<p><strong>ಗುಂಡ್ಲುಪೇಟೆ: </strong>ತಾಲ್ಲೂಕಿನ ಹಂಗಳ ಗ್ರಾಮ ಪಂಚಾಯತಿಯು ಮೂರು ಬಾರಿ ಗಾಂಧಿ ಗ್ರಾಮ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಆದರೆ, ಸಮಸ್ಯೆಗಳಿಗೇನೂ ಕೊರತೆ ಇಲ್ಲ. ಹೆಜ್ಜೆ ಹೆಜ್ಜೆಗೂ ಸಮಸ್ಯೆಗಳು ಕಾಣುತ್ತವೆ. ಹಾಗಿದ್ದರೂ ಯಾವ ಆಧಾರದಲ್ಲಿ ಪಂಚಾಯಿತಿಗೆ ಪ್ರಶಸ್ತಿ ಸಿಕ್ಕಿದೆ ಎಂಬುದು ಜನರಿಗೆ ಅರ್ಥವಾಗುತ್ತಿಲ್ಲ.</p>.<p>ಗ್ರಾಮದಲ್ಲಿ ಕಸದ ಸಮಸ್ಯೆ, ಕುಡಿಯುವ ನೀರಿನ ಸಮಸ್ಯೆ, ಶೌಚಾಲಯದ ಸಮಸ್ಯೆಗಳಿದ್ದು, ಜನರು ತೊಂದರೆ ಅನುಭವಿಸುತ್ತಿದ್ದಾರೆ.</p>.<p>ಗ್ರಾಮ ಪಂಚಾಯಿತಿ ಕೇಂದ್ರದಲ್ಲಿ ಸುಮಾರು 8 ಸಾವಿರಕ್ಕೂ ಹೆಚ್ಚು ಜನರು ಇದ್ದಾರೆ. ಎಲ್ಲ ಜನಾಂಗದವರೂ ಇಲ್ಲಿ ಇದ್ದಾರೆ. ಲಿಂಗಾಯತರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಉಳಿದವರ ಸಂಖ್ಯೆ ಕಡಿಮೆ ಇದೆ.</p>.<p>ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಪ್ರವೇಶಿಸುತ್ತಿದ್ದಂತೆಯೇ ಜನರನ್ನು ಕಸ ಸ್ವಾಗತಿಸುತ್ತದೆ.ರಸ್ತೆ ಬದಿಯಲ್ಲಿ ಭಾರಿ ಪ್ರಮಾಣದಲ್ಲಿ ತ್ಯಾಜ್ಯ ಬಿದ್ದಿದ್ದರೂ ಅದನ್ನು ಸ್ವಚ್ಛ ಮಾಡಿಸುವ ಗೋಜಿಗೆ ಗ್ರಾಮ ಪಂಚಾಯಿತಿ ಹೋಗಿಲ್ಲ.</p>.<p>ಪರಿಶಿಷ್ಟ ಜಾತಿ ಮತ್ತು ವರ್ಗದವರು ವಾಸಿಸುತ್ತಿರುವ ಬಡಾವಣೆಗಳಲ್ಲಿ ನೀರಿನ ಸಮಸ್ಯೆ ಹೆಚ್ಚಾಗಿದೆ. ಇತ್ತೀಚೆಗೆ ಬಡಾವಣೆಗಳ ಮಹಿಳೆಯರು ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ನೀರು ಬಿಡಿಸಿಕೊಂಡಿದ್ದಾರೆ.</p>.<p>‘ಸಮರ್ಪಕವಾಗಿ ನೀರು ಬಿಡುತ್ತಿಲ್ಲ. ಕೆಲವೊಂದು ಬಡಾವಣೆಗಳಲ್ಲಿ ಮಾತ್ರ ಬಹುಗ್ರಾಮ ಕುಡಿಯುವ ಯೋಜನೆಯ ಸಂಪರ್ಕ ಇದೆ. ಬಡಾವಣೆಗಳ ಜನರಿಗೆ ಕೊಳವೆಬಾವಿಗಳಿಂದ ನೀರು ಬಿಡಲಾಗುತ್ತಿದೆ’ ಎಂದು ಸ್ಥಳೀಯ ನಿವಾಸಿ ಸಿದ್ದರಾಜು ಆರೋಪಿಸಿದರು.</p>.<p>ಸರ್ಕಾರಿ ದಾಖಲೆ ಪ್ರಕಾರ ಹಂಗಳ ಬಯಲು ಶೌಚ ಮುಕ್ತ ಗ್ರಾಮ. ಆದರೆ,ಅನೇಕ ಕುಟುಂಬಗಳು ಇನ್ನೂ ಶೌಚಾಲಯ ಹೊಂದಿಲ್ಲ. ಹಾಗಾಗಿ ಬಹಿರ್ದೆಸೆಗೆ ಬಯಲನ್ನೇ ಅವಲಂಬಿಸಿವೆ.</p>.<p>ಬೆಳಿಗ್ಗೆಯೇ ಗ್ರಾಮದಲ್ಲಿ ಮದ್ಯದಂಗಡಿ ತೆರೆಯುತ್ತದೆ. ಮದ್ಯದಂಗಡಿಗಳ ವಿರುದ್ಧ ಮಹಿಳೆಯರು ಹೋರಾಟ ಮಾಡಿದ ನಿದರ್ಶನಗಳೂ ಇವೆ. ಹಾಗಿದ್ದರೂ ಅಧಿಕಾರಿಗಳು ಇದರ ಬಗ್ಗೆ ಕ್ರಮ ಕೈಗೊಂಡಿಲ್ಲ.</p>.<p>‘ಅನೇಕರು ಮದ್ಯವನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದಾರೆ. ಪೊಲೀಸರು ಈ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರ ಇದ್ದರೂ ಇಲ್ಲದಂತಾಗಿದೆ. ಸಂಜೆಯಾಗುತ್ತಿದ್ದಂತೆ ಸಿಬ್ಬಂದಿ ಮನೆಗೆ ತೆರಳುತ್ತಾರೆ. ತುರ್ತು ಆರೋಗ್ಯ ಪರಿಸ್ಥಿತಿಯಲ್ಲಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯೇ ಗತಿ’ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸುತ್ತಾರೆ.</p>.<p>‘ಗ್ರಾಮದಲ್ಲಿ ಮೂಲಸೌಕರ್ಯ ಇಲ್ಲ, ಬಸ್ ನಿಲ್ದಾಣ, ಪೊಲೀಸ್ ಠಾಣೆ ಸೇರಿದಂತೆ ಅವಶ್ಯವಾಗಿ ಬೇಕಾಗಿರುವ ಸೌಕರ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು’ ಎಂದು ವಕೀಲ ರಾಜೇಶ್ ಒತ್ತಾಯಿಸುತ್ತಾರೆ.</p>.<p class="Briefhead"><strong>ಸೂಚನೆ ನೀಡಲಾಗಿದೆ: ಶಾಸಕ</strong></p>.<p>ಈ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಶಾಸಕ ಸಿ.ಎಸ್.ನಿರಂಜನ್ಕುಮಾರ್ ಅವರು, ಗ್ರಾಮದ ಜನರ ಸಮಸ್ಯೆಗಳನ್ನು ಆಲಿಸುವುದಕ್ಕಾಗಿ ಈಗಾಗಲೇ ಜನಸಂಪರ್ಕ ಸಭೆ ನಡೆಸಿದ್ದೇನೆ. ನೀರಿನ ಸಮಸ್ಯೆ ತಕ್ಷಣ ಸರಿಪಡಿಸುವಂತೆ ಮತ್ತು ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಎಲ್ಲ ಸಮಸ್ಯೆಗಳನ್ನು ಪರಿಹರಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಂಡ್ಲುಪೇಟೆ: </strong>ತಾಲ್ಲೂಕಿನ ಹಂಗಳ ಗ್ರಾಮ ಪಂಚಾಯತಿಯು ಮೂರು ಬಾರಿ ಗಾಂಧಿ ಗ್ರಾಮ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಆದರೆ, ಸಮಸ್ಯೆಗಳಿಗೇನೂ ಕೊರತೆ ಇಲ್ಲ. ಹೆಜ್ಜೆ ಹೆಜ್ಜೆಗೂ ಸಮಸ್ಯೆಗಳು ಕಾಣುತ್ತವೆ. ಹಾಗಿದ್ದರೂ ಯಾವ ಆಧಾರದಲ್ಲಿ ಪಂಚಾಯಿತಿಗೆ ಪ್ರಶಸ್ತಿ ಸಿಕ್ಕಿದೆ ಎಂಬುದು ಜನರಿಗೆ ಅರ್ಥವಾಗುತ್ತಿಲ್ಲ.</p>.<p>ಗ್ರಾಮದಲ್ಲಿ ಕಸದ ಸಮಸ್ಯೆ, ಕುಡಿಯುವ ನೀರಿನ ಸಮಸ್ಯೆ, ಶೌಚಾಲಯದ ಸಮಸ್ಯೆಗಳಿದ್ದು, ಜನರು ತೊಂದರೆ ಅನುಭವಿಸುತ್ತಿದ್ದಾರೆ.</p>.<p>ಗ್ರಾಮ ಪಂಚಾಯಿತಿ ಕೇಂದ್ರದಲ್ಲಿ ಸುಮಾರು 8 ಸಾವಿರಕ್ಕೂ ಹೆಚ್ಚು ಜನರು ಇದ್ದಾರೆ. ಎಲ್ಲ ಜನಾಂಗದವರೂ ಇಲ್ಲಿ ಇದ್ದಾರೆ. ಲಿಂಗಾಯತರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಉಳಿದವರ ಸಂಖ್ಯೆ ಕಡಿಮೆ ಇದೆ.</p>.<p>ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಪ್ರವೇಶಿಸುತ್ತಿದ್ದಂತೆಯೇ ಜನರನ್ನು ಕಸ ಸ್ವಾಗತಿಸುತ್ತದೆ.ರಸ್ತೆ ಬದಿಯಲ್ಲಿ ಭಾರಿ ಪ್ರಮಾಣದಲ್ಲಿ ತ್ಯಾಜ್ಯ ಬಿದ್ದಿದ್ದರೂ ಅದನ್ನು ಸ್ವಚ್ಛ ಮಾಡಿಸುವ ಗೋಜಿಗೆ ಗ್ರಾಮ ಪಂಚಾಯಿತಿ ಹೋಗಿಲ್ಲ.</p>.<p>ಪರಿಶಿಷ್ಟ ಜಾತಿ ಮತ್ತು ವರ್ಗದವರು ವಾಸಿಸುತ್ತಿರುವ ಬಡಾವಣೆಗಳಲ್ಲಿ ನೀರಿನ ಸಮಸ್ಯೆ ಹೆಚ್ಚಾಗಿದೆ. ಇತ್ತೀಚೆಗೆ ಬಡಾವಣೆಗಳ ಮಹಿಳೆಯರು ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ನೀರು ಬಿಡಿಸಿಕೊಂಡಿದ್ದಾರೆ.</p>.<p>‘ಸಮರ್ಪಕವಾಗಿ ನೀರು ಬಿಡುತ್ತಿಲ್ಲ. ಕೆಲವೊಂದು ಬಡಾವಣೆಗಳಲ್ಲಿ ಮಾತ್ರ ಬಹುಗ್ರಾಮ ಕುಡಿಯುವ ಯೋಜನೆಯ ಸಂಪರ್ಕ ಇದೆ. ಬಡಾವಣೆಗಳ ಜನರಿಗೆ ಕೊಳವೆಬಾವಿಗಳಿಂದ ನೀರು ಬಿಡಲಾಗುತ್ತಿದೆ’ ಎಂದು ಸ್ಥಳೀಯ ನಿವಾಸಿ ಸಿದ್ದರಾಜು ಆರೋಪಿಸಿದರು.</p>.<p>ಸರ್ಕಾರಿ ದಾಖಲೆ ಪ್ರಕಾರ ಹಂಗಳ ಬಯಲು ಶೌಚ ಮುಕ್ತ ಗ್ರಾಮ. ಆದರೆ,ಅನೇಕ ಕುಟುಂಬಗಳು ಇನ್ನೂ ಶೌಚಾಲಯ ಹೊಂದಿಲ್ಲ. ಹಾಗಾಗಿ ಬಹಿರ್ದೆಸೆಗೆ ಬಯಲನ್ನೇ ಅವಲಂಬಿಸಿವೆ.</p>.<p>ಬೆಳಿಗ್ಗೆಯೇ ಗ್ರಾಮದಲ್ಲಿ ಮದ್ಯದಂಗಡಿ ತೆರೆಯುತ್ತದೆ. ಮದ್ಯದಂಗಡಿಗಳ ವಿರುದ್ಧ ಮಹಿಳೆಯರು ಹೋರಾಟ ಮಾಡಿದ ನಿದರ್ಶನಗಳೂ ಇವೆ. ಹಾಗಿದ್ದರೂ ಅಧಿಕಾರಿಗಳು ಇದರ ಬಗ್ಗೆ ಕ್ರಮ ಕೈಗೊಂಡಿಲ್ಲ.</p>.<p>‘ಅನೇಕರು ಮದ್ಯವನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದಾರೆ. ಪೊಲೀಸರು ಈ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರ ಇದ್ದರೂ ಇಲ್ಲದಂತಾಗಿದೆ. ಸಂಜೆಯಾಗುತ್ತಿದ್ದಂತೆ ಸಿಬ್ಬಂದಿ ಮನೆಗೆ ತೆರಳುತ್ತಾರೆ. ತುರ್ತು ಆರೋಗ್ಯ ಪರಿಸ್ಥಿತಿಯಲ್ಲಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯೇ ಗತಿ’ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸುತ್ತಾರೆ.</p>.<p>‘ಗ್ರಾಮದಲ್ಲಿ ಮೂಲಸೌಕರ್ಯ ಇಲ್ಲ, ಬಸ್ ನಿಲ್ದಾಣ, ಪೊಲೀಸ್ ಠಾಣೆ ಸೇರಿದಂತೆ ಅವಶ್ಯವಾಗಿ ಬೇಕಾಗಿರುವ ಸೌಕರ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು’ ಎಂದು ವಕೀಲ ರಾಜೇಶ್ ಒತ್ತಾಯಿಸುತ್ತಾರೆ.</p>.<p class="Briefhead"><strong>ಸೂಚನೆ ನೀಡಲಾಗಿದೆ: ಶಾಸಕ</strong></p>.<p>ಈ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಶಾಸಕ ಸಿ.ಎಸ್.ನಿರಂಜನ್ಕುಮಾರ್ ಅವರು, ಗ್ರಾಮದ ಜನರ ಸಮಸ್ಯೆಗಳನ್ನು ಆಲಿಸುವುದಕ್ಕಾಗಿ ಈಗಾಗಲೇ ಜನಸಂಪರ್ಕ ಸಭೆ ನಡೆಸಿದ್ದೇನೆ. ನೀರಿನ ಸಮಸ್ಯೆ ತಕ್ಷಣ ಸರಿಪಡಿಸುವಂತೆ ಮತ್ತು ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಎಲ್ಲ ಸಮಸ್ಯೆಗಳನ್ನು ಪರಿಹರಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>