<p><strong>ಗುಂಡ್ಲುಪೇಟೆ</strong>: ತಾಲ್ಲೂಕಿನ ದೇಶಿಪುರದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂತ್ರಿ ಮಂಡಲವನ್ನು ಚುನಾವಣೆ ನಡೆಸುವ ಮೂಲಕ ರಚನೆ ಮಾಡಲಾಯಿತು.</p>.<p>ಅಭ್ಯರ್ಥಿಗಳು ವಿವಿಧ ಚಿಹ್ನೆಗಳನ್ನು ಹೊಂದಿದ್ದು, ತಮ್ಮ ಪರ ಮತ ಚಲಾಯಿಸುವಂತೆ ವಿದ್ಯಾರ್ಥಿಗಳಿಗೆ ವಿನಂತಿಸಿಕೊಂಡಿದ್ದರು. ಗೋಪ್ಯ ಮತದಾನದ ಮೂಲಕ ಶಾಲಾ ವಿದ್ಯಾರ್ಥಿಗಳು ತಮ್ಮ ಗುರುತಿನ ಚೀಟಿ, ಆಧಾರ್ ಕಾರ್ಡ್ ತೋರಿಸಿ ತಮ್ಮ ನೆಚ್ಚಿನ ಅಭ್ಯರ್ಥಿಗಳಿಗೆ ಮತ ಚಲಾಯಿಸಿದರು. ಈ ಸಂದರ್ಭದಲ್ಲಿ ಚುನಾವಣೆಯ ಪ್ರಕ್ರಿಯೆಗಳಂತೆ ಶಾಲೆಯಲ್ಲೂ ಮಾದರಿ ಚುನಾವಣೆ ನಡೆಸಿ ಮಕ್ಕಳಲ್ಲಿ ಚುನಾವಣೆ ಗೋಪ್ಯತೆ ಮತ್ತು ಮತದಾನದ ಮಹತ್ವವನ್ನು ಪ್ರಾತ್ಯಕ್ಷಿಕೆ ಮೂಲಕ ತಿಳಿಸಿಕೊಡಲಾಯಿತು. ಹಾಗೆಯೇ ಅಭ್ಯರ್ಥಿಗಳಿಗೆ ಎದುರಿಗೆ ಮತಪತ್ರಗಳನ್ನು ಎಣಿಕೆ ಮಾಡಲಾಯಿತು.</p>.<p>ಅತಿ ಹೆಚ್ಚು ಮತ ಪಡೆದ ಅಭ್ಯರ್ಥಿಯನ್ನು ಹಾಗೂ ಶಾಲಾ ಮಂತ್ರಿಮಂಡಲಕ್ಕೆ ಆಯ್ಕೆಯಾದ ನೂತನ ಸದಸ್ಯರಿಗೆ ಸಹಶಿಕ್ಷಕ ನಂದೀಶ್ ಪ್ರತಿಜ್ಞಾವಿಧಿ ಬೋಧಿಸಿದರು. ಚುನಾವಣಾ ಪ್ರಕ್ರಿಯೆಯನ್ನು ಮುಖ್ಯ ಶಿಕ್ಷಕರಾದ ಪುಟ್ಟಬುದ್ದಿ, ನಂದೀಶ್, ನಾಗಮ್ಮ ಪವಿತ್ರ ನಡೆಸಿಕೊಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಂಡ್ಲುಪೇಟೆ</strong>: ತಾಲ್ಲೂಕಿನ ದೇಶಿಪುರದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂತ್ರಿ ಮಂಡಲವನ್ನು ಚುನಾವಣೆ ನಡೆಸುವ ಮೂಲಕ ರಚನೆ ಮಾಡಲಾಯಿತು.</p>.<p>ಅಭ್ಯರ್ಥಿಗಳು ವಿವಿಧ ಚಿಹ್ನೆಗಳನ್ನು ಹೊಂದಿದ್ದು, ತಮ್ಮ ಪರ ಮತ ಚಲಾಯಿಸುವಂತೆ ವಿದ್ಯಾರ್ಥಿಗಳಿಗೆ ವಿನಂತಿಸಿಕೊಂಡಿದ್ದರು. ಗೋಪ್ಯ ಮತದಾನದ ಮೂಲಕ ಶಾಲಾ ವಿದ್ಯಾರ್ಥಿಗಳು ತಮ್ಮ ಗುರುತಿನ ಚೀಟಿ, ಆಧಾರ್ ಕಾರ್ಡ್ ತೋರಿಸಿ ತಮ್ಮ ನೆಚ್ಚಿನ ಅಭ್ಯರ್ಥಿಗಳಿಗೆ ಮತ ಚಲಾಯಿಸಿದರು. ಈ ಸಂದರ್ಭದಲ್ಲಿ ಚುನಾವಣೆಯ ಪ್ರಕ್ರಿಯೆಗಳಂತೆ ಶಾಲೆಯಲ್ಲೂ ಮಾದರಿ ಚುನಾವಣೆ ನಡೆಸಿ ಮಕ್ಕಳಲ್ಲಿ ಚುನಾವಣೆ ಗೋಪ್ಯತೆ ಮತ್ತು ಮತದಾನದ ಮಹತ್ವವನ್ನು ಪ್ರಾತ್ಯಕ್ಷಿಕೆ ಮೂಲಕ ತಿಳಿಸಿಕೊಡಲಾಯಿತು. ಹಾಗೆಯೇ ಅಭ್ಯರ್ಥಿಗಳಿಗೆ ಎದುರಿಗೆ ಮತಪತ್ರಗಳನ್ನು ಎಣಿಕೆ ಮಾಡಲಾಯಿತು.</p>.<p>ಅತಿ ಹೆಚ್ಚು ಮತ ಪಡೆದ ಅಭ್ಯರ್ಥಿಯನ್ನು ಹಾಗೂ ಶಾಲಾ ಮಂತ್ರಿಮಂಡಲಕ್ಕೆ ಆಯ್ಕೆಯಾದ ನೂತನ ಸದಸ್ಯರಿಗೆ ಸಹಶಿಕ್ಷಕ ನಂದೀಶ್ ಪ್ರತಿಜ್ಞಾವಿಧಿ ಬೋಧಿಸಿದರು. ಚುನಾವಣಾ ಪ್ರಕ್ರಿಯೆಯನ್ನು ಮುಖ್ಯ ಶಿಕ್ಷಕರಾದ ಪುಟ್ಟಬುದ್ದಿ, ನಂದೀಶ್, ನಾಗಮ್ಮ ಪವಿತ್ರ ನಡೆಸಿಕೊಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>