ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐವರಿಗೆ ಸೋಂಕು, ಆರು ಮಂದಿ ಗುಣಮುಖ

Last Updated 3 ಅಕ್ಟೋಬರ್ 2021, 16:19 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯಲ್ಲಿ ಭಾನುವಾರ ಐವರಿಗೆ ಕೋವಿಡ್‌ ಇರುವುದು ದೃಢಪಟ್ಟಿದೆ. ಆರು ಮಂದಿ ಚೇತರಿಕೆ ಕಂಡಿದ್ದಾರೆ. ಸಾವಿನ ಪ್ರಕರಣ ವರದಿಯಾಗಿಲ್ಲ.

34 ಮಂದಿ ಸೋಂಕಿತರಿದ್ದಾರೆ. ಈ ಪೈಕಿ 17 ಮಂದಿ ಹೋಂ ಐಸೋಲೇಷನ್‌ನಲ್ಲಿದ್ದಾರೆ. ಸತತ ನಾಲ್ಕನೇ ದಿನವೂ ಐಸಿಯುನಲ್ಲಿ ಯಾರೂ ಇಲ್ಲ.

ಇದುವರೆಗೆ ಜಿಲ್ಲೆಯಲ್ಲಿ 32,508 ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. 31,936 ಮಂದಿ ಗುಣಮುಖರಾಗಿದ್ದಾರೆ.

ಭಾನುವಾರ 1,525 ಮಂದಿಯ ಗಂಟಲು ದ್ರವ ಮಾದರಿಗಳ ಪರೀಕ್ಷಾ ವರದಿ ಬಂದಿದ್ದು, 1,519 ಮಂದಿಯ ವರದಿಗಳು ನೆಗೆಟಿವ್‌ ಬಂದಿವೆ. ಆರು ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಪೈಕಿ ಒಬ್ಬರು ಹೊರ ಜಿಲ್ಲೆಯವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT