<p>ಚಾಮರಾಜನಗರ: ಜಿಲ್ಲೆಯಲ್ಲಿ ಶುಕ್ರವಾರ 43 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. 69 ಮಂದಿ ಗುಣಮುಖರಾಗಿದ್ದಾರೆ. ಸಾವು ಸಂಭವಿಸಿಲ್ಲ.</p>.<p>ಸಕ್ರಿಯ ಪ್ರಕರಣಗಳ ಸಂಖ್ಯೆ 555ಕ್ಕೆ ಇಳಿದಿದೆ. ಈ ಪೈಕಿ 29 ಮಂದಿ ಐಸಿಯುನಲ್ಲಿ, 33 ಮಂದಿ ಹೋಂ ಐಸೊಲೇಷನ್ನಲ್ಲಿದ್ದಾರೆ. ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 30,944ಕ್ಕೆ ಏರಿದೆ. ಗುಣಮುಖರಾದವರ ಸಂಖ್ಯೆ 29,887ಕ್ಕೆ ಹಿಗ್ಗಿದೆ.</p>.<p>ಶುಕ್ರವಾರ 1,313 ಮಂದಿಯ ಕೋವಿಡ್ ಪರೀಕ್ಷಾ ವರದಿ ಬಂದಿದ್ದು, 1,260 ವರದಿಗಳು ನೆಗೆಟಿವ್ ಬಂದಿವೆ. 53 ಮಂದಿಗೆ ಸೋಂಕು ಇರುವುದು ಖಚಿತವಾಗಿದೆ. ಜಿಲ್ಲಾಡಳಿತ ತನ್ನ ವರದಿಯಲ್ಲಿ 43 ಪ್ರಕರಣಗಳನ್ನು ಮಾತ್ರ ಉಲ್ಲೇಖಿಸಿದೆ.</p>.<p>43 ಸೋಂಕಿತರಲ್ಲಿ ಚಾಮರಾಜನಗರ ತಾಲ್ಲೂಕಿನ 17, ಗುಂಡ್ಲುಪೇಟೆಯ ಮೂವರು, ಕೊಳ್ಳೇಗಾಲದ ಆರು, ಹನೂರಿನ 15, ಯಳಂದೂರು ತಾಲ್ಲೂಕು ಹಾಗೂ ಹೊರ ಜಿಲ್ಲೆಯ ತಲಾ ಒಬ್ಬರು ಇದ್ದಾರೆ.</p>.<p>ಚೇತರಿಕೆ ಕಂಡ 69 ಮಂದಿಯಲ್ಲಿ ಚಾಮರಾಜನಗರ ತಾಲ್ಲೂಕಿನವರು 32 ಮಂದಿ ಇದ್ದಾರೆ. ಉಳಿದಂತೆ ಗುಂಡ್ಲುಪೇಟೆಯ 14, ಕೊಳ್ಳೇಗಾಲದ ಏಳು, ಹನೂರಿನ 15 ಮತ್ತು ಯಳಂದೂರು ತಾಲ್ಲೂಕಿನ ಒಬ್ಬರು ಇದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಾಮರಾಜನಗರ: ಜಿಲ್ಲೆಯಲ್ಲಿ ಶುಕ್ರವಾರ 43 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. 69 ಮಂದಿ ಗುಣಮುಖರಾಗಿದ್ದಾರೆ. ಸಾವು ಸಂಭವಿಸಿಲ್ಲ.</p>.<p>ಸಕ್ರಿಯ ಪ್ರಕರಣಗಳ ಸಂಖ್ಯೆ 555ಕ್ಕೆ ಇಳಿದಿದೆ. ಈ ಪೈಕಿ 29 ಮಂದಿ ಐಸಿಯುನಲ್ಲಿ, 33 ಮಂದಿ ಹೋಂ ಐಸೊಲೇಷನ್ನಲ್ಲಿದ್ದಾರೆ. ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 30,944ಕ್ಕೆ ಏರಿದೆ. ಗುಣಮುಖರಾದವರ ಸಂಖ್ಯೆ 29,887ಕ್ಕೆ ಹಿಗ್ಗಿದೆ.</p>.<p>ಶುಕ್ರವಾರ 1,313 ಮಂದಿಯ ಕೋವಿಡ್ ಪರೀಕ್ಷಾ ವರದಿ ಬಂದಿದ್ದು, 1,260 ವರದಿಗಳು ನೆಗೆಟಿವ್ ಬಂದಿವೆ. 53 ಮಂದಿಗೆ ಸೋಂಕು ಇರುವುದು ಖಚಿತವಾಗಿದೆ. ಜಿಲ್ಲಾಡಳಿತ ತನ್ನ ವರದಿಯಲ್ಲಿ 43 ಪ್ರಕರಣಗಳನ್ನು ಮಾತ್ರ ಉಲ್ಲೇಖಿಸಿದೆ.</p>.<p>43 ಸೋಂಕಿತರಲ್ಲಿ ಚಾಮರಾಜನಗರ ತಾಲ್ಲೂಕಿನ 17, ಗುಂಡ್ಲುಪೇಟೆಯ ಮೂವರು, ಕೊಳ್ಳೇಗಾಲದ ಆರು, ಹನೂರಿನ 15, ಯಳಂದೂರು ತಾಲ್ಲೂಕು ಹಾಗೂ ಹೊರ ಜಿಲ್ಲೆಯ ತಲಾ ಒಬ್ಬರು ಇದ್ದಾರೆ.</p>.<p>ಚೇತರಿಕೆ ಕಂಡ 69 ಮಂದಿಯಲ್ಲಿ ಚಾಮರಾಜನಗರ ತಾಲ್ಲೂಕಿನವರು 32 ಮಂದಿ ಇದ್ದಾರೆ. ಉಳಿದಂತೆ ಗುಂಡ್ಲುಪೇಟೆಯ 14, ಕೊಳ್ಳೇಗಾಲದ ಏಳು, ಹನೂರಿನ 15 ಮತ್ತು ಯಳಂದೂರು ತಾಲ್ಲೂಕಿನ ಒಬ್ಬರು ಇದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>