‘ದೊಡ್ಡ ಪ್ರಮಾಣದ ಉದ್ದಿಮೆಯಾಗಿರುವುದರಿಂದ ರಾಜ್ಯ ಮಟ್ಟದಲ್ಲಿಯೇ ಭೂಮಿ ಹಂಚಿಕೆ ಸೇರಿದಂತೆ ಎಲ್ಲ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಅವರು ಜಿಲ್ಲೆಗೆ ಭೇಟಿ ಕೊಟ್ಟಿಲ್ಲ. ಆದರೆ, ಬೆಂಗಳೂರಿನ ಸಭೆಗಳಲ್ಲಿ ಭಾಗವಹಿಸಿದ್ದಾರೆ. ಅವರ ತಂಡದ ಸದಸ್ಯರು ಮೇಲ್ವಿಚಾರಣೆ ನೋಡಿಕೊಳ್ಳುತ್ತಿದ್ದಾರೆ’ ಎಂದು ಕೈಗಾರಿಕೆ ಇಲಾಖೆ ಉಪನಿರ್ದೇಶಕ ರಾಜೇಂದ್ರ ಪ್ರಸಾದ್ ಮಾಹಿತಿ ನೀಡಿದರು.