ಚಾಮರಾಜನಗರ: ದಿಗ್ಬಂಧನದ ಸಂದರ್ಭದಲ್ಲಿ ಅನಗತ್ಯವಾಗಿ ಜನರು ವಾಹನಗಳಲ್ಲಿ ಓಡಾಡುವುದನ್ನು ತಪ್ಪಿಸುವ ಉದ್ದೇಶದಿಂದ, ತುರ್ತು, ಅಗತ್ಯ ಸೇವೆಗಳ ಹಾಗೂ ಸರಕು ವಾಹನಗಳಿಗೆ ಮಾತ್ರ ಪೆಟ್ರೋಲ್, ಡೀಸೆಲ್ ಪೂರೈಸಬೇಕು ಎಂದು ಪೊಲೀಸರು ಪೆಟ್ರೋಲ್ ಬಂಕ್ ಮಾಲೀಕರಿಗೆ ಸೂಚನೆ ನೀಡಿದ ಬೆನ್ನಲ್ಲೇ, ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಮಂಗಳವಾರ ಹೊಸ ಆದೇಶ ಹೊರಡಿಸಿದ್ದು, ಎಲ್ಲ ವಾಹನಗಳಿಗೂ ಪೂರೈಸಬೇಕು ಎಂದು ಸೂಚಿಸಿದ್ದಾರೆ.