<p><strong>ಚಾಮರಾಜನಗರ:</strong> ತಾಲ್ಲೂಕಿನ ಎಚ್.ಮೂಕಹಳ್ಳಿಯಲ್ಲಿ ಒಂದೇ ಕುಟುಂಬದ ನಾಲ್ವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಗ್ರಾಮದ ಮಹದೇವಪ್ಪ (46), ಅವರ ಪತ್ನಿ ಮಂಗಳಮ್ಮ (40) ವರ್ಷ, ಮಕ್ಕಳಾದ ಜ್ಯೋತಿ (14) ವರ್ಷ, ಶ್ರುತಿ (12) ಮೃತಪಟ್ಟವರು.</p>.<p>ಮಹಾದೇವಪ್ಪ ಅವರಿಗೆ 20 ದಿನಗಳ ಹಿಂದೆ ಕೋವಿಡ್ ದೃಢಪಟ್ಟು, ಚೇತರಿಸಿಕೊಂಡಿದ್ದರು. ಕೋವಿಡ್ ಹಾಗೂ ಲಾಕ್ ಡೌನ್ ಕಾರಣದಿಂದ ಕುಟುಂಬ ಆರ್ಥಿಕ ಸಂಕಷ್ಟವನ್ನೂ ಎದುರಿಸುತ್ತಿತ್ತು ಎಂದು ತಿಳಿದು ಬಂದಿದೆ.</p>.<p>ಕೂಲಿ ಕಾರ್ಮಿಕರಾಗಿದ್ದ ಮಹಾದೇವಪ್ಪ ಅವರಿಗೆ ಒಂದೂವರೆ ಎಕರೆ ಜಮೀನು ಇತ್ತು. ಮಳೆ ಆಶ್ರಿತ ಕೃಷಿ ಮಾಡಿಕೊಂಡಿದ್ದರು.</p>.<p>ಮಹಾದೇವಪ್ಪ ಅವರು ಮಂಗಳವಾರ ನಂಜನಗೂಡು ತಾಲ್ಲೂಕಿನಲ್ಲಿರುವ ಹಿರಿಯ ಮಗಳೊಂದಿಗೆ ಚೆನ್ನಾಗಿಯೇ ಮಾತನಾಡಿದ್ದಾರೆ. ಗ್ರಾಮದ ಕುಮಾರ್ ಎಂಬುವವರೊಂದಿಗೂ ಮಾತನಾಡಿದ್ದಾರೆ.</p>.<p>ಬುಧವಾರ ಬೆಳಿಗ್ಗೆ ಗ್ರಾಮದವರೊಬ್ಬರು ಕೂಲಿ ಕೆಲಸಕ್ಕೆ ಕರೆಯಲು ಹೋದಾಗ ಬಾಗಿಲು ತೆರೆದಿರಲಿಲ್ಲ. ಮನೆಯಿಂದ ಯಾವುದೇ ಸದ್ದು ಕೇಳದೇ ಇದ್ದಾಗ ಮನೆಯ ಮೇಲೆ ಹತ್ತಿ ಹೆಂಚು ಸರಿಸಿನೋಡಿದಾಗ ನಾಲ್ವರೂ ನೇಣು ಹಾಕಿಕೊಂಡಿದ್ದು ಬೆಳಕಿಗೆ ಬಂದಿದೆ.</p>.<p>ಎಸ್ ಪಿ ಭೇಟಿ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾ ಸಾರಾ ಥಾಮಸ್, ಎಎಸ್ ಪಿ ಅನಿತಾ ಹದ್ದಣ್ಣವರ್, ಡಿವೈಎಸ್ ಪಿ ಪ್ರಿಯದರ್ಶಿನಿ ಸಾಣೆಕೊಪ್ಪ ಸೇರಿದಂತೆ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.</p>.<p>'ಮೇಲ್ನೋಟಕ್ಕೆ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಂತೆ ಕಾಣುತ್ತಿದೆ. ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ನೈಜ ಕಾರಣ ತಿಳಿಯಲಿದೆ' ಎಂದು ಎಸ್ ಪಿ ದಿವ್ಯಾ ಸಾರಾ ಥಾಮಸ್ ಅವರು ಮಾಧ್ಯಮಗಳಿಗೆ ತಿಳಿಸಿದರು.</p>.<p>ಚಾಮರಾಜನಗರ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ತಾಲ್ಲೂಕಿನ ಎಚ್.ಮೂಕಹಳ್ಳಿಯಲ್ಲಿ ಒಂದೇ ಕುಟುಂಬದ ನಾಲ್ವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಗ್ರಾಮದ ಮಹದೇವಪ್ಪ (46), ಅವರ ಪತ್ನಿ ಮಂಗಳಮ್ಮ (40) ವರ್ಷ, ಮಕ್ಕಳಾದ ಜ್ಯೋತಿ (14) ವರ್ಷ, ಶ್ರುತಿ (12) ಮೃತಪಟ್ಟವರು.</p>.<p>ಮಹಾದೇವಪ್ಪ ಅವರಿಗೆ 20 ದಿನಗಳ ಹಿಂದೆ ಕೋವಿಡ್ ದೃಢಪಟ್ಟು, ಚೇತರಿಸಿಕೊಂಡಿದ್ದರು. ಕೋವಿಡ್ ಹಾಗೂ ಲಾಕ್ ಡೌನ್ ಕಾರಣದಿಂದ ಕುಟುಂಬ ಆರ್ಥಿಕ ಸಂಕಷ್ಟವನ್ನೂ ಎದುರಿಸುತ್ತಿತ್ತು ಎಂದು ತಿಳಿದು ಬಂದಿದೆ.</p>.<p>ಕೂಲಿ ಕಾರ್ಮಿಕರಾಗಿದ್ದ ಮಹಾದೇವಪ್ಪ ಅವರಿಗೆ ಒಂದೂವರೆ ಎಕರೆ ಜಮೀನು ಇತ್ತು. ಮಳೆ ಆಶ್ರಿತ ಕೃಷಿ ಮಾಡಿಕೊಂಡಿದ್ದರು.</p>.<p>ಮಹಾದೇವಪ್ಪ ಅವರು ಮಂಗಳವಾರ ನಂಜನಗೂಡು ತಾಲ್ಲೂಕಿನಲ್ಲಿರುವ ಹಿರಿಯ ಮಗಳೊಂದಿಗೆ ಚೆನ್ನಾಗಿಯೇ ಮಾತನಾಡಿದ್ದಾರೆ. ಗ್ರಾಮದ ಕುಮಾರ್ ಎಂಬುವವರೊಂದಿಗೂ ಮಾತನಾಡಿದ್ದಾರೆ.</p>.<p>ಬುಧವಾರ ಬೆಳಿಗ್ಗೆ ಗ್ರಾಮದವರೊಬ್ಬರು ಕೂಲಿ ಕೆಲಸಕ್ಕೆ ಕರೆಯಲು ಹೋದಾಗ ಬಾಗಿಲು ತೆರೆದಿರಲಿಲ್ಲ. ಮನೆಯಿಂದ ಯಾವುದೇ ಸದ್ದು ಕೇಳದೇ ಇದ್ದಾಗ ಮನೆಯ ಮೇಲೆ ಹತ್ತಿ ಹೆಂಚು ಸರಿಸಿನೋಡಿದಾಗ ನಾಲ್ವರೂ ನೇಣು ಹಾಕಿಕೊಂಡಿದ್ದು ಬೆಳಕಿಗೆ ಬಂದಿದೆ.</p>.<p>ಎಸ್ ಪಿ ಭೇಟಿ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾ ಸಾರಾ ಥಾಮಸ್, ಎಎಸ್ ಪಿ ಅನಿತಾ ಹದ್ದಣ್ಣವರ್, ಡಿವೈಎಸ್ ಪಿ ಪ್ರಿಯದರ್ಶಿನಿ ಸಾಣೆಕೊಪ್ಪ ಸೇರಿದಂತೆ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.</p>.<p>'ಮೇಲ್ನೋಟಕ್ಕೆ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಂತೆ ಕಾಣುತ್ತಿದೆ. ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ನೈಜ ಕಾರಣ ತಿಳಿಯಲಿದೆ' ಎಂದು ಎಸ್ ಪಿ ದಿವ್ಯಾ ಸಾರಾ ಥಾಮಸ್ ಅವರು ಮಾಧ್ಯಮಗಳಿಗೆ ತಿಳಿಸಿದರು.</p>.<p>ಚಾಮರಾಜನಗರ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>