ಗುಂಡ್ಲುಪೇಟೆ ತಾಲ್ಲೂಕಿನ ಭೀಮನಬೀಡು ನಿವಾಸಿ ಮನು (27) ಮೃತಪಟ್ಟ ಯುವಕ.
ಬಂದೂಕು ಹಾಗೂ ಇತರೆ ಶಸ್ತ್ರಾಸ್ತ್ರ ಹೊಂದಿದ್ದ 10 ಮಂದಿಯ ತಂಡ ಕಡವೆಯನ್ನು ಗುಂಡಿಕ್ಕಿ ಬೇಟೆಯಾಡಿದೆ.
ಕಾರ್ಯಾಚರಣೆ ಆರಂಭಿಸಿದ ಗಸ್ತಿನಲ್ಲಿದ್ದ ಸಿಬ್ಬಂದಿ ಹಾಗೂ ಕಳ್ಳಬೇಟೆ ತಡೆ ಶಿಬಿರದ ಸಿಬ್ಬಂದಿ, ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗುವಂತೆ ಸೂಚಿಸಿದರೂ, ಬೇಟೆಗಾರರು ಗುಂಡಿನ ದಾಳಿ ನಡೆಸಿದರು. ಅತ್ಮರಕ್ಷಣೆಗಾಗಿ ಸಿಬ್ಬಂದಿ ಪ್ರತಿದಾಳಿ ನಡೆಸಿದಾಗ ತಂಡದಲ್ಲಿದ್ದ ಮನುವಿಗೆ ಗುಂಡು ತಗುಲಿದೆ ಎಂದು ಮೂಲಗಳು ತಿಳಿಸಿವೆ.
ಉಳಿದ ಬೇಟೆಗಾರರು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಎಸ್.ಪಿ ಪದ್ಮಿನಿ ಸಾಹು ಹಾಗೂ ಅರಣ್ಯ ಸಂರಕ್ಷಣಾಧಿಕಾರಿ ರಮೇಶ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
120 ಕೆಜಿ ಕಡವೆ ಮಾಂಸ, ಒಂದು ಸಿಂಗಲ್ ಬ್ಯಾರೆಲ್ ಗನ್ ಇತರೆ ಆಯುಧಗಳನ್ನು ವಶಕ್ಕೆ ಪಡೆಯಲಾಗಿದ್ದು, ಪರಾರಿಯಾದವರ ಬಂಧನಕ್ಕೆ ಶೋಧ ಕಾರ್ಯ ನಡೆಸಲಾಗುತ್ತಿದೆ.