<p><strong>ಚಾಮರಾಜನಗರ:</strong> ಎರಡು ತಿಂಗಳ ಬಳಿಕ ಜಿಲ್ಲೆಯಲ್ಲಿ ಕೋವಿಡ್ನಿಂದಾಗಿ ಸಾವು ಸಂಭವಿಸಿದೆ. ಮೈಸೂರಿನ ನಿವಾಸಿಯಾಗಿರುವ 30 ವರ್ಷದ ಮಹಿಳೆಯೊಬ್ಬರು ಚಿಕಿತ್ಸೆಗೆ ಸ್ಪಂದಿಸಿದೆ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಶನಿವಾರ ಮೃತಪಟ್ಟಿದ್ದಾರೆ. ಅವರು ಶುಕ್ರವಾರ ಚಿಕಿತ್ಸೆಗಾಗಿ ದಾಖಲಾಗಿದ್ದರು.</p>.<p>ಇದರೊಂದಿಗೆ ಜಿಲ್ಲೆಯಲ್ಲಿ ಇದುವರೆಗೆ ಕೋವಿಡ್ನಿಂದ ಮೃತಪಟ್ಟವರ ಸಂಖ್ಯೆ 113ಕ್ಕೆ ಏರಿದೆ.20 ಮಂದಿ ಬೇರೆ ಅನಾರೋಗ್ಯಗಳಿಂದಾಗಿ ಮೃತಪಟ್ಟಿದ್ದಾರೆ.</p>.<p>ಶನಿವಾರ ಜಿಲ್ಲೆಯಲ್ಲಿ ಹೊಸದಾಗಿ 28 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. 14 ಮಂದಿ ಗುಣಮುಖರಾಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 217ಕ್ಕೆ ಏರಿದೆ.</p>.<p>ಜಿಲ್ಲೆಯಲ್ಲಿರುವ ಸೋಂಕಿತರ ಪೈಕಿ 166 ಮಂದಿ ಹೋಂ ಐಸೊಲೇಷನ್ನಲ್ಲಿದ್ದಾರೆ. ಮೂವರು ಐಸಿಯುನಲ್ಲಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 7,315 ಪ್ರಕರಣಗಳು ದೃಢಪಟ್ಟಿವೆ. 6965 ಮಂದಿ ಗುಣಮುಖರಾಗಿದ್ದಾರೆ.</p>.<p>ಶನಿವಾರ 903 ಮಂದಿಯ ಕೋವಿಡ್ ಪರೀಕ್ಷಾ ವರದಿ ಬಂದಿದ್ದು, 877 ವರದಿಗಳು ನೆಗೆಟಿವ್ ಬಂದಿವೆ.</p>.<p class="Subhead"><strong>ದೇವಾಲಯದಲ್ಲಿ ಪೂಜೆ:</strong> ಯಳಂದೂರು ತಾಲ್ಲೂಕಿನ ಬಿಳಿಗಿರಿರಂಗನಬೆಟ್ಟ ರಂಗನಾಥಸ್ವಾಮಿ ದೇವಾಲಯದ ಸುತ್ತಮುತ್ತಲಿನ ಪ್ರದೇಶವನ್ನು ಕಂಟೈನ್ಮೆಂಟ್ ಜೋನ್ ಎಂದು ಘೋಷಿಸಲಾಗಿದೆ. ಎರಡು ದಿನಗಳಿಂದ ಸ್ಥಗಿತವಾಗಿ ಪೂಜೆ ಶನಿವಾರ ಮತ್ತೆ ಆರಂಭವಾಗಿದೆ. ಬೇರೆ ಅರ್ಚಕರು ಬಂದು ಪೂಜೆ ಕೈಗೊಂಡಿದ್ದಾರೆ. ದೇವಾಲಯದ ಒಳಗಡೆ ಯಾರಿಗೂ ಪ್ರವೇಶಕ್ಕೆ ಅವಕಾಶ ನೀಡಿಲ್ಲ.</p>.<p class="Briefhead">ಕೋವಿಡ್ ಕೇರ್ ಕೇಂದ್ರ ಆರಂಭಿಸಲು ಪ್ರಕ್ರಿಯೆ</p>.<p>ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಪರಿಸ್ಥಿತಿಯನ್ನು ನಿಭಾಯಿಸಲು ಕೋವಿಡ್ ಕೇರ್ ಸೆಂಟರ್ ಸ್ಥಾಪಿಸುವ ಪ್ರಕ್ರಿಯೆಯನ್ನು ಜಿಲ್ಲಾಡಳಿತ ಆರಂಭಿಸಿದೆ.</p>.<p>ಕುಲುಮೆ ರಸ್ತೆಯ, ರಾಮಸಮುದ್ರ ಬಡಾವಣೆಯಲ್ಲಿರುವ ಮುಕ್ತ ವಿಶ್ವವಿದ್ಯಾಲಯದ ಪ್ರಾದೇಶಿಕ ಕಚೇರಿ ಕಟ್ಟಡವನ್ನು ಕೋವಿಡ್ ಕೇರ್ ಕೇಂದ್ರ ಸ್ಥಾಪಿಸಲು ಗುರುತಿಸಲಾಗಿದ್ದು, ಅದಕ್ಕೆ ಬೇಕಾದ ಸಿದ್ಧತೆಗಳಿಗೆ ಆರೋಗ್ಯ ಇಲಾಖೆ ಮುಂದಾಗಿದೆ.</p>.<p>ಕೋವಿಡ್ ಕೇರ್ ಕೇಂದ್ರಕ್ಕೆ ಸ್ಥಳ ಗುರುತಿಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದ್ದು, ಅದರಂತೆ ಕಟ್ಟಡವನ್ನು ಗುರುತಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಂ.ಸಿ.ರವಿ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಕೋವಿಡ್ ಕೇರ್ ಕೇಂದ್ರದ ಸ್ಥಾಪನೆಯ ಅಗತ್ಯದ ಬಗ್ಗೆ ‘ಪ್ರಜಾವಾಣಿ’ಯು ಏಪ್ರಿಲ್ 6ರ ಸಂಚಿಕೆಯಲ್ಲಿ ವಿಶೇಷ ವರದಿ ಪ್ರಕಟಿಸಿ ಜಿಲ್ಲಾಡಳಿತದ ಗಮನ ಸೆಳೆದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ಎರಡು ತಿಂಗಳ ಬಳಿಕ ಜಿಲ್ಲೆಯಲ್ಲಿ ಕೋವಿಡ್ನಿಂದಾಗಿ ಸಾವು ಸಂಭವಿಸಿದೆ. ಮೈಸೂರಿನ ನಿವಾಸಿಯಾಗಿರುವ 30 ವರ್ಷದ ಮಹಿಳೆಯೊಬ್ಬರು ಚಿಕಿತ್ಸೆಗೆ ಸ್ಪಂದಿಸಿದೆ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಶನಿವಾರ ಮೃತಪಟ್ಟಿದ್ದಾರೆ. ಅವರು ಶುಕ್ರವಾರ ಚಿಕಿತ್ಸೆಗಾಗಿ ದಾಖಲಾಗಿದ್ದರು.</p>.<p>ಇದರೊಂದಿಗೆ ಜಿಲ್ಲೆಯಲ್ಲಿ ಇದುವರೆಗೆ ಕೋವಿಡ್ನಿಂದ ಮೃತಪಟ್ಟವರ ಸಂಖ್ಯೆ 113ಕ್ಕೆ ಏರಿದೆ.20 ಮಂದಿ ಬೇರೆ ಅನಾರೋಗ್ಯಗಳಿಂದಾಗಿ ಮೃತಪಟ್ಟಿದ್ದಾರೆ.</p>.<p>ಶನಿವಾರ ಜಿಲ್ಲೆಯಲ್ಲಿ ಹೊಸದಾಗಿ 28 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. 14 ಮಂದಿ ಗುಣಮುಖರಾಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 217ಕ್ಕೆ ಏರಿದೆ.</p>.<p>ಜಿಲ್ಲೆಯಲ್ಲಿರುವ ಸೋಂಕಿತರ ಪೈಕಿ 166 ಮಂದಿ ಹೋಂ ಐಸೊಲೇಷನ್ನಲ್ಲಿದ್ದಾರೆ. ಮೂವರು ಐಸಿಯುನಲ್ಲಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 7,315 ಪ್ರಕರಣಗಳು ದೃಢಪಟ್ಟಿವೆ. 6965 ಮಂದಿ ಗುಣಮುಖರಾಗಿದ್ದಾರೆ.</p>.<p>ಶನಿವಾರ 903 ಮಂದಿಯ ಕೋವಿಡ್ ಪರೀಕ್ಷಾ ವರದಿ ಬಂದಿದ್ದು, 877 ವರದಿಗಳು ನೆಗೆಟಿವ್ ಬಂದಿವೆ.</p>.<p class="Subhead"><strong>ದೇವಾಲಯದಲ್ಲಿ ಪೂಜೆ:</strong> ಯಳಂದೂರು ತಾಲ್ಲೂಕಿನ ಬಿಳಿಗಿರಿರಂಗನಬೆಟ್ಟ ರಂಗನಾಥಸ್ವಾಮಿ ದೇವಾಲಯದ ಸುತ್ತಮುತ್ತಲಿನ ಪ್ರದೇಶವನ್ನು ಕಂಟೈನ್ಮೆಂಟ್ ಜೋನ್ ಎಂದು ಘೋಷಿಸಲಾಗಿದೆ. ಎರಡು ದಿನಗಳಿಂದ ಸ್ಥಗಿತವಾಗಿ ಪೂಜೆ ಶನಿವಾರ ಮತ್ತೆ ಆರಂಭವಾಗಿದೆ. ಬೇರೆ ಅರ್ಚಕರು ಬಂದು ಪೂಜೆ ಕೈಗೊಂಡಿದ್ದಾರೆ. ದೇವಾಲಯದ ಒಳಗಡೆ ಯಾರಿಗೂ ಪ್ರವೇಶಕ್ಕೆ ಅವಕಾಶ ನೀಡಿಲ್ಲ.</p>.<p class="Briefhead">ಕೋವಿಡ್ ಕೇರ್ ಕೇಂದ್ರ ಆರಂಭಿಸಲು ಪ್ರಕ್ರಿಯೆ</p>.<p>ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಪರಿಸ್ಥಿತಿಯನ್ನು ನಿಭಾಯಿಸಲು ಕೋವಿಡ್ ಕೇರ್ ಸೆಂಟರ್ ಸ್ಥಾಪಿಸುವ ಪ್ರಕ್ರಿಯೆಯನ್ನು ಜಿಲ್ಲಾಡಳಿತ ಆರಂಭಿಸಿದೆ.</p>.<p>ಕುಲುಮೆ ರಸ್ತೆಯ, ರಾಮಸಮುದ್ರ ಬಡಾವಣೆಯಲ್ಲಿರುವ ಮುಕ್ತ ವಿಶ್ವವಿದ್ಯಾಲಯದ ಪ್ರಾದೇಶಿಕ ಕಚೇರಿ ಕಟ್ಟಡವನ್ನು ಕೋವಿಡ್ ಕೇರ್ ಕೇಂದ್ರ ಸ್ಥಾಪಿಸಲು ಗುರುತಿಸಲಾಗಿದ್ದು, ಅದಕ್ಕೆ ಬೇಕಾದ ಸಿದ್ಧತೆಗಳಿಗೆ ಆರೋಗ್ಯ ಇಲಾಖೆ ಮುಂದಾಗಿದೆ.</p>.<p>ಕೋವಿಡ್ ಕೇರ್ ಕೇಂದ್ರಕ್ಕೆ ಸ್ಥಳ ಗುರುತಿಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದ್ದು, ಅದರಂತೆ ಕಟ್ಟಡವನ್ನು ಗುರುತಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಂ.ಸಿ.ರವಿ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಕೋವಿಡ್ ಕೇರ್ ಕೇಂದ್ರದ ಸ್ಥಾಪನೆಯ ಅಗತ್ಯದ ಬಗ್ಗೆ ‘ಪ್ರಜಾವಾಣಿ’ಯು ಏಪ್ರಿಲ್ 6ರ ಸಂಚಿಕೆಯಲ್ಲಿ ವಿಶೇಷ ವರದಿ ಪ್ರಕಟಿಸಿ ಜಿಲ್ಲಾಡಳಿತದ ಗಮನ ಸೆಳೆದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>