<p><strong>ಗುಂಡ್ಲುಪೇಟೆ</strong>: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗುಂಡ್ಲುಪೇಟೆ ಬಫರ್ ಜೋನ್ ವ್ಯಾಪ್ತಿಗೆ ಬರುವ ತ್ರಿಯಂಭಕಪುರ ದಕ್ಷಿಣದ ಸಂರಕ್ಷಿತ ಅರಣ್ಯ ಪ್ರದೇಶಕ್ಕೆ ಶನಿವಾರ ಸಂಜೆ ಬೆಂಕಿ ಬಿದ್ದಿದ್ದು, ಅಪಾರ ಪ್ರಮಾಣದ ಅರಣ್ಯ ನಾಶವಾಗಿದೆ.</p>.<p>ಶನಿವಾರ ಸಂಜೆ ಅರಣ್ಯದಂಚಿನಲ್ಲಿ ಕಾಣಿಸಿಕೊಂಡ ಬೆಂಕಿ, ಹುಲ್ಲು, ಇತರೆ ಗಿಡಗಂಟೆಗಳು ಒಣಗಿ ನಿಂತಿದ್ದ ಕಾರಣ ಗಾಳಿಯ ರಭಸಕ್ಕೆ ಪೂರ್ವ-ಪಶ್ಚಿಮಾಭಿಮುಖವಾಗಿ ವ್ಯಾಪಿಸಿತ್ತು. ಬೆಂಕಿ ತನ್ನ ಕೆನ್ನಾಲಿಗೆಯನ್ನು ಚಾಚುತ್ತಿದ್ದ ದೃಶ್ಯ ತ್ರಿಯಂಭಕಪುರ ಮತ್ತು ಕಗ್ಗಳ, ಕಗ್ಗಳದಹುಂಡಿ, ತೆರಕಣಾಂಬಿ ಗ್ರಾಮಗಳಿಗೆ ಸ್ಪಷ್ಟವಾಗಿ ಗೋಚರಿಸುತ್ತಿತ್ತು. ಜನರು ಚಿತ್ರ ತೆಗೆದು, ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದರು.</p>.<p>ಮಾಹಿತಿ ತಿಳಿದು ಅಧಿಕಾರಿಗಳು ಹಾಗೂ ಸಿಬ್ಬಂದಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ವಾಹನದ ಸಹಾಯದಿಂದ ಬೆಂಕಿ ನಂದಿಸುವ ಪ್ರಯತ್ನ ನಡೆಸಿದರು. ನೂರಾರು ಎಕರೆ ಸಂರಕ್ಷಿತ ಅರಣ್ಯ ನಾಶವಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಅರಣ್ಯ ಅಧಿಕಾರಿಗಳು ಇದನ್ನು ನಿರಾಕರಿಸಿದ್ದಾರೆ.</p>.<p>ಈ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕ ಎಸ್.ಆರ್.ನಟೇಶ್ ಅವರು, ‘ಪಕ್ಕದ ಕೃಷಿ ಜಮೀನಿನಲ್ಲಿ ಹಾಕಿದ್ದ ಬೆಂಕಿ ತೀವ್ರವಾದ ಗಾಳಿಗೆ ಸಂರಕ್ಷಿತ ಅರಣ್ಯ ಪ್ರದೇಶಕ್ಕೆ ಹರಡಿತು. ತಕ್ಷಣವೇ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಂಡ್ಲುಪೇಟೆ</strong>: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗುಂಡ್ಲುಪೇಟೆ ಬಫರ್ ಜೋನ್ ವ್ಯಾಪ್ತಿಗೆ ಬರುವ ತ್ರಿಯಂಭಕಪುರ ದಕ್ಷಿಣದ ಸಂರಕ್ಷಿತ ಅರಣ್ಯ ಪ್ರದೇಶಕ್ಕೆ ಶನಿವಾರ ಸಂಜೆ ಬೆಂಕಿ ಬಿದ್ದಿದ್ದು, ಅಪಾರ ಪ್ರಮಾಣದ ಅರಣ್ಯ ನಾಶವಾಗಿದೆ.</p>.<p>ಶನಿವಾರ ಸಂಜೆ ಅರಣ್ಯದಂಚಿನಲ್ಲಿ ಕಾಣಿಸಿಕೊಂಡ ಬೆಂಕಿ, ಹುಲ್ಲು, ಇತರೆ ಗಿಡಗಂಟೆಗಳು ಒಣಗಿ ನಿಂತಿದ್ದ ಕಾರಣ ಗಾಳಿಯ ರಭಸಕ್ಕೆ ಪೂರ್ವ-ಪಶ್ಚಿಮಾಭಿಮುಖವಾಗಿ ವ್ಯಾಪಿಸಿತ್ತು. ಬೆಂಕಿ ತನ್ನ ಕೆನ್ನಾಲಿಗೆಯನ್ನು ಚಾಚುತ್ತಿದ್ದ ದೃಶ್ಯ ತ್ರಿಯಂಭಕಪುರ ಮತ್ತು ಕಗ್ಗಳ, ಕಗ್ಗಳದಹುಂಡಿ, ತೆರಕಣಾಂಬಿ ಗ್ರಾಮಗಳಿಗೆ ಸ್ಪಷ್ಟವಾಗಿ ಗೋಚರಿಸುತ್ತಿತ್ತು. ಜನರು ಚಿತ್ರ ತೆಗೆದು, ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದರು.</p>.<p>ಮಾಹಿತಿ ತಿಳಿದು ಅಧಿಕಾರಿಗಳು ಹಾಗೂ ಸಿಬ್ಬಂದಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ವಾಹನದ ಸಹಾಯದಿಂದ ಬೆಂಕಿ ನಂದಿಸುವ ಪ್ರಯತ್ನ ನಡೆಸಿದರು. ನೂರಾರು ಎಕರೆ ಸಂರಕ್ಷಿತ ಅರಣ್ಯ ನಾಶವಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಅರಣ್ಯ ಅಧಿಕಾರಿಗಳು ಇದನ್ನು ನಿರಾಕರಿಸಿದ್ದಾರೆ.</p>.<p>ಈ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕ ಎಸ್.ಆರ್.ನಟೇಶ್ ಅವರು, ‘ಪಕ್ಕದ ಕೃಷಿ ಜಮೀನಿನಲ್ಲಿ ಹಾಕಿದ್ದ ಬೆಂಕಿ ತೀವ್ರವಾದ ಗಾಳಿಗೆ ಸಂರಕ್ಷಿತ ಅರಣ್ಯ ಪ್ರದೇಶಕ್ಕೆ ಹರಡಿತು. ತಕ್ಷಣವೇ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>