ಈ ಬಗ್ಗೆ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದ ಚಾಮರಾಜನಗರ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ ಕುಮಾರ್, ‘ಕೊತ್ತನೂರು ವಲಯದಲ್ಲಿ ಎರಡು ಬೆಟ್ಟಗಳಿಗೆ ಜನರು ಉದ್ದೇಶಪೂರ್ವಕವಾಗಿ ಬೆಂಕಿ ಹಾಕಿದ್ದಾರೆ. ಅದನ್ನು ನಂದಿಸಿ ಸಿಬ್ಬಂದಿ ಮರಳುತ್ತಿದ್ದಂತೆಯೇ ಮತ್ತೊಂದು ಬೆಟ್ಟಕ್ಕೆ ಹಾಕಿದ್ದಾರೆ. ಎಲ್ಲ ಸಿಬ್ಬಂದಿ ಅಲ್ಲಿ ಬೀಡುಬಿಟ್ಟಿದ್ದು, ಬೆಂಕಿಯನ್ನು ಹತೋಟಿಗೆ ತರಲು ಪ್ರಯತ್ನಿಸುತ್ತಿದ್ದಾರೆ’ ಎಂದು ಹೇಳಿದರು.