<p>ಗುಂಡ್ಲುಪೇಟೆ: ಪಟ್ಟಣದಲ್ಲಿ ಮೀನು ಸೇರಿದಂತೆ ಇತರೆ ಮಾಂಸ ಮಾರಾಟಕ್ಕೆ ಅನುಕೂಲವಾಗುವಂತೆ ನಿರ್ಮಿಸಲಾಗಿರುವ ಕಟ್ಟಡ ಪಾಳು ಬಿದ್ದಿದ್ದು, ಆವರಣ ಕಸ ಹಾಕುವ ಸ್ಥಳವಾಗಿ ಬದಲಾಗಿದೆ. ಅನೈರ್ಮಲ್ಯ ತಾಂಡವವಾಡುತ್ತಿದೆ.</p>.<p>ಪಟ್ಟಣದ ಕಿತ್ತೂರು ರಾಣಿ ಚನ್ನಮ್ಮ ರಸ್ತೆಗೆ ಹೊಂದಿಕೊಂಡಂತೆ 7ನೇ ವಾರ್ಡ್ನಲ್ಲಿ, ಎಂಟು ವರ್ಷಗಳ ಹಿಂದೆ ದಿವಂಗತ ಎಚ್.ಎಸ್.ಮಹದೇವಪ್ರಸಾದ್ ಅವರ ಅವಧಿಯಲ್ಲಿ ಮೀನು ಮಾರುಕಟ್ಟೆ ಕಟ್ಟಡ ನಿರ್ಮಾಣ ಮಾಡಲಾಗಿತ್ತು. ಆದರೆ, ಇನ್ನೂ ಅದು ಉದ್ಘಾಟನೆ ಭಾಗ್ಯ ಕಂಡಿಲ್ಲ. </p>.<p>ಕಟ್ಗಟಡವು 30ಕ್ಕೂ ಅಧಿಕ ಮಳಿಗೆಗಳನ್ನು ಹೊಂದಿದೆ. ಆದರೆ, ಯಾವುದಕ್ಕೂ ಪ್ರಯೋಜನ ಇಲ್ಲದಂತಾಗಿದೆ. </p>.<p>‘ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಜನಪ್ರತಿನಿಧಿಗಳ ಬೇಜವಾಬ್ದಾರಿ ನಡೆಯಿಂದಾಗಿ ನಿರುಪಯುಕ್ತವಾಗಿ ಬಿದ್ದಿದೆ’ ಎಂಬುದು ಸಾರ್ವಜನಿಕರ ಆರೋಪ.</p>.<p>ವಾರ್ಡ್ ನಿವಾಸಿಗಳು ಹಾಗೂ ಸುತ್ತಮುತ್ತಲ ಅಂಗಡಿ ಮಾಲೀಕರು ಮಾರುಕಟ್ಟೆ ಆಸುಪಾಸಿನಲ್ಲಿ ಕಸ-ಕಡ್ಡಿ ಮತ್ತು ತ್ಯಾಜ್ಯ ವಸ್ತುಗಳನ್ನು ತಂದು ಸುರಿಯುತ್ತಿದ್ದಾರೆ. ಇದರಿಂದ ಕಟ್ಟಡದ ಆವರಣ ಗಬ್ಬೆದ್ದು ನಾರುತ್ತಿದ್ದು, ಮೂಗುಮುಚ್ಚಿಕೊಂಡು ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.</p>.<p>ತುಂಬಿದ ಮ್ಯಾನ್ ಹೋಲ್: ಮಾರುಕಟ್ಟೆ ಎದುರಿನ ಮ್ಯಾನ್ ಹೋಲ್ ತುಂಬಿ ಕೊಳಚೆ ನೀರು ಹರಿಯುತ್ತಿದೆ. ಇದರಿಂದ ಇಡೀ ಪ್ರದೇಶವೆಲ್ಲ ದುರ್ವಾಸನೆ ಬೀರುತ್ತಿದ್ದು, ಪಾದಾಚಾರಿಗಳು ಹಾಗು ದ್ವಿಚಕ್ರ ವಾಹನ ಸವಾರರು ವಾಸನೆ ಕುಡಿಯುತ್ತಾ ಸಾಗಬೇಕಾಗಿದೆ. </p>.<p>ಸಾಂಕ್ರಾಮಿಕ ರೋಗದ ಭೀತಿ: 7ನೇ ವಾರ್ಡ್ ಪ್ರಮುಖ ಜಾಗಗಳಲ್ಲಿ ಕಸದ ರಾಶಿ ಬಿದ್ದಿರುವ ಕಾರಣ ಸಾಂಕ್ರಾಮಿಕ ರೋಗದ ಭೀತಿ ಎದುರಾಗಿದೆ. ವಾರ್ಡ್ ಸದಸ್ಯರು. ಅಧಿಕಾರಿಗಳು ಕೂಡಲೇ ಎಚ್ಚೆತ್ತುಕೊಂಡು ಸ್ವಚ್ಛತೆಗೆ ಒತ್ತು ನೀಡಬೇಕು ಎಂದು ಸ್ಥಳೀಯ ನಿವಾಸಿಗಳು ಒತ್ತಾಯಿಸಿದ್ದಾರೆ.</p>.<p>8 ವರ್ಷಗಳ ಹಿಂದೆ ನಿರ್ಮಾಣ 32 ಮಳಿಗೆಗಳಿರುವ ಕಟ್ಟಡ ಅಂಗಡಿಗೆ ಬಾರದ ವ್ಯಾಪಾರಿಗಳು</p>.<p>ಕಟ್ಟಡ ಸುತ್ತಲೂ ಸ್ವಚ್ಚಗೊಳಿಸಲಾಗುವುದು. ಯಾರೂ ಮಾರುಕಟ್ಟೆಯಲ್ಲಿ ಅಂಗಡಿ ನಡೆಸಲು ಮುಂದಾಗುತ್ತಿಲ್ಲ. ಕಸ ಸುರಿಯದಂತೆ ಎಚ್ಚರಿಕೆ ನೀಡಲಾಗುತ್ತದೆ </p><p>-ವಸಂತ ಕುಮಾರಿ ಪುರಸಭೆ ಮುಖ್ಯಾಧಿಕಾರಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗುಂಡ್ಲುಪೇಟೆ: ಪಟ್ಟಣದಲ್ಲಿ ಮೀನು ಸೇರಿದಂತೆ ಇತರೆ ಮಾಂಸ ಮಾರಾಟಕ್ಕೆ ಅನುಕೂಲವಾಗುವಂತೆ ನಿರ್ಮಿಸಲಾಗಿರುವ ಕಟ್ಟಡ ಪಾಳು ಬಿದ್ದಿದ್ದು, ಆವರಣ ಕಸ ಹಾಕುವ ಸ್ಥಳವಾಗಿ ಬದಲಾಗಿದೆ. ಅನೈರ್ಮಲ್ಯ ತಾಂಡವವಾಡುತ್ತಿದೆ.</p>.<p>ಪಟ್ಟಣದ ಕಿತ್ತೂರು ರಾಣಿ ಚನ್ನಮ್ಮ ರಸ್ತೆಗೆ ಹೊಂದಿಕೊಂಡಂತೆ 7ನೇ ವಾರ್ಡ್ನಲ್ಲಿ, ಎಂಟು ವರ್ಷಗಳ ಹಿಂದೆ ದಿವಂಗತ ಎಚ್.ಎಸ್.ಮಹದೇವಪ್ರಸಾದ್ ಅವರ ಅವಧಿಯಲ್ಲಿ ಮೀನು ಮಾರುಕಟ್ಟೆ ಕಟ್ಟಡ ನಿರ್ಮಾಣ ಮಾಡಲಾಗಿತ್ತು. ಆದರೆ, ಇನ್ನೂ ಅದು ಉದ್ಘಾಟನೆ ಭಾಗ್ಯ ಕಂಡಿಲ್ಲ. </p>.<p>ಕಟ್ಗಟಡವು 30ಕ್ಕೂ ಅಧಿಕ ಮಳಿಗೆಗಳನ್ನು ಹೊಂದಿದೆ. ಆದರೆ, ಯಾವುದಕ್ಕೂ ಪ್ರಯೋಜನ ಇಲ್ಲದಂತಾಗಿದೆ. </p>.<p>‘ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಜನಪ್ರತಿನಿಧಿಗಳ ಬೇಜವಾಬ್ದಾರಿ ನಡೆಯಿಂದಾಗಿ ನಿರುಪಯುಕ್ತವಾಗಿ ಬಿದ್ದಿದೆ’ ಎಂಬುದು ಸಾರ್ವಜನಿಕರ ಆರೋಪ.</p>.<p>ವಾರ್ಡ್ ನಿವಾಸಿಗಳು ಹಾಗೂ ಸುತ್ತಮುತ್ತಲ ಅಂಗಡಿ ಮಾಲೀಕರು ಮಾರುಕಟ್ಟೆ ಆಸುಪಾಸಿನಲ್ಲಿ ಕಸ-ಕಡ್ಡಿ ಮತ್ತು ತ್ಯಾಜ್ಯ ವಸ್ತುಗಳನ್ನು ತಂದು ಸುರಿಯುತ್ತಿದ್ದಾರೆ. ಇದರಿಂದ ಕಟ್ಟಡದ ಆವರಣ ಗಬ್ಬೆದ್ದು ನಾರುತ್ತಿದ್ದು, ಮೂಗುಮುಚ್ಚಿಕೊಂಡು ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.</p>.<p>ತುಂಬಿದ ಮ್ಯಾನ್ ಹೋಲ್: ಮಾರುಕಟ್ಟೆ ಎದುರಿನ ಮ್ಯಾನ್ ಹೋಲ್ ತುಂಬಿ ಕೊಳಚೆ ನೀರು ಹರಿಯುತ್ತಿದೆ. ಇದರಿಂದ ಇಡೀ ಪ್ರದೇಶವೆಲ್ಲ ದುರ್ವಾಸನೆ ಬೀರುತ್ತಿದ್ದು, ಪಾದಾಚಾರಿಗಳು ಹಾಗು ದ್ವಿಚಕ್ರ ವಾಹನ ಸವಾರರು ವಾಸನೆ ಕುಡಿಯುತ್ತಾ ಸಾಗಬೇಕಾಗಿದೆ. </p>.<p>ಸಾಂಕ್ರಾಮಿಕ ರೋಗದ ಭೀತಿ: 7ನೇ ವಾರ್ಡ್ ಪ್ರಮುಖ ಜಾಗಗಳಲ್ಲಿ ಕಸದ ರಾಶಿ ಬಿದ್ದಿರುವ ಕಾರಣ ಸಾಂಕ್ರಾಮಿಕ ರೋಗದ ಭೀತಿ ಎದುರಾಗಿದೆ. ವಾರ್ಡ್ ಸದಸ್ಯರು. ಅಧಿಕಾರಿಗಳು ಕೂಡಲೇ ಎಚ್ಚೆತ್ತುಕೊಂಡು ಸ್ವಚ್ಛತೆಗೆ ಒತ್ತು ನೀಡಬೇಕು ಎಂದು ಸ್ಥಳೀಯ ನಿವಾಸಿಗಳು ಒತ್ತಾಯಿಸಿದ್ದಾರೆ.</p>.<p>8 ವರ್ಷಗಳ ಹಿಂದೆ ನಿರ್ಮಾಣ 32 ಮಳಿಗೆಗಳಿರುವ ಕಟ್ಟಡ ಅಂಗಡಿಗೆ ಬಾರದ ವ್ಯಾಪಾರಿಗಳು</p>.<p>ಕಟ್ಟಡ ಸುತ್ತಲೂ ಸ್ವಚ್ಚಗೊಳಿಸಲಾಗುವುದು. ಯಾರೂ ಮಾರುಕಟ್ಟೆಯಲ್ಲಿ ಅಂಗಡಿ ನಡೆಸಲು ಮುಂದಾಗುತ್ತಿಲ್ಲ. ಕಸ ಸುರಿಯದಂತೆ ಎಚ್ಚರಿಕೆ ನೀಡಲಾಗುತ್ತದೆ </p><p>-ವಸಂತ ಕುಮಾರಿ ಪುರಸಭೆ ಮುಖ್ಯಾಧಿಕಾರಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>