ಚರಂಡಿಯಲ್ಲಿ ಹೂಳು ತುಂಬಿ ವರ್ಷ ಕಳೆಯುತ್ತಿದ್ದರೂ ಅದನ್ನು ಅದನ್ನು ಪಂಚಾಯಿತಿ ಅಧಿಕಾರಿಗಳು ತೆಗೆಸಿಲ್ಲ. ಇದರಿಂದ ಸೊಳ್ಳೆಗಳು ಹೆಚ್ಚಾಗಿ ಮಲೇರಿಯ, ಚಿಕೂನ್ಗುನ್ಯ ಮೊದಲಾದ ರೋಗಗಳಿಗೆ ಇಲ್ಲಿನ ಜನರು ಆಗಾಗ್ಗೆ ತುತ್ತಾಗುತ್ತಿದ್ದಾರೆ. ಗ್ರಾಮದಲ್ಲಿ ನೈರ್ಮಲ್ಯ ಕಾಪಾಡುವಂತೆ ಇಲ್ಲಿನ ಪ್ರಗತಿಪರ ಸಂಘಟನೆಗಳು ಹಲವು ಬಾರಿ ಪಿಡಿಒಗೆ ಮನವಿ ಸಲ್ಲಿಸಿದ್ದಾರೆ. ಪಂಚಾಯಿತಿ ಮುಂಭಾಗ ಪ್ರತಿಭಟನೆಯನ್ನೂ ನಡೆಸಿದ್ದಾರೆ. ಆದರೆ, ಅಧಿಕಾರಿಗಳು ಮಾತ್ರ ಸ್ಪಂದಿಸುತ್ತಿಲ್ಲ ಎಂದು ನೂರುಲ್ಲಾ ಆಕ್ರೋಶ ವ್ಯಕ್ತಪಡಿಸಿದರು.