<p><strong>ಚಾಮರಾಜನಗರ</strong>: ಲೋಕಸಭಾ ಚುನಾವಣೆಯಲ್ಲಿ ‘ಬಿಜೆಪಿ ಮತ್ತು ಮೈತ್ರಿಕೂಟವನ್ನು ಸೋಲಿಸಿ’ ಎಂಬ ಅಭಿಯಾನವನ್ನು ಬುಧವಾರ ನಗರದಲ್ಲಿ ನಡೆಸುತ್ತಿದ್ದ ರಾಜ್ಯ ರೈತ ಸಂಘದ ಮುಖಂಡರು ಹಾಗೂ ಕಾರ್ಯಕರ್ತರನ್ನು ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ತಡೆದು, ಅಭಿಯಾನಕ್ಕೆ ಅಡ್ಡಿಪಡಿಸಿದ್ದಾರೆ. ಎರಡೂ ಕಡೆಯವರ ನಡುವೆ ನೂಕಾಟ, ತಳ್ಳಾಟ ನಡೆದಿದೆ. </p>.<p>ರೈತ ಸಂಘದ ರಾಜ್ಯ ಅಧ್ಯಕ್ಷ ಬಡಗಲಪುರ ನಾಗೇಂದ್ರ ಮತ್ತು ಉಪಾಧ್ಯಕ್ಷ ಎ.ಎಂ.ಮಹೇಶ್ ಪ್ರಭು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭಾಸ್ಕರ್ ಹಾಗೂ ಇತರರ ಮೇಲೆ ಬಿಜೆಪಿಯವರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು, ಪೊಲೀಸರಿಗೆ ದೂರು ಕೂಡ ನೀಡಲಾಗಿದೆ. </p>.<p>ಘಟನೆಯ ವಿವರ: ರೈತ ಸಂಘವು ಈ ಚುನಾವಣೆಯಲ್ಲಿ ಬಿಜೆಪಿ, ಮೈತ್ರಿಕೂಟವನ್ನು ಸೋಲಿಸಿ ಎಂಬ ಅಭಿಯಾನ ಹಮ್ಮಿಕೊಂಡಿದ್ದು, ನಗರದಲ್ಲಿ ಅಭಿಯಾನದ ಪರವಾಗಿ ಜನರಿಗೆ ಕರಪತ್ರಗಳನ್ನು ಹಂಚುತ್ತಿತ್ತು. ಸಾಹಿತಿ ದೇವನೂರ ಮಹಾದೇವ ಅವರು ಕೂಡ ಅಭಿಯಾನದಲ್ಲಿ ಭಾಗವಹಿಸಿದ್ದರು. </p>.<p>ಭುವನೇಶ್ವರಿ ವೃತ್ತ, ಕೆೆಎಸ್ಆರ್ಟಿಸಿ ನಿಲ್ದಾಣ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಕರಪತ್ರಗಳನ್ನು ಹಂಚಿದ ಬಳಿಕ ಜನನ ಮಂಟಪದ ಬಳಿ ಬರುತ್ತಿದ್ದಂತೇಯ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ರೈತ ಸಂಘದ ಮುಖಂಡರನ್ನು ಅಡ್ಡಗಟ್ಟಿದರು. ‘ಮೋದಿ, ಬಿಜೆಪಿ ಮೈತ್ರಿಕೂಟಕ್ಕೆ ಮತ ಹಾಕಬಾರದು ಎಂದು ಹೇಳಲು ನೀವು ಯಾರು’ ಎಂದು ಪ್ರಶ್ನಿಸಿದರಲ್ಲದೇ ರೈತ ಮುಖಂಡರನ್ನು ತರಾಟೆಗೆ ತೆಗೆದುಕೊಂಡರು. </p>.<p>ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ರಾಜ್ಯ ಉಪಾಧ್ಯಕ್ಷ ಮಹೇಶ್ ಪ್ರಭು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭಾಸ್ಕರ್, ಮುಖಂಡರಾದ ಶೈಲೇಂದ್ರ ಸೇರಿದಂತೆ ಮುಖಂಡರು ‘ಚುನಾವಣೆಯಲ್ಲಿ ಇಂತಹ ಪಕ್ಷದ ಅಭ್ಯರ್ಥಿಗೆ ಹಾಕುವಂತೆ ಹೇಳುವ ಹಕ್ಕು ನಮಗಿದೆ. ಅದನ್ನು ಪ್ರಶ್ನಿಸಲು ನಿಮಗೆ ಅಧಿಕಾರವಿಲ್ಲ’ ಎಂದು ತಿರುಗೇಟು ನೀಡಿದರು. </p>.<p>ಈ ಸಂದರ್ಭದಲ್ಲಿ ಎರಡೂ ಕಡೆಯವರ ನಡುವೆ, ನೂಕಾಟ, ತಳ್ಳಾಟ ನಡೆಯಿತು. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆಯೇ, ರೈತ ಸಂಘದ ಮುಖಂಡರು ಜನನ ಮಂಟಪದ ಬಳಿಯಿರುವ ತಮ್ಮ ಕಾರ್ಯಾಲಯದ ಎದುರು ಕುಳಿತರು. </p>.<p>ಆ ಹೊತ್ತಿನಲ್ಲಿ ಸ್ಥಳಕ್ಕೆ ಬಂದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಲು ಯತ್ನಿಸಿದರು. ಆದರೆ, ಸುಮ್ಮನಾಗದ ಬಿಜೆಪಿ ಕಾರ್ಯಕರ್ತರು, ರೈತ ಸಂಘದವರನ್ನು ಹೊರಗೆ ಕಳುಹಿಸಿ ಎಂದು ಪೊಲೀಸರಿಗೆ ತಿಳಿಸಿದರು. </p>.<p>‘ರೈತ ಸಂಘದವರು ಪ್ರಚಾರ ಮಾಡಲು ಅನುಮತಿ ಪಡೆದಿಲ್ಲ. ಮಂಗಳವಾರ ನಮೋ ಬ್ರಿಗೇಡ್ನ ಚಕ್ರವರ್ತಿ ಸೂಲಿಬೆಲೆ ಭಾಷಣಕ್ಕೆ ಪೊಲೀಸರು ಅಡ್ಡಿ ಪಡಿಸಿದರು. ಹಾಗೆಯೇ ಇವರ ಮೇಲೂ ಕ್ರಮ ವಹಿಸಬೇಕು’ ಎಂದು ಆಗ್ರಹಿಸಿದರು. </p>.<p><strong>ದೂರು:</strong> ಪರಿಸ್ಥಿತಿ ತಿಳಿಗೊಂಡ ನಂತರ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಭಾಸ್ಕರ್ ಅವರು, ಮುಖಂಡರ ಮೇಲೆ ಹಲ್ಲೆ ನಡೆದಿರುವ ಬಗ್ಗೆ ಪೊಲೀಸರಿಗೆ ದೂರು ನೀಡಿದರು. </p>.<p>ನಂಜೇದೇವನಪುರದಲ್ಲೂ ಘಟನೆ: ತಾಲ್ಲೂಕಿನ ನಂಜೇದೇವನಪುರ ಗ್ರಾಮದಲ್ಲಿ ಸೋಮವಾರ ಅಭಿಯಾನ ನಡೆಸುತ್ತಿದ್ದ ರೈತ ಸಂಘದ ಮುಖಂಡರನ್ನು ಸ್ಥಳೀಯ ಮುಖಂಡರು ತರಾಟೆಗೆ ತೆಗೆದುಕೊಂಡಿದ್ದರು. </p>.<div><blockquote>ಇದು ಆರ್ಎಸ್ಎಸ್ ಬಿಜೆಪಿಯ ಗೂಂಡಾಗಿರಿ. ಇದಕ್ಕೆ ನಾವು ಹೆದರುವುದಿಲ್ಲ. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ವಿಫಲರಾಗಿದ್ದಾರೆ</blockquote><span class="attribution">ಬಡಗಲಪುರ ನಾಗೇಂದ್ರ ರೈತ ಸಂಘದ ರಾಜ್ಯಾಧ್ಯಕ್ಷ</span></div>.<div><blockquote>ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಪೊಲೀಸರು ಪರಿಸ್ಥಿತಿ ತಿಳಿಸಿಗೊಳಿಸಿದ್ದಾರೆ. ದೂರಿನ ಆಧಾರದಲ್ಲಿ ಕ್ರಮ ಕೈಗೊಳ್ಳಲಾಗುವುದು</blockquote><span class="attribution">ಪದ್ಮಿನಿ ಸಾಹು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ</span></div>.<div><blockquote>ನಕಲಿ ರೈತ ಹೋರಾಟಗಾರರು ಕಾಂಗ್ರೆಸ್ ಏಜೆಂಟರ ರೀತಿ ವರ್ತಿಸುತ್ತಿದ್ದು ಪ್ರಧಾನಿ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ</blockquote><span class="attribution">ವೃಷಬೇಂದ್ರಪ್ಪ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ</span></div>.<p><strong>ಎಫ್ಐಆರ್ ದಾಖಲು</strong> </p><p>ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭಾಸ್ಕರ್ ಅವರು ನೀಡಿರುವ ದೂರಿನ ಆಧಾರದಲ್ಲಿ ಪಟ್ಟಣ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಎಫ್ಐಆರ್ನಲ್ಲಿ ಆರೋಪಿಗಳ ಹೆಸರುಗಳನ್ನು ಉಲ್ಲೇಖಿಸಿಲ್ಲ. ಕಾರ್ಯಕರ್ತರು ಎಂದು ಬರೆದಿದ್ದಾರೆ. ಈ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು ಅವರು ‘ದೂರಿನಲ್ಲಿ ನಿರ್ದಿಷ್ಟವಾಗಿ ಯಾರ ಹೆಸರನ್ನೂ ದೂರುದಾರರು ಉಲ್ಲೇಖಿಸಿಲ್ಲ. ವಿಡಿಯೊ ತುಣುಕುಗಳನ್ನು ನೋಡಿದರೆ ಗೊತ್ತಾಗುತ್ತದೆ ಎಂದು ಹೇಳಿದ್ದಾರೆ. ಎಫ್ಐಆರ್ ದಾಖಲಿಸಲಾಗಿದ್ದು ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ</strong>: ಲೋಕಸಭಾ ಚುನಾವಣೆಯಲ್ಲಿ ‘ಬಿಜೆಪಿ ಮತ್ತು ಮೈತ್ರಿಕೂಟವನ್ನು ಸೋಲಿಸಿ’ ಎಂಬ ಅಭಿಯಾನವನ್ನು ಬುಧವಾರ ನಗರದಲ್ಲಿ ನಡೆಸುತ್ತಿದ್ದ ರಾಜ್ಯ ರೈತ ಸಂಘದ ಮುಖಂಡರು ಹಾಗೂ ಕಾರ್ಯಕರ್ತರನ್ನು ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ತಡೆದು, ಅಭಿಯಾನಕ್ಕೆ ಅಡ್ಡಿಪಡಿಸಿದ್ದಾರೆ. ಎರಡೂ ಕಡೆಯವರ ನಡುವೆ ನೂಕಾಟ, ತಳ್ಳಾಟ ನಡೆದಿದೆ. </p>.<p>ರೈತ ಸಂಘದ ರಾಜ್ಯ ಅಧ್ಯಕ್ಷ ಬಡಗಲಪುರ ನಾಗೇಂದ್ರ ಮತ್ತು ಉಪಾಧ್ಯಕ್ಷ ಎ.ಎಂ.ಮಹೇಶ್ ಪ್ರಭು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭಾಸ್ಕರ್ ಹಾಗೂ ಇತರರ ಮೇಲೆ ಬಿಜೆಪಿಯವರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು, ಪೊಲೀಸರಿಗೆ ದೂರು ಕೂಡ ನೀಡಲಾಗಿದೆ. </p>.<p>ಘಟನೆಯ ವಿವರ: ರೈತ ಸಂಘವು ಈ ಚುನಾವಣೆಯಲ್ಲಿ ಬಿಜೆಪಿ, ಮೈತ್ರಿಕೂಟವನ್ನು ಸೋಲಿಸಿ ಎಂಬ ಅಭಿಯಾನ ಹಮ್ಮಿಕೊಂಡಿದ್ದು, ನಗರದಲ್ಲಿ ಅಭಿಯಾನದ ಪರವಾಗಿ ಜನರಿಗೆ ಕರಪತ್ರಗಳನ್ನು ಹಂಚುತ್ತಿತ್ತು. ಸಾಹಿತಿ ದೇವನೂರ ಮಹಾದೇವ ಅವರು ಕೂಡ ಅಭಿಯಾನದಲ್ಲಿ ಭಾಗವಹಿಸಿದ್ದರು. </p>.<p>ಭುವನೇಶ್ವರಿ ವೃತ್ತ, ಕೆೆಎಸ್ಆರ್ಟಿಸಿ ನಿಲ್ದಾಣ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಕರಪತ್ರಗಳನ್ನು ಹಂಚಿದ ಬಳಿಕ ಜನನ ಮಂಟಪದ ಬಳಿ ಬರುತ್ತಿದ್ದಂತೇಯ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ರೈತ ಸಂಘದ ಮುಖಂಡರನ್ನು ಅಡ್ಡಗಟ್ಟಿದರು. ‘ಮೋದಿ, ಬಿಜೆಪಿ ಮೈತ್ರಿಕೂಟಕ್ಕೆ ಮತ ಹಾಕಬಾರದು ಎಂದು ಹೇಳಲು ನೀವು ಯಾರು’ ಎಂದು ಪ್ರಶ್ನಿಸಿದರಲ್ಲದೇ ರೈತ ಮುಖಂಡರನ್ನು ತರಾಟೆಗೆ ತೆಗೆದುಕೊಂಡರು. </p>.<p>ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ರಾಜ್ಯ ಉಪಾಧ್ಯಕ್ಷ ಮಹೇಶ್ ಪ್ರಭು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭಾಸ್ಕರ್, ಮುಖಂಡರಾದ ಶೈಲೇಂದ್ರ ಸೇರಿದಂತೆ ಮುಖಂಡರು ‘ಚುನಾವಣೆಯಲ್ಲಿ ಇಂತಹ ಪಕ್ಷದ ಅಭ್ಯರ್ಥಿಗೆ ಹಾಕುವಂತೆ ಹೇಳುವ ಹಕ್ಕು ನಮಗಿದೆ. ಅದನ್ನು ಪ್ರಶ್ನಿಸಲು ನಿಮಗೆ ಅಧಿಕಾರವಿಲ್ಲ’ ಎಂದು ತಿರುಗೇಟು ನೀಡಿದರು. </p>.<p>ಈ ಸಂದರ್ಭದಲ್ಲಿ ಎರಡೂ ಕಡೆಯವರ ನಡುವೆ, ನೂಕಾಟ, ತಳ್ಳಾಟ ನಡೆಯಿತು. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆಯೇ, ರೈತ ಸಂಘದ ಮುಖಂಡರು ಜನನ ಮಂಟಪದ ಬಳಿಯಿರುವ ತಮ್ಮ ಕಾರ್ಯಾಲಯದ ಎದುರು ಕುಳಿತರು. </p>.<p>ಆ ಹೊತ್ತಿನಲ್ಲಿ ಸ್ಥಳಕ್ಕೆ ಬಂದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಲು ಯತ್ನಿಸಿದರು. ಆದರೆ, ಸುಮ್ಮನಾಗದ ಬಿಜೆಪಿ ಕಾರ್ಯಕರ್ತರು, ರೈತ ಸಂಘದವರನ್ನು ಹೊರಗೆ ಕಳುಹಿಸಿ ಎಂದು ಪೊಲೀಸರಿಗೆ ತಿಳಿಸಿದರು. </p>.<p>‘ರೈತ ಸಂಘದವರು ಪ್ರಚಾರ ಮಾಡಲು ಅನುಮತಿ ಪಡೆದಿಲ್ಲ. ಮಂಗಳವಾರ ನಮೋ ಬ್ರಿಗೇಡ್ನ ಚಕ್ರವರ್ತಿ ಸೂಲಿಬೆಲೆ ಭಾಷಣಕ್ಕೆ ಪೊಲೀಸರು ಅಡ್ಡಿ ಪಡಿಸಿದರು. ಹಾಗೆಯೇ ಇವರ ಮೇಲೂ ಕ್ರಮ ವಹಿಸಬೇಕು’ ಎಂದು ಆಗ್ರಹಿಸಿದರು. </p>.<p><strong>ದೂರು:</strong> ಪರಿಸ್ಥಿತಿ ತಿಳಿಗೊಂಡ ನಂತರ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಭಾಸ್ಕರ್ ಅವರು, ಮುಖಂಡರ ಮೇಲೆ ಹಲ್ಲೆ ನಡೆದಿರುವ ಬಗ್ಗೆ ಪೊಲೀಸರಿಗೆ ದೂರು ನೀಡಿದರು. </p>.<p>ನಂಜೇದೇವನಪುರದಲ್ಲೂ ಘಟನೆ: ತಾಲ್ಲೂಕಿನ ನಂಜೇದೇವನಪುರ ಗ್ರಾಮದಲ್ಲಿ ಸೋಮವಾರ ಅಭಿಯಾನ ನಡೆಸುತ್ತಿದ್ದ ರೈತ ಸಂಘದ ಮುಖಂಡರನ್ನು ಸ್ಥಳೀಯ ಮುಖಂಡರು ತರಾಟೆಗೆ ತೆಗೆದುಕೊಂಡಿದ್ದರು. </p>.<div><blockquote>ಇದು ಆರ್ಎಸ್ಎಸ್ ಬಿಜೆಪಿಯ ಗೂಂಡಾಗಿರಿ. ಇದಕ್ಕೆ ನಾವು ಹೆದರುವುದಿಲ್ಲ. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ವಿಫಲರಾಗಿದ್ದಾರೆ</blockquote><span class="attribution">ಬಡಗಲಪುರ ನಾಗೇಂದ್ರ ರೈತ ಸಂಘದ ರಾಜ್ಯಾಧ್ಯಕ್ಷ</span></div>.<div><blockquote>ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಪೊಲೀಸರು ಪರಿಸ್ಥಿತಿ ತಿಳಿಸಿಗೊಳಿಸಿದ್ದಾರೆ. ದೂರಿನ ಆಧಾರದಲ್ಲಿ ಕ್ರಮ ಕೈಗೊಳ್ಳಲಾಗುವುದು</blockquote><span class="attribution">ಪದ್ಮಿನಿ ಸಾಹು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ</span></div>.<div><blockquote>ನಕಲಿ ರೈತ ಹೋರಾಟಗಾರರು ಕಾಂಗ್ರೆಸ್ ಏಜೆಂಟರ ರೀತಿ ವರ್ತಿಸುತ್ತಿದ್ದು ಪ್ರಧಾನಿ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ</blockquote><span class="attribution">ವೃಷಬೇಂದ್ರಪ್ಪ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ</span></div>.<p><strong>ಎಫ್ಐಆರ್ ದಾಖಲು</strong> </p><p>ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭಾಸ್ಕರ್ ಅವರು ನೀಡಿರುವ ದೂರಿನ ಆಧಾರದಲ್ಲಿ ಪಟ್ಟಣ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಎಫ್ಐಆರ್ನಲ್ಲಿ ಆರೋಪಿಗಳ ಹೆಸರುಗಳನ್ನು ಉಲ್ಲೇಖಿಸಿಲ್ಲ. ಕಾರ್ಯಕರ್ತರು ಎಂದು ಬರೆದಿದ್ದಾರೆ. ಈ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು ಅವರು ‘ದೂರಿನಲ್ಲಿ ನಿರ್ದಿಷ್ಟವಾಗಿ ಯಾರ ಹೆಸರನ್ನೂ ದೂರುದಾರರು ಉಲ್ಲೇಖಿಸಿಲ್ಲ. ವಿಡಿಯೊ ತುಣುಕುಗಳನ್ನು ನೋಡಿದರೆ ಗೊತ್ತಾಗುತ್ತದೆ ಎಂದು ಹೇಳಿದ್ದಾರೆ. ಎಫ್ಐಆರ್ ದಾಖಲಿಸಲಾಗಿದ್ದು ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>