<p><strong>ಹನೂರು</strong>: ಮಲೆಮಹದೇಶ್ವರ ವನ್ಯಧಾಮದಲ್ಲಿ ಜಿಂಕೆಯನ್ನು ಬೇಟೆಯಾಡಿದ್ದ ಐವರನ್ನು ಅರಣ್ಯಾಧಿಕಾರಿಗಳು ಭಾನುವಾರ ಬಂಧಿಸಿದ್ದಾರೆ.</p>.<p>ಕಾಂಚಳ್ಳಿ ಗ್ರಾಮದ ಜಡೇಸ್ವಾಮಿ, ಅಜ್ಜೀಪುರ ಗ್ರಾಮದ ಕೃಷ್ಣೇಗೌಡ, ಕೆ.ಗುಂಡಾಪುರ ಗ್ರಾಮದ ಕದರಯ್ಯ, ಸನಾವುಲ್ಲಾ ಹಾಗೂ ತೌಸೀಫ್ ಬಂಧಿತ ಆರೋಪಿಗಳು. ದಾಳಿ ಸಂದರ್ಭದಲ್ಲಿ ಗುಳ್ಯ ಗ್ರಾಮದ ನಾರಾಯಣ ತಲೆಮರೆಸಿಕೊಂಡಿದ್ದಾರೆ.</p>.<p>ಬೇಟೆಯಾಡಿದ ಜಿಂಕೆಯ ಮಾಂಸವನ್ನು ಹನೂರು ಬಫರ್ ವಲಯ ವ್ಯಾಪ್ತಿಯ ಪಚ್ಚೆದೊಡ್ಡಿ ಗಸ್ತಿನ ಕದರಯ್ಯ ಅವರ ಮನೆಯಲ್ಲಿ ಅಡಗಿಸಿಟ್ಟಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ವಲಯ ಅರಣ್ಯಾಧಿಕಾರಿ ಸಯ್ಯಾದ್ ಸಬಾ ನದಾಫ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದೆ.</p>.<p>ಐದು ಜನರನ್ನು ವಶಕ್ಕೆ ವಿಚಾರಣೆಗೊಳಪಡಿಸಿದಾಗ ನಾಡಬಂದೂಕಿನಿಂದ ಬೇಟೆಯಾಡಿ ಮಾಂಸವನ್ನು ಪಾಲು ಮಾಡಿಕೊಳ್ಳುತ್ತಿರುವುದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಅಧಿಕಾರಿಗಳು ಜಿಂಕೆ ಮಾಂಸ, ನಾಡ ಬಂದೂಕು ಹಾಗೂ ಮೂರು ದ್ವಿಚಕ್ರವಾಹನಗಳನ್ನು ವಶಪಡಿಸಿಕೊಂಡು ಐವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.</p>.<p>ಕಾರ್ಯಾಚರಣೆಯಲ್ಲಿ ಉಪ ವಲಯ ಅರಣ್ಯಾಧಿಕಾರಿಗಳಾದ ಸಾಲಾನ್, ಕೆ. ಪ್ರಸಾದ್, ಅರಣ್ಯ ರಕ್ಷಕರಾದ ಪರಶುರಾಮ್, ನಂದೀಶ್, ಅರಣ್ಯ ವೀಕ್ಷಕರಾದ, ಜೆ.ಶಿವರಾಜು, ಕೃಷ್ಣ, ಗಣೇಶ, ಪಚ್ಚೆಗೌಡ, ವಾಹನ ಚಾಲಕರಾದ ಮುಕುಂದವರ್ಮ ಹಾಗೂ ರಾಜೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹನೂರು</strong>: ಮಲೆಮಹದೇಶ್ವರ ವನ್ಯಧಾಮದಲ್ಲಿ ಜಿಂಕೆಯನ್ನು ಬೇಟೆಯಾಡಿದ್ದ ಐವರನ್ನು ಅರಣ್ಯಾಧಿಕಾರಿಗಳು ಭಾನುವಾರ ಬಂಧಿಸಿದ್ದಾರೆ.</p>.<p>ಕಾಂಚಳ್ಳಿ ಗ್ರಾಮದ ಜಡೇಸ್ವಾಮಿ, ಅಜ್ಜೀಪುರ ಗ್ರಾಮದ ಕೃಷ್ಣೇಗೌಡ, ಕೆ.ಗುಂಡಾಪುರ ಗ್ರಾಮದ ಕದರಯ್ಯ, ಸನಾವುಲ್ಲಾ ಹಾಗೂ ತೌಸೀಫ್ ಬಂಧಿತ ಆರೋಪಿಗಳು. ದಾಳಿ ಸಂದರ್ಭದಲ್ಲಿ ಗುಳ್ಯ ಗ್ರಾಮದ ನಾರಾಯಣ ತಲೆಮರೆಸಿಕೊಂಡಿದ್ದಾರೆ.</p>.<p>ಬೇಟೆಯಾಡಿದ ಜಿಂಕೆಯ ಮಾಂಸವನ್ನು ಹನೂರು ಬಫರ್ ವಲಯ ವ್ಯಾಪ್ತಿಯ ಪಚ್ಚೆದೊಡ್ಡಿ ಗಸ್ತಿನ ಕದರಯ್ಯ ಅವರ ಮನೆಯಲ್ಲಿ ಅಡಗಿಸಿಟ್ಟಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ವಲಯ ಅರಣ್ಯಾಧಿಕಾರಿ ಸಯ್ಯಾದ್ ಸಬಾ ನದಾಫ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದೆ.</p>.<p>ಐದು ಜನರನ್ನು ವಶಕ್ಕೆ ವಿಚಾರಣೆಗೊಳಪಡಿಸಿದಾಗ ನಾಡಬಂದೂಕಿನಿಂದ ಬೇಟೆಯಾಡಿ ಮಾಂಸವನ್ನು ಪಾಲು ಮಾಡಿಕೊಳ್ಳುತ್ತಿರುವುದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಅಧಿಕಾರಿಗಳು ಜಿಂಕೆ ಮಾಂಸ, ನಾಡ ಬಂದೂಕು ಹಾಗೂ ಮೂರು ದ್ವಿಚಕ್ರವಾಹನಗಳನ್ನು ವಶಪಡಿಸಿಕೊಂಡು ಐವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.</p>.<p>ಕಾರ್ಯಾಚರಣೆಯಲ್ಲಿ ಉಪ ವಲಯ ಅರಣ್ಯಾಧಿಕಾರಿಗಳಾದ ಸಾಲಾನ್, ಕೆ. ಪ್ರಸಾದ್, ಅರಣ್ಯ ರಕ್ಷಕರಾದ ಪರಶುರಾಮ್, ನಂದೀಶ್, ಅರಣ್ಯ ವೀಕ್ಷಕರಾದ, ಜೆ.ಶಿವರಾಜು, ಕೃಷ್ಣ, ಗಣೇಶ, ಪಚ್ಚೆಗೌಡ, ವಾಹನ ಚಾಲಕರಾದ ಮುಕುಂದವರ್ಮ ಹಾಗೂ ರಾಜೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>