<p><strong>ಚಾಮರಾಜನಗರ: </strong>ಸಂಕ್ರಾಂತಿ ಹಬ್ಬ ಸಮೀಪಿಸುತ್ತಿರುವಂತೆಯೇ ಹೂವುಗಳ ಬೆಲೆಯಲ್ಲಿ ಏರಿಕೆಯಾಗಿದೆ. ಕೆಲವು ತರಕಾರಿಗಳು ತುಟ್ಟಿಯಾಗಿವೆ. ಹಣ್ಣುಗಳು, ಮಾಂಸ ಬೆಲೆಯಲ್ಲಿ ವ್ಯತ್ಯಾಸವಾಗಿಲ್ಲ.</p>.<p>ಬಿಡಿ ಹೂವಿನ ಮಾರುಕಟ್ಟೆಯಲ್ಲಿ ಎಲ್ಲ ಹೂವುಗಳ ಬೆಲೆಯಲ್ಲಿ ಏರಿಕೆ ಕಂಡು ಬಂದಿದೆ. ₹400-₹500ರಷ್ಟಿದ್ದ ಕೆಜಿ ಕನಕಾಂಬರದ ಬೆಲೆ ಈ ವಾರ ₹600 ತಲುಪಿದೆ.</p>.<p>ಕಾಕಡದ ದರ ₹160ರಿಂದ ₹320ಕ್ಕೆ ಏರಿದೆ. ಚೆಂಡು ಹೂವಿನ ಬೆಲೆ ₹50ಕ್ಕೆ ಏರಿದೆ. ಸುಂಗಧರಾಜಕ್ಕೆ ಕೆಜಿಗೆ ₹120 ಆಗಿದೆ.</p>.<p>'ವಾರದಿಂದೀಚೆಗೆ ಹೂವುಗಳಿಗೆ ಬೇಡಿಕೆ ಹೆಚ್ಚಿದೆ. ಸಂಕ್ರಾಂತಿ ಹತ್ತಿರದಲ್ಲಿರುವುದರಿಂದ ಜನರು ಹೆಚ್ಚು ಖರೀದಿಸುತ್ತಿದ್ದಾರೆ. ಹೀಗಾಗಿ ಬೆಲೆ ಹೆಚ್ಚಾಗಿದೆ. ಶಿವರಾತ್ರಿವರೆಗೂ ಇದೇ ದರ ಮುಂದುವರಿಯಲಿದೆ' ಎಂದು ಬಿಡಿ ಹೂವಿನ ವ್ಯಾಪಾರಿ ರವಿ ಅವರು ಪ್ರಜಾವಾಣಿಗೆ ತಿಳಿಸಿದರು.</p>.<p>ತರಕಾರಿಗಳ ಪೈಕಿ ಟೊಮೆಟೊ, ಬೀನ್ಸ್, ಈರುಳ್ಳಿ ಸ್ವಲ್ಪ ತುಟ್ಟಿಯಾಗಿವೆ. ಕೆಲವು ವಾರಗಳಿಂದ ಹಾಪ್ಕಾಮ್ಸ್ ನಲ್ಲಿ ₹15 ಇದ್ದ ಟೊಮೆಟೊ ಬೆಲೆ ಈ ವಾರ ₹5 ಹೆಚ್ಚಾಗಿದೆ. ಅದೇ ರೀತಿ ಬೀನ್ಸ್ ಧಾರಣೆ ₹10, ಈರುಳ್ಳಿ ಬೆಲೆ ₹10 ಹೆಚ್ಚಾಗಿ ₹50 ತಲುಪಿದೆ.</p>.<p>'ಮಾರುಕಟ್ಟೆಗೆ ಈರುಳ್ಳಿ ಆವಕ ಕಡಿಮೆಯಾಗುತ್ತಿದೆ. ಬೀನ್ಸ್ ಬರುವ ಪ್ರಮಾಣವೂ ಕಡಿಮೆಯಾಗಿದೆ. ಹಾಗಾಗಿ ಬೆಲೆಯಲ್ಲಿ ಕೊಂಚ ಹೆಚ್ಚಳವಾಗಿದೆ’ ಎಂದು ಹಾಪ್ಕಾಮ್ಸ್ ವ್ಯಾಪಾರಿ ಮಧು ಮಾಹಿತಿ ನೀಡಿದರು.</p>.<p>ಹಣ್ಣುಗಳ ಬೆಲೆಯಲ್ಲಿ ವ್ಯತ್ಯಾಸವಾಗಿಲ್ಲ. ದಾಳಿಂಬೆ ದುಬಾರಿ ಬೆಲೆ (₹200) ಮುಂದುವರಿದಿದೆ. ಕಿತ್ತಳೆ ಹೆಚ್ಚಿನ ಪ್ರಮಾಣದಲ್ಲಿ ಆವಕವಾಗುತ್ತಿದ್ದು, ಕೆಜಿಗೆ ₹50ಕ್ಕೆ ಮಾರಾಟವಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ: </strong>ಸಂಕ್ರಾಂತಿ ಹಬ್ಬ ಸಮೀಪಿಸುತ್ತಿರುವಂತೆಯೇ ಹೂವುಗಳ ಬೆಲೆಯಲ್ಲಿ ಏರಿಕೆಯಾಗಿದೆ. ಕೆಲವು ತರಕಾರಿಗಳು ತುಟ್ಟಿಯಾಗಿವೆ. ಹಣ್ಣುಗಳು, ಮಾಂಸ ಬೆಲೆಯಲ್ಲಿ ವ್ಯತ್ಯಾಸವಾಗಿಲ್ಲ.</p>.<p>ಬಿಡಿ ಹೂವಿನ ಮಾರುಕಟ್ಟೆಯಲ್ಲಿ ಎಲ್ಲ ಹೂವುಗಳ ಬೆಲೆಯಲ್ಲಿ ಏರಿಕೆ ಕಂಡು ಬಂದಿದೆ. ₹400-₹500ರಷ್ಟಿದ್ದ ಕೆಜಿ ಕನಕಾಂಬರದ ಬೆಲೆ ಈ ವಾರ ₹600 ತಲುಪಿದೆ.</p>.<p>ಕಾಕಡದ ದರ ₹160ರಿಂದ ₹320ಕ್ಕೆ ಏರಿದೆ. ಚೆಂಡು ಹೂವಿನ ಬೆಲೆ ₹50ಕ್ಕೆ ಏರಿದೆ. ಸುಂಗಧರಾಜಕ್ಕೆ ಕೆಜಿಗೆ ₹120 ಆಗಿದೆ.</p>.<p>'ವಾರದಿಂದೀಚೆಗೆ ಹೂವುಗಳಿಗೆ ಬೇಡಿಕೆ ಹೆಚ್ಚಿದೆ. ಸಂಕ್ರಾಂತಿ ಹತ್ತಿರದಲ್ಲಿರುವುದರಿಂದ ಜನರು ಹೆಚ್ಚು ಖರೀದಿಸುತ್ತಿದ್ದಾರೆ. ಹೀಗಾಗಿ ಬೆಲೆ ಹೆಚ್ಚಾಗಿದೆ. ಶಿವರಾತ್ರಿವರೆಗೂ ಇದೇ ದರ ಮುಂದುವರಿಯಲಿದೆ' ಎಂದು ಬಿಡಿ ಹೂವಿನ ವ್ಯಾಪಾರಿ ರವಿ ಅವರು ಪ್ರಜಾವಾಣಿಗೆ ತಿಳಿಸಿದರು.</p>.<p>ತರಕಾರಿಗಳ ಪೈಕಿ ಟೊಮೆಟೊ, ಬೀನ್ಸ್, ಈರುಳ್ಳಿ ಸ್ವಲ್ಪ ತುಟ್ಟಿಯಾಗಿವೆ. ಕೆಲವು ವಾರಗಳಿಂದ ಹಾಪ್ಕಾಮ್ಸ್ ನಲ್ಲಿ ₹15 ಇದ್ದ ಟೊಮೆಟೊ ಬೆಲೆ ಈ ವಾರ ₹5 ಹೆಚ್ಚಾಗಿದೆ. ಅದೇ ರೀತಿ ಬೀನ್ಸ್ ಧಾರಣೆ ₹10, ಈರುಳ್ಳಿ ಬೆಲೆ ₹10 ಹೆಚ್ಚಾಗಿ ₹50 ತಲುಪಿದೆ.</p>.<p>'ಮಾರುಕಟ್ಟೆಗೆ ಈರುಳ್ಳಿ ಆವಕ ಕಡಿಮೆಯಾಗುತ್ತಿದೆ. ಬೀನ್ಸ್ ಬರುವ ಪ್ರಮಾಣವೂ ಕಡಿಮೆಯಾಗಿದೆ. ಹಾಗಾಗಿ ಬೆಲೆಯಲ್ಲಿ ಕೊಂಚ ಹೆಚ್ಚಳವಾಗಿದೆ’ ಎಂದು ಹಾಪ್ಕಾಮ್ಸ್ ವ್ಯಾಪಾರಿ ಮಧು ಮಾಹಿತಿ ನೀಡಿದರು.</p>.<p>ಹಣ್ಣುಗಳ ಬೆಲೆಯಲ್ಲಿ ವ್ಯತ್ಯಾಸವಾಗಿಲ್ಲ. ದಾಳಿಂಬೆ ದುಬಾರಿ ಬೆಲೆ (₹200) ಮುಂದುವರಿದಿದೆ. ಕಿತ್ತಳೆ ಹೆಚ್ಚಿನ ಪ್ರಮಾಣದಲ್ಲಿ ಆವಕವಾಗುತ್ತಿದ್ದು, ಕೆಜಿಗೆ ₹50ಕ್ಕೆ ಮಾರಾಟವಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>