<p><strong>ಗುಂಡ್ಲುಪೇಟೆ:</strong> ಪೆಟ್ರೋಲ್ ಮತ್ತು ಡೀಸೆಲ್ ದರ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಕ್ರಮ ಖಂಡಿಸಿ ಬಿಜೆಪಿ ಮಂಡಲ ಕಾರ್ಯಕರ್ತರು ಪಟ್ಟಣದಲ್ಲಿ ಗುರುವಾರ ದ್ವಿಚಕ್ರ ವಾಹನವನ್ನು ಹಗ್ಗದಲ್ಲಿ ಎಳೆದು ಪ್ರತಿಭಟನೆ ನಡೆಸಿದರು.</p>.<p>ಪಟ್ಟಣದ ಹಳೆಬಸ್ ನಿಲ್ದಾಣದಿಂದ ಜಾಥಾ ಹೊರಟ ಬಿಜೆಪಿ ಮುಖಂಡರು, ಎಂಡಿಸಿಸಿ ಬ್ಯಾಂಕ್ ಮುಂಭಾಗ ಮಾನವ ಸರಪಳಿ ನಿರ್ಮಿಸಿದರು. ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.</p>.<p>ತಾಲ್ಲೂಕು ಕಚೇರಿ ಮುಂದೆ ಜಮಾವಣೆಗೊಂಡಾಗ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಎಸ್. ನಿರಂಜನಕುಮಾರ್ ಮಾತನಾಡಿ, ರಾಜ್ಯದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಹಣ ಸರಿದೂಗಿಸಲು ಆಗುತ್ತಿಲ್ಲ. ಬಹೀಗಾಗಿ ಪೆಟ್ರೋಲ್,ಡೀಸೆಲ್, ಅಬಕಾರಿ , ದಿನ ಬಳಕೆ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದೆ. ಜನರಿಗೆ ತೀವ್ರ ಹೊರೆಯಾಗುತ್ತಿದೆ ಒಬ್ಬರಿಂದ ಹಣ ಕಿತ್ತು ಮತ್ತೊಬ್ಬರಿಗೆ ಗ್ಯಾರಂಟಿ ಯೋಜನೆಯಲ್ಲಿ ನೀಡುತ್ತಿರುವ ಕ್ರಮ ಖಂಡನೀಯ ಎಂದರು.</p>.<p>ತಾಲ್ಲೂಕಿನಲ್ಲಿ ಕಾಂಗ್ರೆಸ್ ಶಾಸಕರು ಅಧಿಕಾರಕ್ಕೆ ಬಂದು ವರ್ಷ ಕಳೆದರೂ ಅಭಿವೃದ್ಧಿ ಶೂನ್ಯ. ಬಿಜೆಪಿ ಅವಧಿಯ ಕಾಮಗಾರಿಗಳಿಗೆ ಗುದ್ದಲಿಪೂಜೆ ಮಾಡುತ್ತಿದ್ದಾರೆ. ಮಡಹಳ್ಳಿ ರಸ್ತೆ ಹಾಗು ಕುಸಿದ ಚರಂಡಿ ದುರಸ್ತಿ ಆಗಿಲ್ಲ, ಕೆರೆಗಳಿಗೆ ನೀರು ತುಂಬಿಸಿಲ್ಲ. ಆಡಳಿತ ಯಂತ್ರ ನಿಷ್ಕ್ರಿಯವಾಗಿದೆ ಎಂದು ಕಿಡಿಕಾರಿದರು.</p>.<p>ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಅರಕಲವಾಡಿ ನಾಗೇಂದ್ರ ಮಾತನಾಡಿ, ಕಾಂಗ್ರೆಸ್ ನುಡಿದಂತೆ ನಡೆದ ಸರ್ಕಾರ ಆಗಿದ್ದರೆ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದರು.</p>.<p>ಬಿಜೆಪಿ ಮಂಡಲ ಅಧ್ಯಕ್ಷ ಮಹದೇವಪ್ರಸಾದ್, ಹಾಪ್ ಕಾಮ್ಸ್ ಜಿಲ್ಲಾಧ್ಯಕ್ಷ ಕುರುಬರಹುಂಡಿ ಲೋಕೇಶ್, ಜಿಲ್ಲಾ ಉಪಾಧ್ಯಕ್ಷ ಎನ್.ಮಲ್ಲೇಶ್, ಹಿರೀಕಾಟಿ ಸೋಮಶೇಖರ್, ಎಲ್.ಸುರೇಶ್, ಮಾಧ್ಯಮ ಸಂಚಾಲಕ ಶಿಂಡನಪುರ ಮಂಜುನಾಥ್, ನಾಗುಸ್ವಾಮಿ, ಹಂಗಳ ಪ್ರಣಯ್, ಶಿವಪುರ ನಮೋ ಮಂಜು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಂಡ್ಲುಪೇಟೆ:</strong> ಪೆಟ್ರೋಲ್ ಮತ್ತು ಡೀಸೆಲ್ ದರ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಕ್ರಮ ಖಂಡಿಸಿ ಬಿಜೆಪಿ ಮಂಡಲ ಕಾರ್ಯಕರ್ತರು ಪಟ್ಟಣದಲ್ಲಿ ಗುರುವಾರ ದ್ವಿಚಕ್ರ ವಾಹನವನ್ನು ಹಗ್ಗದಲ್ಲಿ ಎಳೆದು ಪ್ರತಿಭಟನೆ ನಡೆಸಿದರು.</p>.<p>ಪಟ್ಟಣದ ಹಳೆಬಸ್ ನಿಲ್ದಾಣದಿಂದ ಜಾಥಾ ಹೊರಟ ಬಿಜೆಪಿ ಮುಖಂಡರು, ಎಂಡಿಸಿಸಿ ಬ್ಯಾಂಕ್ ಮುಂಭಾಗ ಮಾನವ ಸರಪಳಿ ನಿರ್ಮಿಸಿದರು. ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.</p>.<p>ತಾಲ್ಲೂಕು ಕಚೇರಿ ಮುಂದೆ ಜಮಾವಣೆಗೊಂಡಾಗ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಎಸ್. ನಿರಂಜನಕುಮಾರ್ ಮಾತನಾಡಿ, ರಾಜ್ಯದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಹಣ ಸರಿದೂಗಿಸಲು ಆಗುತ್ತಿಲ್ಲ. ಬಹೀಗಾಗಿ ಪೆಟ್ರೋಲ್,ಡೀಸೆಲ್, ಅಬಕಾರಿ , ದಿನ ಬಳಕೆ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದೆ. ಜನರಿಗೆ ತೀವ್ರ ಹೊರೆಯಾಗುತ್ತಿದೆ ಒಬ್ಬರಿಂದ ಹಣ ಕಿತ್ತು ಮತ್ತೊಬ್ಬರಿಗೆ ಗ್ಯಾರಂಟಿ ಯೋಜನೆಯಲ್ಲಿ ನೀಡುತ್ತಿರುವ ಕ್ರಮ ಖಂಡನೀಯ ಎಂದರು.</p>.<p>ತಾಲ್ಲೂಕಿನಲ್ಲಿ ಕಾಂಗ್ರೆಸ್ ಶಾಸಕರು ಅಧಿಕಾರಕ್ಕೆ ಬಂದು ವರ್ಷ ಕಳೆದರೂ ಅಭಿವೃದ್ಧಿ ಶೂನ್ಯ. ಬಿಜೆಪಿ ಅವಧಿಯ ಕಾಮಗಾರಿಗಳಿಗೆ ಗುದ್ದಲಿಪೂಜೆ ಮಾಡುತ್ತಿದ್ದಾರೆ. ಮಡಹಳ್ಳಿ ರಸ್ತೆ ಹಾಗು ಕುಸಿದ ಚರಂಡಿ ದುರಸ್ತಿ ಆಗಿಲ್ಲ, ಕೆರೆಗಳಿಗೆ ನೀರು ತುಂಬಿಸಿಲ್ಲ. ಆಡಳಿತ ಯಂತ್ರ ನಿಷ್ಕ್ರಿಯವಾಗಿದೆ ಎಂದು ಕಿಡಿಕಾರಿದರು.</p>.<p>ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಅರಕಲವಾಡಿ ನಾಗೇಂದ್ರ ಮಾತನಾಡಿ, ಕಾಂಗ್ರೆಸ್ ನುಡಿದಂತೆ ನಡೆದ ಸರ್ಕಾರ ಆಗಿದ್ದರೆ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದರು.</p>.<p>ಬಿಜೆಪಿ ಮಂಡಲ ಅಧ್ಯಕ್ಷ ಮಹದೇವಪ್ರಸಾದ್, ಹಾಪ್ ಕಾಮ್ಸ್ ಜಿಲ್ಲಾಧ್ಯಕ್ಷ ಕುರುಬರಹುಂಡಿ ಲೋಕೇಶ್, ಜಿಲ್ಲಾ ಉಪಾಧ್ಯಕ್ಷ ಎನ್.ಮಲ್ಲೇಶ್, ಹಿರೀಕಾಟಿ ಸೋಮಶೇಖರ್, ಎಲ್.ಸುರೇಶ್, ಮಾಧ್ಯಮ ಸಂಚಾಲಕ ಶಿಂಡನಪುರ ಮಂಜುನಾಥ್, ನಾಗುಸ್ವಾಮಿ, ಹಂಗಳ ಪ್ರಣಯ್, ಶಿವಪುರ ನಮೋ ಮಂಜು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>