ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಸಿಬ್ಬಂದಿ ಸ್ಥಳಕ್ಕೆ ತೆರಳಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಅದಾಗಲೇ, ಹತ್ತಾರು ಎಕರೆ ಪ್ರದೇಶ ಬೆಂಕಿಗೆ ಆಹುತಿಯಾಗಿತ್ತು. ಕಣ್ಣೂರು ಬೀಟ್ನ ಗುಂಡಾಲ್ ಜಲಾಶಯದ ಸುತ್ತಮುತ್ತಲಿನ ಪ್ರದೇಶ ಧಗಧಗನೆ ಹೊತ್ತಿ ಉರಿದಿದೆ. ಈ ಭಾಗದಲ್ಲಿ ಕುರುಚಲು ಕಾಡು ಹೆಚ್ಚಾಗಿದ್ದು, ದೊಡ್ಡ ಮರಗಳಿಲ್ಲ. ಹಾಗಾಗಿ ಹೆಚ್ಚಿನ ಹಾನಿಯಾಗಿಲ್ಲ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ.