದೆ’ ಎಂದರು.</p>.<p>‘ಕೃಷಿಕರು ಪತಿ, ಪತ್ನಿ ಆಧಾರ್, ಆರ್ಟಿಸಿ, ಪಡಿತರ ಚೀಟಿ ನಕಲು ಪ್ರತಿ ಸಲ್ಲಿಸಿ ಇ-ಕೆವೈಸಿಗೆ ಅರ್ಜಿ ಸಲ್ಲಿಸಬಹುದು. ಸೌಲಭ್ಯ ಪಡೆದು ಕೊಳ್ಳುತ್ತಿರುವ ಫಲಾನುಭವಿಗಳು ಮರಣ ಹೊಂದಿದ್ದರೆ ಮರಣ ಪ್ರಮಾಣ ಪತ್ರ ಹಾಗೂ ಆಧಾರ ಸಲ್ಲಿಸಬೇಕು’ ಎಂದು ತಿಳಿಸಿದರು.</p>.<p>‘ತಾಂತ್ರಿಕ ಅಧಿಕಾರಿ ಎ.ವೆಂಕಟರಂಗಶೆಟ್ಟಿ, ‘ಸರ್ಕಾರ ಹತ್ತಾರು ಯೋಜನೆಗಳನ್ನು ರೈತರಿಗೆ ಜಾರಿಗೊಳಿಸಿದೆ. ಅಂಚಿನ ಕೃಷಿಕರು ಮೊಬೈಲ್ ಬಳಸಿ ನೋಂದಾಯಿಸಿಕೊಳ್ಳಬಹುದು. ಇಲ್ಲವೆ ಇಲಾಖೆಗೆ ದಾಖಲಾತಿ ನೀಡಿದರೆ ಸಮಸ್ಯೆಗಳನ್ನು ಸುಲಭವಾಗಿ ನಿವಾರಿಸಬಹುದು’ ಎಂದು ವಿವರಿಸಿದರು.</p>.<p>ರೈತ ಮುಖಂಡರಾದ ರಾಜಣ್ಣ, ಮಹದೇವಶೆಟ್ಟಿ, ನಂಜುಂಡಯ್ಯ, ಜೋತಿ ಹಾಗೂ ಮಹದೇವಮ್ಮ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಳಂದೂರು</strong>: ‘ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ರೈತರು ಪರಿಣಾಮಕಾರಿಯಾಗಿ ಸದ್ಭಳಕೆ ಮಾಡಿಕೊಳ್ಳಬೇಕು’ ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಎನ್.ಜಿ.ಅಮೃತೇಶ್ವರ ಹೇಳಿದರು.</p>.<p>ಪಟ್ಟಣದಲ್ಲಿ ಶನಿವಾರ ಆಯೋಜಿಸಿದ್ದ ಪಿ.ಎಂ.ಕಿಸಾನ್ ಉತ್ಸವ್ ದಿವಸ್ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ತಾಲ್ಲೂಕಿನಲ್ಲಿ 606 ಮಂದಿ ಹಿಡುವಳಿದಾರರನ್ನು ಒಂದೇ ಕುಟುಂಬದ ಸದಸ್ಯರೆಂದು ಗುರುತಿಸಲಾಗಿದೆ. 602 ಕೃಷಿಕರು ಇ-ಕೆವೈಸಿ ದಾಖಲೆ ಸಲ್ಲಿಸಿಲ್ಲ. ಇದರಿಂದ ಸಾಗುವಳಿದಾರರು ಆರ್ಥಿಕ ನೆರವಿನಿಂದ ವಂಚಿತರಾಗಿದ್ದಾರೆ.ಸರಿಯಾಗಿ ನೋಂದಾಯಿಸಿದ ರೈತರಿಗೆ 20ನೇ ಕಂತಿನ ಆರ್ಥಿಕ ನೆರವು ವರ್ಗಾವಣೆ ಮಾಡಲಾಗತ್ತದೆ’ ಎಂದರು.</p>.<p>‘ಕೃಷಿಕರು ಪತಿ, ಪತ್ನಿ ಆಧಾರ್, ಆರ್ಟಿಸಿ, ಪಡಿತರ ಚೀಟಿ ನಕಲು ಪ್ರತಿ ಸಲ್ಲಿಸಿ ಇ-ಕೆವೈಸಿಗೆ ಅರ್ಜಿ ಸಲ್ಲಿಸಬಹುದು. ಸೌಲಭ್ಯ ಪಡೆದು ಕೊಳ್ಳುತ್ತಿರುವ ಫಲಾನುಭವಿಗಳು ಮರಣ ಹೊಂದಿದ್ದರೆ ಮರಣ ಪ್ರಮಾಣ ಪತ್ರ ಹಾಗೂ ಆಧಾರ ಸಲ್ಲಿಸಬೇಕು’ ಎಂದು ತಿಳಿಸಿದರು.</p>.<p>‘ತಾಂತ್ರಿಕ ಅಧಿಕಾರಿ ಎ.ವೆಂಕಟರಂಗಶೆಟ್ಟಿ, ‘ಸರ್ಕಾರ ಹತ್ತಾರು ಯೋಜನೆಗಳನ್ನು ರೈತರಿಗೆ ಜಾರಿಗೊಳಿಸಿದೆ. ಅಂಚಿನ ಕೃಷಿಕರು ಮೊಬೈಲ್ ಬಳಸಿ ನೋಂದಾಯಿಸಿಕೊಳ್ಳಬಹುದು. ಇಲ್ಲವೆ ಇಲಾಖೆಗೆ ದಾಖಲಾತಿ ನೀಡಿದರೆ ಸಮಸ್ಯೆಗಳನ್ನು ಸುಲಭವಾಗಿ ನಿವಾರಿಸಬಹುದು’ ಎಂದು ವಿವರಿಸಿದರು.</p>.<p>ರೈತ ಮುಖಂಡರಾದ ರಾಜಣ್ಣ, ಮಹದೇವಶೆಟ್ಟಿ, ನಂಜುಂಡಯ್ಯ, ಜೋತಿ ಹಾಗೂ ಮಹದೇವಮ್ಮ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>