ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಲ್ವರು ಸಾವು, 99 ಹೊಸ ಪ‍್ರಕರಣ

4,000 ಸನಿಹಕ್ಕೆ ಪ್ರಕರಣಗಳು, 3,205 ಮಂದಿ ಗುಣಮುಖ
Last Updated 29 ಸೆಪ್ಟೆಂಬರ್ 2020, 16:27 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯಲ್ಲಿ ಮಂಗಳವಾರ ಕೋವಿಡ್‌ನಿಂದಾಗಿ ನಾಲ್ವರು ಮೃತಪಟ್ಟಿದ್ದಾರೆ. ಇದರೊಂದಿಗೆ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 65ಕ್ಕೆ ಏರಿದೆ. ಕೋವಿಡ್‌ಯೇತರ ಕಾರಣದಿಂದ 28 ಮಂದಿ ನಿಧನರಾಗಿದ್ದಾರೆ.

ಚಾಮರಾಜನಗರ ತಾಲ್ಲೂಕು ಕಾಳನಹುಂಡಿ ಗ್ರಾಮದ ನಿವಾಸಿ60 ವರ್ಷದ ಸೆ.25ರಂದು ಕೋವಿಡ್‌ ಆಸ್ಪತ್ರೆಗೆ ದಾಖಲಾಗಿದ್ದು, ಸೋಮವಾರ ಮೃತಪಟ್ಟಿದ್ದಾರೆ.

ಗುಂಡ್ಲುಪೇಟೆಯ ನಿವಾಸಿ 80 ವರ್ಷದ ಮಹಿಳೆ ಸೆ.9ರಂದು ದಾಖಲಾಗಿದ್ದರು. ಸೋಮವಾರ ನಿಧನರಾಗಿದ್ದಾರೆ. ಹನೂರು ತಾಲ್ಲೂಕಿನ ಬಂಡಳ್ಳಿಯ 55 ವರ್ಷದ ಪುರುಷ 22ರಂದು ದಾಖಲಾಗಿದ್ದರು. ಮಂಗಳವಾರ ಕೊನೆಯುಸಿರೆಳೆದಿದ್ದಾರೆ.

ಯಳಂದೂರು ಪಟ್ಟಣದ 52ರ ವರ್ಷದ ವ್ಯಕ್ತಿ ಸೋಮವಾರ ಆಸ್ಪತ್ರೆಗೆ ದಾಖಲಾಗಿದ್ದು, ಅದೇ ದಿನ ಮೃತಪಟ್ಟಿದ್ದಾರೆ.

ಮಂಗಳವಾರ 99 ಹೊಸ ಕೋವಿಡ್‌–19 ಪ್ರಕರಣಗಳು ದೃಢಪಟ್ಟಿವೆ. 59 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 3,985 ಪ್ರಕರಣಗಳು ವರದಿಯಾಗಿವೆ. 3,205 ಮಂದಿ ಗುಣಮುಖರಾಗಿದ್ದಾರೆ. 687 ಮಂದಿ ಸಕ್ರಿಯ ಪ್ರಕರಣಗಳಿವೆ. 314 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. 38 ಮಂದಿ ಐಸಿಯುನಲ್ಲಿ ಇದ್ದಾರೆ.

ಮಂಗಳವಾರ 1,037 ಮಂದಿಯ ಗಂಟಲು ಮಾದರಿ ದ್ರವಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. 943 ಮಂದಿಯ ವರದಿ ನೆಗೆಟಿವ್‌ ಬಂದಿವೆ. 94 ಮಂದಿಗೆ ಸೋಂಕು ಖಚಿತವಾಗಿದೆ. ಐದು ಪ್ರಕರಣಗಳು ಮೈಸೂರಿನಲ್ಲಿ ದೃಢಪಟ್ಟಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT