<p><strong>ಸಂತೇಮರಹಳ್ಳಿ</strong>: ಪೋಷಕರೊಬ್ಬರು ತಮ್ಮ ಮಗನ ಹುಟ್ಟುಹಬ್ಬದ ಅಂಗವಾಗಿ, ಶಿಥಿಲಾವಸ್ಥೆ ತಲುಪಿದ್ದ ಸರ್ಕಾರಿ ಶಾಲಾ ಕಟ್ಟಡವನ್ನು ದುರಸ್ತಿಗೊಳಿಸಿ ಗ್ರಾಮಕ್ಕೆ ಮಾದರಿಯಾಗಿದ್ದಾರೆ.</p>.<p>ಇತ್ತೀಚಿನ ದಿನಗಳಲ್ಲಿ ಪೋಷಕರು ತಮ್ಮ ಮಕ್ಕಳ ಹುಟ್ಟುಹಬ್ಬವನ್ನು ಸಾವಿರಾರು ರೂಪಾಯಿ ಖರ್ಚು ಮಾಡಿ, ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಳ್ಳುವುದು ಸಾಮಾನ್ಯವಾಗಿದೆ. ಆದರೆ, ಇಲ್ಲಿ ಪೋಷಕರೊಬ್ಬರು ತಮ್ಮ ಮಗನ ಹುಟ್ಟುಹಬ್ಬದ ಅಂಗವಾಗಿ ಸರ್ಕಾರಿ ಶಾಲೆಯೊಂದಕ್ಕೆ ಸುಣ್ಣಬಣ್ಣ ಬಳಿಸಿ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಸಹಕಾರಿಯಾಗಿದ್ದಾರೆ.</p>.<p>ಸಮೀಪದ ತೆಂಕಲಮೋಳೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಕಟ್ಟಡ ಶಿಥಿಲಾವಸ್ಥೆಗೊಂಡಿತ್ತು. ಈ ಶಾಲೆಯಲ್ಲೇ ಮಕ್ಕಳು ಆತಂಕದಲ್ಲೇ ಪಾಠ ಕೇಳುವಂತಾಗಿತ್ತು. ಕುದೇರು ಗ್ರಾಮದ ಶಿವಣ್ಣ ಎಂಬುವರು ತಮ್ಮ ಮಗ ದ್ರುವಂತ್ ಹುಟ್ಟುಹಬ್ಬದ ಅಂಗವಾಗಿ ತೆಂಕಲಮೋಳೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ₹50 ಸಾವಿರ ಖರ್ಚು ಮಾಡಿ, ದುರಸ್ತಿಗೊಳಿಸಿ, ಸುಣ್ಣ ಬಣ್ಣ ಬಳಿಸಿ, ಹೊಸ ಕಟ್ಟಡವಾಗಿ ಕಾಣುವಂತೆ ಮಾಡಿದ್ದಾರೆ. ಇವರ ಮಾದರಿ ಕೆಲಸಕ್ಕೆ ಗ್ರಾಮಸ್ಥರು ಹಾಗೂ ಶಿಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂತೇಮರಹಳ್ಳಿ</strong>: ಪೋಷಕರೊಬ್ಬರು ತಮ್ಮ ಮಗನ ಹುಟ್ಟುಹಬ್ಬದ ಅಂಗವಾಗಿ, ಶಿಥಿಲಾವಸ್ಥೆ ತಲುಪಿದ್ದ ಸರ್ಕಾರಿ ಶಾಲಾ ಕಟ್ಟಡವನ್ನು ದುರಸ್ತಿಗೊಳಿಸಿ ಗ್ರಾಮಕ್ಕೆ ಮಾದರಿಯಾಗಿದ್ದಾರೆ.</p>.<p>ಇತ್ತೀಚಿನ ದಿನಗಳಲ್ಲಿ ಪೋಷಕರು ತಮ್ಮ ಮಕ್ಕಳ ಹುಟ್ಟುಹಬ್ಬವನ್ನು ಸಾವಿರಾರು ರೂಪಾಯಿ ಖರ್ಚು ಮಾಡಿ, ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಳ್ಳುವುದು ಸಾಮಾನ್ಯವಾಗಿದೆ. ಆದರೆ, ಇಲ್ಲಿ ಪೋಷಕರೊಬ್ಬರು ತಮ್ಮ ಮಗನ ಹುಟ್ಟುಹಬ್ಬದ ಅಂಗವಾಗಿ ಸರ್ಕಾರಿ ಶಾಲೆಯೊಂದಕ್ಕೆ ಸುಣ್ಣಬಣ್ಣ ಬಳಿಸಿ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಸಹಕಾರಿಯಾಗಿದ್ದಾರೆ.</p>.<p>ಸಮೀಪದ ತೆಂಕಲಮೋಳೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಕಟ್ಟಡ ಶಿಥಿಲಾವಸ್ಥೆಗೊಂಡಿತ್ತು. ಈ ಶಾಲೆಯಲ್ಲೇ ಮಕ್ಕಳು ಆತಂಕದಲ್ಲೇ ಪಾಠ ಕೇಳುವಂತಾಗಿತ್ತು. ಕುದೇರು ಗ್ರಾಮದ ಶಿವಣ್ಣ ಎಂಬುವರು ತಮ್ಮ ಮಗ ದ್ರುವಂತ್ ಹುಟ್ಟುಹಬ್ಬದ ಅಂಗವಾಗಿ ತೆಂಕಲಮೋಳೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ₹50 ಸಾವಿರ ಖರ್ಚು ಮಾಡಿ, ದುರಸ್ತಿಗೊಳಿಸಿ, ಸುಣ್ಣ ಬಣ್ಣ ಬಳಿಸಿ, ಹೊಸ ಕಟ್ಟಡವಾಗಿ ಕಾಣುವಂತೆ ಮಾಡಿದ್ದಾರೆ. ಇವರ ಮಾದರಿ ಕೆಲಸಕ್ಕೆ ಗ್ರಾಮಸ್ಥರು ಹಾಗೂ ಶಿಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>