<p><strong>ಗುಂಡ್ಲುಪೇಟೆ:</strong> ತಾಲ್ಲೂಕಿನ ಹೊನ್ನಶೆಟ್ಟರ ಹುಂಡಿ ಮತ್ತು ಮೂಖಹಳ್ಳಿ ಗ್ರಾಮದ ವ್ಯಾಪ್ತಿಯಲ್ಲಿ ಹುಲಿಯೊಂದು ಆಗಿಂದಾಗ್ಗೆ ಕಾಣಿಸಿಕೊಂಡು ರೈತಾಪಿ ವರ್ಗದ ಜನರನ್ನು ಆತಂಕಕ್ಕೆ ದೂಡಿದೆ.</p>.<p>‘ಹುಲಿಗಳ ಹಾವಳಿ ಬಗ್ಗೆ ಇಲಾಖೆಯ ಗಮನಕ್ಕೆ ತಂದಿದ್ದರೂ ಯಾವುದೇ ಪ್ರಯೋಜನ ಆಗಿಲ್ಲ. ಹುಲಿ ಸೆರೆಗೆ ಅಧಿಕಾರಿಗಳು ಕಾರ್ಯಾಚರಣೆ ಮಾಡುತ್ತಿಲ್ಲ’ ಎಂಬುದು ಗ್ರಾಮಸ್ಥರ ಆರೋಪ.</p>.<p>ಈ ಭಾಗದಲ್ಲಿ ಹುಲಿ ಕಾಟದಿಂದ ಕೃಷಿ ಜಮೀನುಗಳು ಪಾಳು ಬಿದ್ದಿರುವ ಕುರಿತು ‘ಪ್ರಜಾವಾಣಿ’ಯ ಜೂನ್ 7ರ ಸಂಚಿಕೆಯಲ್ಲಿ ವಿಶೇಷ ವರದಿ (ಹುಲಿಗಳ ಕಾಟ: ಪಾಳು ಬಿದ್ದ ಜಮೀನುಗಳು) ಪ್ರಕಟವಾಗಿತ್ತು. ಆ ಬಳಿಕ ಇಲಾಖೆಯ ಸಿಬ್ಬಂದಿ ಗ್ರಾಮದಲ್ಲಿ ಹುಲಿ ಸೆರೆಗೆ ಬೋನು ಇಟ್ಟು ಹೋಗಿದ್ದಾರೆ. ಹುಲಿಯ ಚಲನವಲನಗಳನ್ನು ಅರಿಯುವುದಕ್ಕಾಗಿ ಅಲ್ಲಲ್ಲಿ ಕ್ಯಾಮೆರಾ ಟ್ರ್ಯಾಪ್ ಅಳವಡಿಸಿದ್ದಾರೆ.</p>.<p>‘ವರದಿ ಪ್ರಕಟವಾದ ನಂತರ ಇಲಾಖೆಯವರು ಗ್ರಾಮಸ್ಥರನ್ನು ಸಮಾಧಾನ ಪಡಿಸುವ ಸಲುವಾಗಿ ಬೋನು ಇಟ್ಟು ಹೋಗಿದ್ದರು. ಹುಲಿಗಳ ಹೆಜ್ಜೆ ಗುರುತು ಪತ್ತೆ ಮಾಡಿಲ್ಲ, ಕೂಂಬಿಂಗ್ ಮಾಡಿಲ್ಲ’ ಎಂದು ಸ್ಥಳೀಯರು ಆರೋಪಿಸಿದರು.</p>.<p>‘ಹುಲಿಗಳ ಭಯದಿಂದ ಜಮೀನುಗಳಿಗೆ ಹೋಗಲು ಹೆದರಿಕೆ ಆಗುತ್ತಿದೆ. ಸಂಜೆಯಾಗುತ್ತಿದ್ದಂತೆ ಮನೆ ಸೇರಬೇಕಿದೆ. ಜಮೀನಿನಲ್ಲಿ ಈರುಳ್ಳಿ ಕೀಳುತ್ತಿದ್ದು, ಬೆಳೆಯನ್ನು ಕಾಯಲು ಭಯವಾಗುತ್ತದೆ. ಕಳ್ಳತನವಾದರೂ ಮನೆಗೆ ಹೋಗಬೇಕಿದೆ’ ಎಂದು ಗ್ರಾಮದ ರೈತ ಮಹೇಶ ಅಳಲು ತೋಡಿಕೊಂಡರು.</p>.<p>‘ಇಲಾಖೆಯ ಸಿಬ್ಬಂದಿ ಗ್ರಾಮಕ್ಕೆ ಬಂದು ಬೋನು ಇಟ್ಟು ಹೋಗಿದ್ದಾರೆ. ಸೆರೆಗೆ ಅಗತ್ಯವಾದ ನಾಯಿ ಅಥವಾ ಮೇಕೆಯನ್ನು ಕಟ್ಟಿಲ್ಲ. ಖಾಲಿ ಬೋನು ಇರಿಸಿದ್ದಾರೆ’ ಎಂದು ದೂರಿದರು.</p>.<p class="Subhead"><strong>ಹುಲಿ ಇರುವುದು ದೃಢ:</strong> ಹೊನ್ನರಶೆಟ್ಟರ ಹುಂಡಿ ಮತ್ತು ಮೂಖಹಳ್ಳಿ ಭಾಗದಲ್ಲಿ ಸಂಚರಿಸುತ್ತಿರುವುದು ಹುಲಿಯೇ ಅಥವಾ ಚಿರತೆಯೇ ಎಂಬ ಅನುಮಾನ ಅರಣ್ಯ ಅಧಿಕಾರಿಗಳಲ್ಲಿತ್ತು. ಇದನ್ನು ದೃಢಪಡಿಸುವುದಕ್ಕಾಗಿ ಕ್ಯಾಮೆರಾ ಟ್ರ್ಯಾಪ್ ಅಳವಡಿಸಿದ್ದರು. ಕ್ಯಾಮೆರಾದಲ್ಲಿ ಹುಲಿ ಓಡಾಡುತ್ತಿರುವುದು ದೃಢಪಟ್ಟಿದೆ.</p>.<p>‘ಹುಲಿ ಭಯದಿಂದ ಜಮೀನಿನಲ್ಲಿ ಕೃಷಿ ಚಟುವಟಿಕೆಗಳನ್ನು ಮಾಡಲು ಆಗುತ್ತಿಲ್ಲ. ರಾತ್ರಿ ಸಮಯದಲ್ಲಿ ನೀರು ಬೀಡಲು ಆಗುತ್ತಿಲ್ಲ. ಆದ್ದರಿಂದ ಹೆಚ್ಚಿನ ಬೋನು ಅಳವಡಿಸಿ ಶೀಘ್ರವಾಗಿ ಹುಲಿ ಸೆರೆ ಹಿಡಿಯಬೇಕು’ ಎಂದು ಗ್ರಾಮಸ್ಥರು ಒತ್ತಾಯಿಸಿದರು.</p>.<p class="Subhead"><strong>ಪ್ರತಿಭಟನೆಯ ಎಚ್ಚರಿಕೆ:</strong>ಹುಲಿ ಸೆರೆ ಹಿಡಿಯಲು ವಿಳಂಬ ಮಾಡಿ ಜಾನುವಾರುಗಳು ಮತ್ತು ಜನರ ಮೇಲೆ ದಾಳಿಯಾದರೆ ವಲಯ ಅರಣ್ಯಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ರೈತ ಮುಖಂಡ ಶಿವಪುರ ಮಹದೇವಪ್ಪ ಎಚ್ಚರಿಕೆ ನೀಡಿದರು.</p>.<p class="Subhead">***</p>.<p class="Subhead">ಹುಲಿ ಈ ಭಾಗದಲ್ಲಿ ಓಡಾಡುತ್ತಿರುವುದು ದೃಢಪಟ್ಟಿದೆ. ಶೀಘ್ರವಾಗಿ ಸೆರೆ ಹಿಡಿಯಲು ಕ್ರಮ ವಹಿಸಲಾಗುವುದು.<br /><em><strong>-ಡಾ.ರಮೇಶ್ ಕುಮಾರ್, ಹುಲಿ ಯೋಜನೆ ನಿರ್ದೇಶಕ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಂಡ್ಲುಪೇಟೆ:</strong> ತಾಲ್ಲೂಕಿನ ಹೊನ್ನಶೆಟ್ಟರ ಹುಂಡಿ ಮತ್ತು ಮೂಖಹಳ್ಳಿ ಗ್ರಾಮದ ವ್ಯಾಪ್ತಿಯಲ್ಲಿ ಹುಲಿಯೊಂದು ಆಗಿಂದಾಗ್ಗೆ ಕಾಣಿಸಿಕೊಂಡು ರೈತಾಪಿ ವರ್ಗದ ಜನರನ್ನು ಆತಂಕಕ್ಕೆ ದೂಡಿದೆ.</p>.<p>‘ಹುಲಿಗಳ ಹಾವಳಿ ಬಗ್ಗೆ ಇಲಾಖೆಯ ಗಮನಕ್ಕೆ ತಂದಿದ್ದರೂ ಯಾವುದೇ ಪ್ರಯೋಜನ ಆಗಿಲ್ಲ. ಹುಲಿ ಸೆರೆಗೆ ಅಧಿಕಾರಿಗಳು ಕಾರ್ಯಾಚರಣೆ ಮಾಡುತ್ತಿಲ್ಲ’ ಎಂಬುದು ಗ್ರಾಮಸ್ಥರ ಆರೋಪ.</p>.<p>ಈ ಭಾಗದಲ್ಲಿ ಹುಲಿ ಕಾಟದಿಂದ ಕೃಷಿ ಜಮೀನುಗಳು ಪಾಳು ಬಿದ್ದಿರುವ ಕುರಿತು ‘ಪ್ರಜಾವಾಣಿ’ಯ ಜೂನ್ 7ರ ಸಂಚಿಕೆಯಲ್ಲಿ ವಿಶೇಷ ವರದಿ (ಹುಲಿಗಳ ಕಾಟ: ಪಾಳು ಬಿದ್ದ ಜಮೀನುಗಳು) ಪ್ರಕಟವಾಗಿತ್ತು. ಆ ಬಳಿಕ ಇಲಾಖೆಯ ಸಿಬ್ಬಂದಿ ಗ್ರಾಮದಲ್ಲಿ ಹುಲಿ ಸೆರೆಗೆ ಬೋನು ಇಟ್ಟು ಹೋಗಿದ್ದಾರೆ. ಹುಲಿಯ ಚಲನವಲನಗಳನ್ನು ಅರಿಯುವುದಕ್ಕಾಗಿ ಅಲ್ಲಲ್ಲಿ ಕ್ಯಾಮೆರಾ ಟ್ರ್ಯಾಪ್ ಅಳವಡಿಸಿದ್ದಾರೆ.</p>.<p>‘ವರದಿ ಪ್ರಕಟವಾದ ನಂತರ ಇಲಾಖೆಯವರು ಗ್ರಾಮಸ್ಥರನ್ನು ಸಮಾಧಾನ ಪಡಿಸುವ ಸಲುವಾಗಿ ಬೋನು ಇಟ್ಟು ಹೋಗಿದ್ದರು. ಹುಲಿಗಳ ಹೆಜ್ಜೆ ಗುರುತು ಪತ್ತೆ ಮಾಡಿಲ್ಲ, ಕೂಂಬಿಂಗ್ ಮಾಡಿಲ್ಲ’ ಎಂದು ಸ್ಥಳೀಯರು ಆರೋಪಿಸಿದರು.</p>.<p>‘ಹುಲಿಗಳ ಭಯದಿಂದ ಜಮೀನುಗಳಿಗೆ ಹೋಗಲು ಹೆದರಿಕೆ ಆಗುತ್ತಿದೆ. ಸಂಜೆಯಾಗುತ್ತಿದ್ದಂತೆ ಮನೆ ಸೇರಬೇಕಿದೆ. ಜಮೀನಿನಲ್ಲಿ ಈರುಳ್ಳಿ ಕೀಳುತ್ತಿದ್ದು, ಬೆಳೆಯನ್ನು ಕಾಯಲು ಭಯವಾಗುತ್ತದೆ. ಕಳ್ಳತನವಾದರೂ ಮನೆಗೆ ಹೋಗಬೇಕಿದೆ’ ಎಂದು ಗ್ರಾಮದ ರೈತ ಮಹೇಶ ಅಳಲು ತೋಡಿಕೊಂಡರು.</p>.<p>‘ಇಲಾಖೆಯ ಸಿಬ್ಬಂದಿ ಗ್ರಾಮಕ್ಕೆ ಬಂದು ಬೋನು ಇಟ್ಟು ಹೋಗಿದ್ದಾರೆ. ಸೆರೆಗೆ ಅಗತ್ಯವಾದ ನಾಯಿ ಅಥವಾ ಮೇಕೆಯನ್ನು ಕಟ್ಟಿಲ್ಲ. ಖಾಲಿ ಬೋನು ಇರಿಸಿದ್ದಾರೆ’ ಎಂದು ದೂರಿದರು.</p>.<p class="Subhead"><strong>ಹುಲಿ ಇರುವುದು ದೃಢ:</strong> ಹೊನ್ನರಶೆಟ್ಟರ ಹುಂಡಿ ಮತ್ತು ಮೂಖಹಳ್ಳಿ ಭಾಗದಲ್ಲಿ ಸಂಚರಿಸುತ್ತಿರುವುದು ಹುಲಿಯೇ ಅಥವಾ ಚಿರತೆಯೇ ಎಂಬ ಅನುಮಾನ ಅರಣ್ಯ ಅಧಿಕಾರಿಗಳಲ್ಲಿತ್ತು. ಇದನ್ನು ದೃಢಪಡಿಸುವುದಕ್ಕಾಗಿ ಕ್ಯಾಮೆರಾ ಟ್ರ್ಯಾಪ್ ಅಳವಡಿಸಿದ್ದರು. ಕ್ಯಾಮೆರಾದಲ್ಲಿ ಹುಲಿ ಓಡಾಡುತ್ತಿರುವುದು ದೃಢಪಟ್ಟಿದೆ.</p>.<p>‘ಹುಲಿ ಭಯದಿಂದ ಜಮೀನಿನಲ್ಲಿ ಕೃಷಿ ಚಟುವಟಿಕೆಗಳನ್ನು ಮಾಡಲು ಆಗುತ್ತಿಲ್ಲ. ರಾತ್ರಿ ಸಮಯದಲ್ಲಿ ನೀರು ಬೀಡಲು ಆಗುತ್ತಿಲ್ಲ. ಆದ್ದರಿಂದ ಹೆಚ್ಚಿನ ಬೋನು ಅಳವಡಿಸಿ ಶೀಘ್ರವಾಗಿ ಹುಲಿ ಸೆರೆ ಹಿಡಿಯಬೇಕು’ ಎಂದು ಗ್ರಾಮಸ್ಥರು ಒತ್ತಾಯಿಸಿದರು.</p>.<p class="Subhead"><strong>ಪ್ರತಿಭಟನೆಯ ಎಚ್ಚರಿಕೆ:</strong>ಹುಲಿ ಸೆರೆ ಹಿಡಿಯಲು ವಿಳಂಬ ಮಾಡಿ ಜಾನುವಾರುಗಳು ಮತ್ತು ಜನರ ಮೇಲೆ ದಾಳಿಯಾದರೆ ವಲಯ ಅರಣ್ಯಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ರೈತ ಮುಖಂಡ ಶಿವಪುರ ಮಹದೇವಪ್ಪ ಎಚ್ಚರಿಕೆ ನೀಡಿದರು.</p>.<p class="Subhead">***</p>.<p class="Subhead">ಹುಲಿ ಈ ಭಾಗದಲ್ಲಿ ಓಡಾಡುತ್ತಿರುವುದು ದೃಢಪಟ್ಟಿದೆ. ಶೀಘ್ರವಾಗಿ ಸೆರೆ ಹಿಡಿಯಲು ಕ್ರಮ ವಹಿಸಲಾಗುವುದು.<br /><em><strong>-ಡಾ.ರಮೇಶ್ ಕುಮಾರ್, ಹುಲಿ ಯೋಜನೆ ನಿರ್ದೇಶಕ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>