ಚಾಮರಾಜನಗರ: ಇದುವರೆಗೂ ಹಸಿರು ವಲಯದಲ್ಲೇ ಇದ್ದ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಮೊದಲ ಕೋವಿಡ್-19 ಪ್ರಕರಣ ದೃಢವಾಗಿದೆ ಎಂದು ಹೇಳಲಾಗುತ್ತಿದೆ.
ಜಿಲ್ಲಾಡಳಿತ ಅಧಿಕೃತವಾಗಿ ಘೋಷಣೆ ಮಾಡಿಲ್ಲ. ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಬೆಳಿಗ್ಗೆ 10.30ಕ್ಕೆ ಪತ್ರಿಕಾಗೋಷ್ಠಿ ಕರೆದಿದ್ದಾರೆ.
ಪುಣೆಯಿಂದ ಬಂದ ಯುವಕರೊಬ್ಬರಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಸೇವಾ ಸಿಂಧು ಪೋರ್ಟಲ್ ನಲ್ಲಿ ಹೆಸರು ದಾಖಲಿಸದೆ, ಜಿಲ್ಲಾಡಳಿತದಿಂದ ಅನುಮತಿ ಪಡೆಯದೇ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ.