ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐದು ಪ್ರಕರಣ ದೃಢ, ಆರು ಮಂದಿ ಗುಣಮುಖ

Last Updated 28 ಸೆಪ್ಟೆಂಬರ್ 2021, 16:00 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯ ಐದು ಮಂದಿಗೆ ಕೋವಿಡ್‌ ಇರುವುದು ಮಂಗಳವಾರ ದೃಢಪಟ್ಟಿದೆ. ಈ ಪೈಕಿ ಒಬ್ಬರಿಗೆ ಮೈಸೂರಿನಲ್ಲಿ ನಡೆಸಿದ ಪರೀಕ್ಷೆಯಲ್ಲಿ ಸೋಂಕು ತಗುಲಿರುವುದು ಖಚಿತವಾಗಿದೆ.

ಆರು ಮಂದಿ ಗುಣಮುಖರಾಗಿದ್ದಾರೆ. ಸಾವಿನ ಪ್ರಕರಣ ವರದಿಯಾಗಿಲ್ಲ. 40ಸಕ್ರಿಯ ಪ್ರಕರಣಗಳಿವೆ. ಸೋಂಕಿತರ ಪೈಕಿ ಇಬ್ಬರು ಐಸಿಯುನಲ್ಲಿ ಹಾಗೂ 15 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. ಉಳಿದವರು ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಂಗಳವಾರದ ಅಂಕಿ ಅಂಶಗಳೊಂದಿಗೆ ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 32,286ಕ್ಕೆ ಏರಿದೆ. ಗುಣಮುಖರ ಸಂಖ್ಯೆ 31,908ಕ್ಕೆ ಹಿಗ್ಗಿದೆ.

ಮಂಗಳವಾರ 957 ಮಂದಿಯ ಗಂಟಲು ದ್ರವದ ಮಾದರಿಗಳ ಪರೀಕ್ಷಾ ವರದಿ ಬಂದಿದ್ದು, 953 ವರದಿಗಳು ನೆಗೆಟಿವ್‌ ಬಂದು, ನಾಲ್ಕು ಮಂದಿಗೆ ಸೋಂಕು ತಗುಲಿರುವುದು ಖಚಿತವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT