ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬುದ್ಧ ಪೂರ್ಣಿಮಾ: ಬೌದ್ಧಧಮ್ಮ ಸ್ವೀಕಾರ

Last Updated 16 ಮೇ 2022, 16:18 IST
ಅಕ್ಷರ ಗಾತ್ರ

ಚಾಮರಾಜನಗರ: ನಗರದ ಕರಿನಂಜನಪುರ ರಸ್ತೆಯಲ್ಲಿರುವ ಸಾರನಾಥ ಬುದ್ಧ ವಿಹಾರದಲ್ಲಿ ಸೋಮವಾರ ನಡೆದ ವೈಶಾಖ ಬುದ್ಧ ಪೂರ್ಣಿಮಾ ಕಾರ್ಯಕ್ರಮದಲ್ಲಿ ನಾಲ್ವರು ಮಕ್ಕಳು ಸೇರಿದಂತೆ 14 ಮಂದಿ ಬೌದ್ಧಧಮ್ಮ ಸ್ವೀಕರಿಸಿದರು‌.

ಭಾರತೀಯ ಬೌದ್ಧ ಮಹಾಸಭಾದ ವತಿಯಿಂದ ನಡೆದ 2566ನೇ ಬುದ್ಧ ಪೂರ್ಣಿಮಾ ಕಾರ್ಯಕ್ರಮದಲ್ಲಿ ಬುದ್ಧನ ಬೋಧನೆಗಳು ಮತ್ತು ಬೌದ್ಧ ಧರ್ಮವನ್ನು ಒಪ್ಪಿಕೊಂಡುಮಹಾನಾಯಕ ರಕ್ಷಣಾ ವೇದಿಕೆಯ ರಾಜ್ಯ ಉಪಾಧ್ಯಕ್ಷ ಹಾಗೂ ವಕೀಲ ಪ್ರಸನ್ನಕುಮಾರ್ ಮತ್ತು ಕುಟುಂಬ ವರ್ಗ,ಕಾಗಲವಾಡಿ ಡಾ.ಶಿವಕುಮಾರ್, ಕರಿನಂಜನಪುರ ಮಹದೇವಯ್ಯ, ಚಾಮರಾಜನಗರ ಮಣಿಕಂಠ ಹಾಗೂ ಕುಟುಂಬ ವರ್ಗ, ದಡದಹಳ್ಳಿ ಶಂಕರ್ ಬೌದ್ಧಧಮ್ಮ ದೀಕ್ಷೆ ಪಡೆದರು.

ಬೌದ್ಧದೀಕ್ಷಾ ಕಾರ್ಯಕ್ರಮ, ಬೌದ್ಧ ಪಠಣ, ಧ್ಯಾನ ಮತ್ತು ಪ್ರವಚನ ನಡೆಸಿಕೊಟ್ಟ ನಾಗಪುರ ಭಂತೇ ತಿಸ್ಸಾ ‘ಪಂಚಶೀಲ ತತ್ವ ಪಾಲಿಸಿ’ ಎಂದರು.

ಭಾರತೀಯ ಬೌದ್ಧ ಮಹಾಸಭಾದ ಜಿಲ್ಲಾ ಅಧ್ಯಕ್ಷ ಆರ್.ಬಸವರಾಜು, ಪದಾಧಿಕಾರಿಗಳು, ಜಿಲ್ಲೆಯ ವಿವಿಧ ಗ್ರಾಮಗಳಿಂದ ಬಂದಿದ್ದ ವಿವಿಧ ಸಮುದಾಯಗಳ ಬೌದ್ಧ ಉಪಾಸಕರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT