<p><strong>ಚಾಮರಾಜನಗರ: </strong>ಮೇ 9ರಂದು ನಡೆಯಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನಕ್ಕೆ ಅಂತಿಮ ಕಣದಲ್ಲಿ ನಾಲ್ವರಿದ್ದಾರೆ. ಹಾಗಾಗಿ, ಈ ಬಾರಿಯ ಚುನಾವಣೆಯಲ್ಲಿ ಚತುಷ್ಕೋಣ ಸ್ಪರ್ಧೆ ಏರ್ಪಡಲಿದೆ.</p>.<p>ನಾಮಪತ್ರ ವಾಪಸ್ಗೆ ಕೊನೆಯ ದಿನವಾಗಿದ್ದಸೋಮವಾರ (ಏಪ್ರಿಲ್ 12) ಮೂವರು ಉಮೇದುವಾರಿಕೆಯನ್ನು ವಾಪಸ್ ಪಡೆದಿದ್ದಾರೆ.</p>.<p>ಅಧ್ಯಕ್ಷ ಸ್ಥಾನವನ್ನು ಬಯಸಿ ಒಂಬತ್ತು ಮಂದಿ ನಾಮಪತ್ರ ಸಲ್ಲಿಸಿದ್ದರು. ಈ ಪೈಕಿ ಪ್ರೊ.ಮಲೆಯೂರು ಗುರುಸ್ವಾಮಿ ಅವರು ಏಪ್ರಿಲ್ 9ರಂದೇ ವಾಪಸ್ ಪಡೆದಿದ್ದರು. ಹಾಲಿ ಅಧ್ಯಕ್ಷ ಬಿ.ಎಸ್.ವಿನಯ್ ಅವರ ನಾಮಪತ್ರ ತಿರಸ್ಕೃತಗೊಂಡಿತ್ತು. ಹಾಗಾಗಿ, ಏಳು ಮಂದಿ ಅಭ್ಯರ್ಥಿಗಳಿದ್ದರು.</p>.<p>‘ರವಿಕುಮಾರ್ ಮಾದಾಪುರ, ಶಿವಾಲಂಕಾರಯ್ಯ ಹಾಗೂ ನಿರಂಜನ್ಕುಮಾರ್ ಅವರು ಸೋಮವಾರ ನಾಮಪತ್ರ ವಾಪಸ್ ಪಡೆದಿದ್ದಾರೆ’ ಎಂದು ಸಹಾಯಕ ಚುನಾವಣಾಧಿಕಾರಿ ಮಹದೇವಶೆಟ್ಟಿ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಅಂತಿಮ ಕಣದಲ್ಲಿ ಸಿ.ಎಂ.ನರಸಿಂಹಮೂರ್ತಿ, ಶೈಲೇಶ್ ಕುಮಾರ್, ನಾಗೇಶ ಸೋಸ್ಲೆ ಮತ್ತು ಸ್ನೇಹಲಕ್ಷ್ಮಿ ಅವರು ಇದ್ದಾರೆ. ನಾಲ್ವರೂ ಹೊಸಬರಾಗಿದ್ದು, ಸ್ಪರ್ಧೆ ಕುತೂಹಲ ಕೆರಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ: </strong>ಮೇ 9ರಂದು ನಡೆಯಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನಕ್ಕೆ ಅಂತಿಮ ಕಣದಲ್ಲಿ ನಾಲ್ವರಿದ್ದಾರೆ. ಹಾಗಾಗಿ, ಈ ಬಾರಿಯ ಚುನಾವಣೆಯಲ್ಲಿ ಚತುಷ್ಕೋಣ ಸ್ಪರ್ಧೆ ಏರ್ಪಡಲಿದೆ.</p>.<p>ನಾಮಪತ್ರ ವಾಪಸ್ಗೆ ಕೊನೆಯ ದಿನವಾಗಿದ್ದಸೋಮವಾರ (ಏಪ್ರಿಲ್ 12) ಮೂವರು ಉಮೇದುವಾರಿಕೆಯನ್ನು ವಾಪಸ್ ಪಡೆದಿದ್ದಾರೆ.</p>.<p>ಅಧ್ಯಕ್ಷ ಸ್ಥಾನವನ್ನು ಬಯಸಿ ಒಂಬತ್ತು ಮಂದಿ ನಾಮಪತ್ರ ಸಲ್ಲಿಸಿದ್ದರು. ಈ ಪೈಕಿ ಪ್ರೊ.ಮಲೆಯೂರು ಗುರುಸ್ವಾಮಿ ಅವರು ಏಪ್ರಿಲ್ 9ರಂದೇ ವಾಪಸ್ ಪಡೆದಿದ್ದರು. ಹಾಲಿ ಅಧ್ಯಕ್ಷ ಬಿ.ಎಸ್.ವಿನಯ್ ಅವರ ನಾಮಪತ್ರ ತಿರಸ್ಕೃತಗೊಂಡಿತ್ತು. ಹಾಗಾಗಿ, ಏಳು ಮಂದಿ ಅಭ್ಯರ್ಥಿಗಳಿದ್ದರು.</p>.<p>‘ರವಿಕುಮಾರ್ ಮಾದಾಪುರ, ಶಿವಾಲಂಕಾರಯ್ಯ ಹಾಗೂ ನಿರಂಜನ್ಕುಮಾರ್ ಅವರು ಸೋಮವಾರ ನಾಮಪತ್ರ ವಾಪಸ್ ಪಡೆದಿದ್ದಾರೆ’ ಎಂದು ಸಹಾಯಕ ಚುನಾವಣಾಧಿಕಾರಿ ಮಹದೇವಶೆಟ್ಟಿ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಅಂತಿಮ ಕಣದಲ್ಲಿ ಸಿ.ಎಂ.ನರಸಿಂಹಮೂರ್ತಿ, ಶೈಲೇಶ್ ಕುಮಾರ್, ನಾಗೇಶ ಸೋಸ್ಲೆ ಮತ್ತು ಸ್ನೇಹಲಕ್ಷ್ಮಿ ಅವರು ಇದ್ದಾರೆ. ನಾಲ್ವರೂ ಹೊಸಬರಾಗಿದ್ದು, ಸ್ಪರ್ಧೆ ಕುತೂಹಲ ಕೆರಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>