<p><strong>ಚಾಮರಾಜನಗರ: </strong>ಭೂಪರಿವರ್ತನೆಗಾಗಿ ನಿರಕ್ಷೇಪಣಾ ಪ್ರಮಾಣಪತ್ರ (ಎನ್ಒಸಿ) ನೀಡಲು ₹3,000 ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅರಣ್ಯ ಇಲಾಖೆಯ ಪ್ರಥಮ ದರ್ಜೆ ಸಹಾಯಕ (ಎಫ್ಡಿಎ) ಬುಧವಾರ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.</p>.<p>ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪುಟ್ಟಸ್ವಾಮಿ ಅವರು ಎಸಿಬಿ ಬಲೆಗೆ ಬಿದ್ದವರು.</p>.<p>ಹರದನಹಳ್ಳಿಯ ಆರ್.ಲಿಂಗರಾಜು ಅವರು ಭೂಪರಿವರ್ತನೆಗಾಗಿ ನಿರಕ್ಷೇಪಣಾ ಪ್ರಮಾಣಪತ್ರಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಪುಟ್ಟಸ್ವಾಮಿ ಅವರು ಎನ್ಒಸಿ ನೀಡಲು ₹3,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮಂಗಳವಾರ ₹500 ಪಡೆದಿದ್ದರು. ಉಳಿದ ₹2,500 ಅನ್ನು ಬುಧವಾರ ನೀಡುವಂತೆ ಹೇಳಿದ್ದರು. ಲಿಂಗರಾಜು ಅವರು ನಗರದ ಎಸಿಬಿ ಪೊಲೀಸರಿಗೆ ದೂರು ನೀಡಿದ್ದರು.</p>.<p class="Subhead">ಕೆಎಸ್ಆರ್ಟಿಸಿ ನಿಲ್ದಾಣದಲ್ಲಿ ಬಲೆಗೆ: ದೂರುದಾರ ಬುಧವಾರ ಸಂಜೆ ಬಿಆರ್ಟಿ ಕಚೇರಿಗೆ ದುಡ್ಡು ತೆಗೆದುಕೊಂಡು ಹೋಗಿದ್ದರು. ಎಸಿಬಿ ಅಧಿಕಾರಿಗಳು ಕೂಡ ಅಲ್ಲೇ ಕಾದಿದ್ದರು.</p>.<p>‘ಪುಟ್ಟಸ್ವಾಮಿ ಅವರು ಅಲ್ಲಿ ದುಡ್ಡು ಪಡೆಯದೆ, ಕೆಎಸ್ಆರ್ಟಿಸಿ ಬಸ್ ನಿಲ್ದಾಣಕ್ಕೆ ಬರುವಂತೆ, ಅಲ್ಲೇ ಹಣಕೊಡುವಂತೆ ದೂರುದಾರರಿಗೆ ಸೂಚಿಸಿದರು. ₹2,500 ಪಡೆಯುತ್ತಿದ್ದ ಸಂದರ್ಭದಲ್ಲಿ ನಮ್ಮ ಕೈಗೆ ಸಿಕ್ಕಿಬಿದ್ದರು’ ಎಂದು ಎಸಿಬಿ ಡಿವೈಎಸ್ಪಿ ಸದಾನಂದ ಎ.ಟಿ. ಅವರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಪುಟ್ಟಸ್ವಾಮಿ ಅವರನ್ನು ವಶಕ್ಕೆ ಪಡೆದುಕೊಳ್ಳಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ: </strong>ಭೂಪರಿವರ್ತನೆಗಾಗಿ ನಿರಕ್ಷೇಪಣಾ ಪ್ರಮಾಣಪತ್ರ (ಎನ್ಒಸಿ) ನೀಡಲು ₹3,000 ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅರಣ್ಯ ಇಲಾಖೆಯ ಪ್ರಥಮ ದರ್ಜೆ ಸಹಾಯಕ (ಎಫ್ಡಿಎ) ಬುಧವಾರ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.</p>.<p>ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪುಟ್ಟಸ್ವಾಮಿ ಅವರು ಎಸಿಬಿ ಬಲೆಗೆ ಬಿದ್ದವರು.</p>.<p>ಹರದನಹಳ್ಳಿಯ ಆರ್.ಲಿಂಗರಾಜು ಅವರು ಭೂಪರಿವರ್ತನೆಗಾಗಿ ನಿರಕ್ಷೇಪಣಾ ಪ್ರಮಾಣಪತ್ರಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಪುಟ್ಟಸ್ವಾಮಿ ಅವರು ಎನ್ಒಸಿ ನೀಡಲು ₹3,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮಂಗಳವಾರ ₹500 ಪಡೆದಿದ್ದರು. ಉಳಿದ ₹2,500 ಅನ್ನು ಬುಧವಾರ ನೀಡುವಂತೆ ಹೇಳಿದ್ದರು. ಲಿಂಗರಾಜು ಅವರು ನಗರದ ಎಸಿಬಿ ಪೊಲೀಸರಿಗೆ ದೂರು ನೀಡಿದ್ದರು.</p>.<p class="Subhead">ಕೆಎಸ್ಆರ್ಟಿಸಿ ನಿಲ್ದಾಣದಲ್ಲಿ ಬಲೆಗೆ: ದೂರುದಾರ ಬುಧವಾರ ಸಂಜೆ ಬಿಆರ್ಟಿ ಕಚೇರಿಗೆ ದುಡ್ಡು ತೆಗೆದುಕೊಂಡು ಹೋಗಿದ್ದರು. ಎಸಿಬಿ ಅಧಿಕಾರಿಗಳು ಕೂಡ ಅಲ್ಲೇ ಕಾದಿದ್ದರು.</p>.<p>‘ಪುಟ್ಟಸ್ವಾಮಿ ಅವರು ಅಲ್ಲಿ ದುಡ್ಡು ಪಡೆಯದೆ, ಕೆಎಸ್ಆರ್ಟಿಸಿ ಬಸ್ ನಿಲ್ದಾಣಕ್ಕೆ ಬರುವಂತೆ, ಅಲ್ಲೇ ಹಣಕೊಡುವಂತೆ ದೂರುದಾರರಿಗೆ ಸೂಚಿಸಿದರು. ₹2,500 ಪಡೆಯುತ್ತಿದ್ದ ಸಂದರ್ಭದಲ್ಲಿ ನಮ್ಮ ಕೈಗೆ ಸಿಕ್ಕಿಬಿದ್ದರು’ ಎಂದು ಎಸಿಬಿ ಡಿವೈಎಸ್ಪಿ ಸದಾನಂದ ಎ.ಟಿ. ಅವರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಪುಟ್ಟಸ್ವಾಮಿ ಅವರನ್ನು ವಶಕ್ಕೆ ಪಡೆದುಕೊಳ್ಳಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>